Homeಮುಖಪುಟನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

- Advertisement -
- Advertisement -

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನಕ್ಕೆ ಒಪ್ಪಿಸುವ ತನ್ನ ಆದೇಶವನ್ನು ಹಿಂಪಡೆಯುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನವ್ಲಾಖಾ ಅವರ ಗೃಹಬಂಧನದ ಆದೇಶವನ್ನು ಹಿಂಪಡೆಯಲು ಕೋರಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಆರ್ಟಿಕಲ್ 14 ಎಲ್ಲರೂ ಸಮಾನರು ಎಂದು ಹೇಳುತ್ತಿದ್ದರೂ ಕೆಲವರು ಹೆಚ್ಚು ಸಮಾನರು ಎಂಬ ಸಂದೇಶವು ಹೊರಹೋಗುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹಬಂಧನದ ಆದೇಶ ನೀಡಿದ ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರು, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಬಯಸುವ ಎಲ್ಲಾ ಷರತ್ತುಗಳನ್ನು ಇಲ್ಲಿ ಸೇರಿಸಲಾಗಿದೆ. ಆ ಅರ್ಥದಲ್ಲಿ ಇದು ಒಪ್ಪಿಗೆಯ ಆದೇಶವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಎಎಸ್‌ಜಿ ರಾಜು, “ಇದು ಒಪ್ಪಿತ ಆದೇಶವಲ್ಲ” ಎಂದು ವಾದಿಸಿದ್ದಾರೆ.

ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿರುವ ಸ್ಥಳದಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ನವೆಂಬರ್ 10 ರಂದು ಸುಪ್ರೀಂ ಕೋರ್ಟ್‌ನ ತೀರ್ಪಿನ ಹೊರತಾಗಿಯೂ ನವ್ಲಾಖಾ ಅವರನ್ನು ಮುಂಬೈ ಸಮೀಪದ ತಲೋಜಾ ಜೈಲಿನಿಂದ ಸ್ಥಳಾಂತರಿಸಿರಲಿಲ್ಲ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಆರೋಪ ಎದುರಿಸುತ್ತಿರುವ ನವ್ಲಾಖಾ ಅವರು, ಮುಂಬೈನಲ್ಲಿ ತನ್ನ ಸಹೋದರಿ ಮೃದುಲಾ ಕೊಠಾರಿಯವರೊಂದಿಗೆ ಇರುವುದಾಗಿ ಆರಂಭದಲ್ಲಿ ಹೇಳಿದ್ದರು. ಆದರೆ ನವ್ಲಾಖಾ ಅವರು ಸಲ್ಲಿಸಿದ ವೈದ್ಯಕೀಯ ವರದಿಗೆ ಸಹಿ ಹಾಕಿರುವ ವೈದ್ಯರಲ್ಲಿ ಮೃದುಲಾ ಅವರ ಪತಿಯೂ ಇದ್ದಾರೆ ಎಂದು ಎನ್ಐಎ ಆಕ್ಷೇಪ ಎತ್ತಿತ್ತು. ಇದರ ನಂತರ, ನವ್ಲಾಖಾ ಅವರು ತಮ್ಮ ಪಾಲುದಾರರಾದ ಸಾಹ್ಬಾ ಹುಸೇನ್ ಅವರೊಂದಿಗೆ ಇರುವುದಾಗಿ ಹೇಳಿದರು. ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.

ಪ್ರಕರಣವು ಡಿಸೆಂಬರ್ 31, 2017ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳಿಗೆ ಸಂಬಂಧಿಸಿದೆ. ಈ ಭಾಷಣಗಳು ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿದವು ಎಂದು ಪೊಲೀಸರು ಆರೋಪಿಸಿದ್ದಾರೆ.

ನವ್ಲಾಖಾ ಅವರ ಆರೋಗ್ಯದ ದೃಷ್ಟಿಯಿಂದ ಗೃಹಬಂಧನದ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಅವರು ಈಗಾಗಲೇ ನ್ಯಾಯಾಲಯಕ್ಕೆ ಒದಗಿಸಿದ ವಿಳಾಸದಲ್ಲಿ ಮುಂಬೈನಲ್ಲಿ ಇರುತ್ತಾರೆ ಎಂದು ಅದು ನಿರ್ದೇಶಿಸಿದೆ. ಅವರನ್ನು ಅಲ್ಲಿಗೆ ಸ್ಥಳಾಂತರಿಸುವ ಮೊದಲು ಆವರಣವನ್ನು ಪರಿಶೀಲಿಸಲು ಎನ್‌ಐಎಗೆ ಅವಕಾಶ ಮಾಡಿಕೊಟ್ಟಿತು. ಸಿಸಿಟಿವಿ ಕಣ್ಗಾವಲು ಇರಲಿದೆ. ಫೋನ್ ಬಳಕೆಗೆ ನಿರ್ಬಂಧವಿದ್ದು, ಇಂಟರ್ನೆಟ್‌ ಬಳಸಬಾರದು ಎಂದು ಸೂಚಿಸಲಾಗಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ಜೈಲಿನಲ್ಲಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಕರಾರು ತೆಗೆದಿತ್ತು. ಗೌತಮ್‌ ಅವರು ಉಳಿಯಲು ಬಯಸಿದ ಸ್ಥಳದಲ್ಲಿ ಭದ್ರತಾ ಲೋಪವಿದೆ ಎಂದು ಆಕ್ಷೇಪ ಎತ್ತಿತ್ತು.

ಇದನ್ನೂ ಓದಿರಿ: ರಾಜ್ಯದ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೇಂದ್ರಕ್ಕೆ ಜಿಎಸ್‌ಟಿ ಪಾವತಿ ನಿಲ್ಲಿಸುತ್ತೇವೆ: ಮಮತಾ ಬ್ಯಾನರ್ಜಿ

ಸುಪ್ರೀಂ ಕೋರ್ಟ್ ನವೆಂಬರ್ 10ರಂದು ನವ್ಲಾಖಾ ಅವರನ್ನು ಒಂದು ತಿಂಗಳ ಕಾಲ ಗೃಹಬಂಧನದಲ್ಲಿಡಲು ಅನುಮತಿ ನೀಡಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಆಧಾರದ ಮೇಲೆ ಜೈಲಿನಿಂದ ಸ್ಥಳಾಂತರಿಸುವಂತೆ ಕೋರಿ ಅವರು ಸಲ್ಲಿಸಿದ ಮನವಿಗೆ ಕೋರ್ಟ್ ಒಪ್ಪಿತ್ತು.

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ. ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ 16 ಮಂದಿಯನ್ನು ಬಂಧಿಸಲಾಗಿದೆ.

ಇದರ ಹೊರತಾಗಿಯೂ ಎನ್‌ಐಎ ತಕರಾರು ತೆಗೆಯಿತು. ನವ್ಲಾಖಾ ಅವರು ಗೃಹಬಂಧನದಲ್ಲಿ ಉಳಿಯಲು ಸೂಚಿಸಿದ ಕಟ್ಟಡದಲ್ಲಿ ಒಳಹೋಗಲು ಮತ್ತು ಹೊರಬರಲು ಮೂರುಮೂರು ಪ್ರವೇಶಗಳನ್ನು ನೀಡಲಾಗಿದೆ. ಹೊರಗೆ ಹೋಗುವುದನ್ನು ದಾಖಲಿಸಲು ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ ನಂತರ ನವ್ಲಾಖಾ ಅವರನ್ನು ಬುಧವಾರ ಜೈಲಿನಿಂದ ಸ್ಥಳಾಂತರಿಸಲು ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಎನ್‌ಐಎ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, 70 ವರ್ಷ ವಯಸ್ಸಿನ ಗೌತಮ್ ನವ್ಲಾಖಾ ಅವರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಲು ಸಹಕಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...