Homeಮುಖಪುಟನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

- Advertisement -
- Advertisement -

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನಕ್ಕೆ ಒಪ್ಪಿಸುವ ತನ್ನ ಆದೇಶವನ್ನು ಹಿಂಪಡೆಯುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನವ್ಲಾಖಾ ಅವರ ಗೃಹಬಂಧನದ ಆದೇಶವನ್ನು ಹಿಂಪಡೆಯಲು ಕೋರಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಆರ್ಟಿಕಲ್ 14 ಎಲ್ಲರೂ ಸಮಾನರು ಎಂದು ಹೇಳುತ್ತಿದ್ದರೂ ಕೆಲವರು ಹೆಚ್ಚು ಸಮಾನರು ಎಂಬ ಸಂದೇಶವು ಹೊರಹೋಗುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹಬಂಧನದ ಆದೇಶ ನೀಡಿದ ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರು, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಬಯಸುವ ಎಲ್ಲಾ ಷರತ್ತುಗಳನ್ನು ಇಲ್ಲಿ ಸೇರಿಸಲಾಗಿದೆ. ಆ ಅರ್ಥದಲ್ಲಿ ಇದು ಒಪ್ಪಿಗೆಯ ಆದೇಶವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಎಎಸ್‌ಜಿ ರಾಜು, “ಇದು ಒಪ್ಪಿತ ಆದೇಶವಲ್ಲ” ಎಂದು ವಾದಿಸಿದ್ದಾರೆ.

ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿರುವ ಸ್ಥಳದಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ನವೆಂಬರ್ 10 ರಂದು ಸುಪ್ರೀಂ ಕೋರ್ಟ್‌ನ ತೀರ್ಪಿನ ಹೊರತಾಗಿಯೂ ನವ್ಲಾಖಾ ಅವರನ್ನು ಮುಂಬೈ ಸಮೀಪದ ತಲೋಜಾ ಜೈಲಿನಿಂದ ಸ್ಥಳಾಂತರಿಸಿರಲಿಲ್ಲ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಆರೋಪ ಎದುರಿಸುತ್ತಿರುವ ನವ್ಲಾಖಾ ಅವರು, ಮುಂಬೈನಲ್ಲಿ ತನ್ನ ಸಹೋದರಿ ಮೃದುಲಾ ಕೊಠಾರಿಯವರೊಂದಿಗೆ ಇರುವುದಾಗಿ ಆರಂಭದಲ್ಲಿ ಹೇಳಿದ್ದರು. ಆದರೆ ನವ್ಲಾಖಾ ಅವರು ಸಲ್ಲಿಸಿದ ವೈದ್ಯಕೀಯ ವರದಿಗೆ ಸಹಿ ಹಾಕಿರುವ ವೈದ್ಯರಲ್ಲಿ ಮೃದುಲಾ ಅವರ ಪತಿಯೂ ಇದ್ದಾರೆ ಎಂದು ಎನ್ಐಎ ಆಕ್ಷೇಪ ಎತ್ತಿತ್ತು. ಇದರ ನಂತರ, ನವ್ಲಾಖಾ ಅವರು ತಮ್ಮ ಪಾಲುದಾರರಾದ ಸಾಹ್ಬಾ ಹುಸೇನ್ ಅವರೊಂದಿಗೆ ಇರುವುದಾಗಿ ಹೇಳಿದರು. ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.

ಪ್ರಕರಣವು ಡಿಸೆಂಬರ್ 31, 2017ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳಿಗೆ ಸಂಬಂಧಿಸಿದೆ. ಈ ಭಾಷಣಗಳು ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿದವು ಎಂದು ಪೊಲೀಸರು ಆರೋಪಿಸಿದ್ದಾರೆ.

ನವ್ಲಾಖಾ ಅವರ ಆರೋಗ್ಯದ ದೃಷ್ಟಿಯಿಂದ ಗೃಹಬಂಧನದ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಅವರು ಈಗಾಗಲೇ ನ್ಯಾಯಾಲಯಕ್ಕೆ ಒದಗಿಸಿದ ವಿಳಾಸದಲ್ಲಿ ಮುಂಬೈನಲ್ಲಿ ಇರುತ್ತಾರೆ ಎಂದು ಅದು ನಿರ್ದೇಶಿಸಿದೆ. ಅವರನ್ನು ಅಲ್ಲಿಗೆ ಸ್ಥಳಾಂತರಿಸುವ ಮೊದಲು ಆವರಣವನ್ನು ಪರಿಶೀಲಿಸಲು ಎನ್‌ಐಎಗೆ ಅವಕಾಶ ಮಾಡಿಕೊಟ್ಟಿತು. ಸಿಸಿಟಿವಿ ಕಣ್ಗಾವಲು ಇರಲಿದೆ. ಫೋನ್ ಬಳಕೆಗೆ ನಿರ್ಬಂಧವಿದ್ದು, ಇಂಟರ್ನೆಟ್‌ ಬಳಸಬಾರದು ಎಂದು ಸೂಚಿಸಲಾಗಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ಜೈಲಿನಲ್ಲಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಕರಾರು ತೆಗೆದಿತ್ತು. ಗೌತಮ್‌ ಅವರು ಉಳಿಯಲು ಬಯಸಿದ ಸ್ಥಳದಲ್ಲಿ ಭದ್ರತಾ ಲೋಪವಿದೆ ಎಂದು ಆಕ್ಷೇಪ ಎತ್ತಿತ್ತು.

ಇದನ್ನೂ ಓದಿರಿ: ರಾಜ್ಯದ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೇಂದ್ರಕ್ಕೆ ಜಿಎಸ್‌ಟಿ ಪಾವತಿ ನಿಲ್ಲಿಸುತ್ತೇವೆ: ಮಮತಾ ಬ್ಯಾನರ್ಜಿ

ಸುಪ್ರೀಂ ಕೋರ್ಟ್ ನವೆಂಬರ್ 10ರಂದು ನವ್ಲಾಖಾ ಅವರನ್ನು ಒಂದು ತಿಂಗಳ ಕಾಲ ಗೃಹಬಂಧನದಲ್ಲಿಡಲು ಅನುಮತಿ ನೀಡಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಆಧಾರದ ಮೇಲೆ ಜೈಲಿನಿಂದ ಸ್ಥಳಾಂತರಿಸುವಂತೆ ಕೋರಿ ಅವರು ಸಲ್ಲಿಸಿದ ಮನವಿಗೆ ಕೋರ್ಟ್ ಒಪ್ಪಿತ್ತು.

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ. ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ 16 ಮಂದಿಯನ್ನು ಬಂಧಿಸಲಾಗಿದೆ.

ಇದರ ಹೊರತಾಗಿಯೂ ಎನ್‌ಐಎ ತಕರಾರು ತೆಗೆಯಿತು. ನವ್ಲಾಖಾ ಅವರು ಗೃಹಬಂಧನದಲ್ಲಿ ಉಳಿಯಲು ಸೂಚಿಸಿದ ಕಟ್ಟಡದಲ್ಲಿ ಒಳಹೋಗಲು ಮತ್ತು ಹೊರಬರಲು ಮೂರುಮೂರು ಪ್ರವೇಶಗಳನ್ನು ನೀಡಲಾಗಿದೆ. ಹೊರಗೆ ಹೋಗುವುದನ್ನು ದಾಖಲಿಸಲು ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ ನಂತರ ನವ್ಲಾಖಾ ಅವರನ್ನು ಬುಧವಾರ ಜೈಲಿನಿಂದ ಸ್ಥಳಾಂತರಿಸಲು ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಎನ್‌ಐಎ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, 70 ವರ್ಷ ವಯಸ್ಸಿನ ಗೌತಮ್ ನವ್ಲಾಖಾ ಅವರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಲು ಸಹಕಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...