Homeಮುಖಪುಟನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

- Advertisement -
- Advertisement -

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನಕ್ಕೆ ಒಪ್ಪಿಸುವ ತನ್ನ ಆದೇಶವನ್ನು ಹಿಂಪಡೆಯುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನವ್ಲಾಖಾ ಅವರ ಗೃಹಬಂಧನದ ಆದೇಶವನ್ನು ಹಿಂಪಡೆಯಲು ಕೋರಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಆರ್ಟಿಕಲ್ 14 ಎಲ್ಲರೂ ಸಮಾನರು ಎಂದು ಹೇಳುತ್ತಿದ್ದರೂ ಕೆಲವರು ಹೆಚ್ಚು ಸಮಾನರು ಎಂಬ ಸಂದೇಶವು ಹೊರಹೋಗುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹಬಂಧನದ ಆದೇಶ ನೀಡಿದ ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರು, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಬಯಸುವ ಎಲ್ಲಾ ಷರತ್ತುಗಳನ್ನು ಇಲ್ಲಿ ಸೇರಿಸಲಾಗಿದೆ. ಆ ಅರ್ಥದಲ್ಲಿ ಇದು ಒಪ್ಪಿಗೆಯ ಆದೇಶವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಎಎಸ್‌ಜಿ ರಾಜು, “ಇದು ಒಪ್ಪಿತ ಆದೇಶವಲ್ಲ” ಎಂದು ವಾದಿಸಿದ್ದಾರೆ.

ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿರುವ ಸ್ಥಳದಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ನವೆಂಬರ್ 10 ರಂದು ಸುಪ್ರೀಂ ಕೋರ್ಟ್‌ನ ತೀರ್ಪಿನ ಹೊರತಾಗಿಯೂ ನವ್ಲಾಖಾ ಅವರನ್ನು ಮುಂಬೈ ಸಮೀಪದ ತಲೋಜಾ ಜೈಲಿನಿಂದ ಸ್ಥಳಾಂತರಿಸಿರಲಿಲ್ಲ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಆರೋಪ ಎದುರಿಸುತ್ತಿರುವ ನವ್ಲಾಖಾ ಅವರು, ಮುಂಬೈನಲ್ಲಿ ತನ್ನ ಸಹೋದರಿ ಮೃದುಲಾ ಕೊಠಾರಿಯವರೊಂದಿಗೆ ಇರುವುದಾಗಿ ಆರಂಭದಲ್ಲಿ ಹೇಳಿದ್ದರು. ಆದರೆ ನವ್ಲಾಖಾ ಅವರು ಸಲ್ಲಿಸಿದ ವೈದ್ಯಕೀಯ ವರದಿಗೆ ಸಹಿ ಹಾಕಿರುವ ವೈದ್ಯರಲ್ಲಿ ಮೃದುಲಾ ಅವರ ಪತಿಯೂ ಇದ್ದಾರೆ ಎಂದು ಎನ್ಐಎ ಆಕ್ಷೇಪ ಎತ್ತಿತ್ತು. ಇದರ ನಂತರ, ನವ್ಲಾಖಾ ಅವರು ತಮ್ಮ ಪಾಲುದಾರರಾದ ಸಾಹ್ಬಾ ಹುಸೇನ್ ಅವರೊಂದಿಗೆ ಇರುವುದಾಗಿ ಹೇಳಿದರು. ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.

ಪ್ರಕರಣವು ಡಿಸೆಂಬರ್ 31, 2017ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳಿಗೆ ಸಂಬಂಧಿಸಿದೆ. ಈ ಭಾಷಣಗಳು ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿದವು ಎಂದು ಪೊಲೀಸರು ಆರೋಪಿಸಿದ್ದಾರೆ.

ನವ್ಲಾಖಾ ಅವರ ಆರೋಗ್ಯದ ದೃಷ್ಟಿಯಿಂದ ಗೃಹಬಂಧನದ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಅವರು ಈಗಾಗಲೇ ನ್ಯಾಯಾಲಯಕ್ಕೆ ಒದಗಿಸಿದ ವಿಳಾಸದಲ್ಲಿ ಮುಂಬೈನಲ್ಲಿ ಇರುತ್ತಾರೆ ಎಂದು ಅದು ನಿರ್ದೇಶಿಸಿದೆ. ಅವರನ್ನು ಅಲ್ಲಿಗೆ ಸ್ಥಳಾಂತರಿಸುವ ಮೊದಲು ಆವರಣವನ್ನು ಪರಿಶೀಲಿಸಲು ಎನ್‌ಐಎಗೆ ಅವಕಾಶ ಮಾಡಿಕೊಟ್ಟಿತು. ಸಿಸಿಟಿವಿ ಕಣ್ಗಾವಲು ಇರಲಿದೆ. ಫೋನ್ ಬಳಕೆಗೆ ನಿರ್ಬಂಧವಿದ್ದು, ಇಂಟರ್ನೆಟ್‌ ಬಳಸಬಾರದು ಎಂದು ಸೂಚಿಸಲಾಗಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ಜೈಲಿನಲ್ಲಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಕರಾರು ತೆಗೆದಿತ್ತು. ಗೌತಮ್‌ ಅವರು ಉಳಿಯಲು ಬಯಸಿದ ಸ್ಥಳದಲ್ಲಿ ಭದ್ರತಾ ಲೋಪವಿದೆ ಎಂದು ಆಕ್ಷೇಪ ಎತ್ತಿತ್ತು.

ಇದನ್ನೂ ಓದಿರಿ: ರಾಜ್ಯದ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೇಂದ್ರಕ್ಕೆ ಜಿಎಸ್‌ಟಿ ಪಾವತಿ ನಿಲ್ಲಿಸುತ್ತೇವೆ: ಮಮತಾ ಬ್ಯಾನರ್ಜಿ

ಸುಪ್ರೀಂ ಕೋರ್ಟ್ ನವೆಂಬರ್ 10ರಂದು ನವ್ಲಾಖಾ ಅವರನ್ನು ಒಂದು ತಿಂಗಳ ಕಾಲ ಗೃಹಬಂಧನದಲ್ಲಿಡಲು ಅನುಮತಿ ನೀಡಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಆಧಾರದ ಮೇಲೆ ಜೈಲಿನಿಂದ ಸ್ಥಳಾಂತರಿಸುವಂತೆ ಕೋರಿ ಅವರು ಸಲ್ಲಿಸಿದ ಮನವಿಗೆ ಕೋರ್ಟ್ ಒಪ್ಪಿತ್ತು.

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ. ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ 16 ಮಂದಿಯನ್ನು ಬಂಧಿಸಲಾಗಿದೆ.

ಇದರ ಹೊರತಾಗಿಯೂ ಎನ್‌ಐಎ ತಕರಾರು ತೆಗೆಯಿತು. ನವ್ಲಾಖಾ ಅವರು ಗೃಹಬಂಧನದಲ್ಲಿ ಉಳಿಯಲು ಸೂಚಿಸಿದ ಕಟ್ಟಡದಲ್ಲಿ ಒಳಹೋಗಲು ಮತ್ತು ಹೊರಬರಲು ಮೂರುಮೂರು ಪ್ರವೇಶಗಳನ್ನು ನೀಡಲಾಗಿದೆ. ಹೊರಗೆ ಹೋಗುವುದನ್ನು ದಾಖಲಿಸಲು ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ ನಂತರ ನವ್ಲಾಖಾ ಅವರನ್ನು ಬುಧವಾರ ಜೈಲಿನಿಂದ ಸ್ಥಳಾಂತರಿಸಲು ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಎನ್‌ಐಎ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, 70 ವರ್ಷ ವಯಸ್ಸಿನ ಗೌತಮ್ ನವ್ಲಾಖಾ ಅವರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಲು ಸಹಕಾರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...