Homeಮುಖಪುಟಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

- Advertisement -
- Advertisement -

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ ಆಯ್ಕೆಯಾದ ಮುಖ್ಯಮಂತ್ರಿಯೊಬ್ಬರ ಅಧಿಕೃತ ಚಟುವಟಿಕೆಗಳನ್ನು ನಿಯಂತ್ರಿಸಲು ನ್ಯಾಯಾಂಗ ಮುಂದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, “ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಕೋರ್ಟ್ ಅನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಬಾರದು” ಎಂದು ತರಾಟೆಗೆ ತೆಗೆದುಕೊಂಡಿತಲ್ಲದೆ, ನ್ಯಾಯಾಲಯದ ಆಚೆಗಿನ ರಾಜಕೀಯ ಆಖಾಡದಲ್ಲಿಯೇ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವಂತೆ ವಿರೋಧ ಪಕ್ಷವಾದ ಡಿಎಂಕೆ ಗೆ ಸಲಹೆ ನೀಡಿದೆ.

ಕರೂರ್ ದುರಂತದಲ್ಲಿ ಮೃತಪಟ್ಟ 41 ಜನರ ಕುಟುಂಬಗಳನ್ನು ಖುದ್ದಾಗಿ ಭೇಟಿ ಮಾಡಿ, ಆರ್ಥಿಕ ನೆರವು ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡುವುದಾಗಿ ಮುಖ್ಯಮಂತ್ರಿ ವಿಜಯ್ ಘೋಷಿಸಿದ ಬೆನ್ನಲ್ಲೇ ಡಿಎಂಕೆ ಈ ಅರ್ಜಿಯನ್ನು ಸಲ್ಲಿಸಿತ್ತು.

ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ

ಡಿಎಂಕೆ ಅರ್ಜಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಪೀಠವು, ಮುಖ್ಯಮಂತ್ರಿಯವರ ಅಧಿಕೃತ ಕರ್ತವ್ಯ ಮತ್ತು ಪ್ರವಾಸಗಳನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಎಂದು ಹೇಳಿದೆ. ಅಲ್ಲದೆ, ನ್ಯಾಯಾಲಯವನ್ನು ರಾಜಕೀಯ ಜಟಾಪಟಿಯ ತಾಣವಾಗಿ ಪರಿವರ್ತಿಸಬೇಡಿ ಎಂದು ಡಿಎಂಕೆ ಪರ ವಕೀಲರಿಗೆ ಕಿವಿಮಾತು ಹೇಳಿದೆ. ದುರಂತಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕರು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದ್ದರೆ, ಅದಕ್ಕೆ ರಾಜಕೀಯವಾಗಿಯೇ ತಿರುಗೇಟು ನೀಡಲು ಡಿಎಂಕೆ ಮುಕ್ತವಾಗಿದೆ. ಅದನ್ನು ಬಿಟ್ಟು ನ್ಯಾಯಾಂಗದ ಹಸ್ತಕ್ಷೇಪ ಕೋರುವುದು ಸರಿಯಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ಟಿವಿಕೆ ಪಕ್ಷದ ಬೃಹತ್ ರ‍್ಯಾಲಿ ವೇಳೆ ನಡೆದ ಭೀಕರ ಅಪಘಾತದಲ್ಲಿ 41 ಜನರು ಜೀವ ಕಳೆದುಕೊಂಡಿದ್ದರು. ಈ ದುರಂತದ ತನಿಖೆ ಪ್ರಸ್ತುತ ನಡೆಯುತ್ತಿದ್ದು, ಈಗ ಮುಖ್ಯಮಂತ್ರಿ ವಿಜಯ್ ಅವರು ಅಲ್ಲಿಗೆ ಭೇಟಿ ನೀಡಿದರೆ ತನಿಖೆಯ ಹಾದಿ ತಪ್ಪಬಹುದು ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಹುದು ಎಂದು ಡಿಎಂಕೆ ತನ್ನ ಅರ್ಜಿಯಲ್ಲಿ ವಾದಿಸಿತ್ತು. ಹೀಗಾಗಿ ಮುಖ್ಯಮಂತ್ರಿಯವರು ಕರೂರ್‌ಗೆ ಭೇಟಿ ನೀಡಿ ಪರಿಹಾರ ವಿತರಿಸುವ ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ಕೋರಿತ್ತು. ಆದರೆ, ಇಂತಹ ವಿಷಯಗಳಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡುವ ಅಗತ್ಯವೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ನ್ಯಾಯಾಲಯದಿಂದ ಹಸಿರು ನಿಶಾನೆ ಸಿಕ್ಕಿರುವುದರಿಂದ ಮುಖ್ಯಮಂತ್ರಿ ವಿಜಯ್ ಅವರು ನಿಗದಿಯಂತೆ ಕರೂರ್‌ಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ, ದುರಂತದಲ್ಲಿ ಮಡಿದವರ ಪ್ರತಿ ಕುಟುಂಬಕ್ಕೆ ತಲಾ ₹10 ಲಕ್ಷ ರೂಪಾಯಿ ಪರಿಹಾರ ಧನ ವಿತರಿಸಲಾಗುವುದು. ಇದರೊಂದಿಗೆ ಸಂತ್ರಸ್ತ ಕುಟುಂಬದ ಒಬ್ಬರಿಗೆ ಅರ್ಹತೆಗೆ ತಕ್ಕಂತೆ ಸರ್ಕಾರಿ ಉದ್ಯೋಗ ನೀಡುವ ಮಹತ್ವದ ಪರಿಹಾರ ಯೋಜನೆಗೂ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...