Homeಮುಖಪುಟನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

- Advertisement -
- Advertisement -

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನಕ್ಕೆ ಒಪ್ಪಿಸುವ ತನ್ನ ಆದೇಶವನ್ನು ಹಿಂಪಡೆಯುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನವ್ಲಾಖಾ ಅವರ ಗೃಹಬಂಧನದ ಆದೇಶವನ್ನು ಹಿಂಪಡೆಯಲು ಕೋರಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಆರ್ಟಿಕಲ್ 14 ಎಲ್ಲರೂ ಸಮಾನರು ಎಂದು ಹೇಳುತ್ತಿದ್ದರೂ ಕೆಲವರು ಹೆಚ್ಚು ಸಮಾನರು ಎಂಬ ಸಂದೇಶವು ಹೊರಹೋಗುತ್ತದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹಬಂಧನದ ಆದೇಶ ನೀಡಿದ ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರು, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಬಯಸುವ ಎಲ್ಲಾ ಷರತ್ತುಗಳನ್ನು ಇಲ್ಲಿ ಸೇರಿಸಲಾಗಿದೆ. ಆ ಅರ್ಥದಲ್ಲಿ ಇದು ಒಪ್ಪಿಗೆಯ ಆದೇಶವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಎಎಸ್‌ಜಿ ರಾಜು, “ಇದು ಒಪ್ಪಿತ ಆದೇಶವಲ್ಲ” ಎಂದು ವಾದಿಸಿದ್ದಾರೆ.

ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿರುವ ಸ್ಥಳದಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ನವೆಂಬರ್ 10 ರಂದು ಸುಪ್ರೀಂ ಕೋರ್ಟ್‌ನ ತೀರ್ಪಿನ ಹೊರತಾಗಿಯೂ ನವ್ಲಾಖಾ ಅವರನ್ನು ಮುಂಬೈ ಸಮೀಪದ ತಲೋಜಾ ಜೈಲಿನಿಂದ ಸ್ಥಳಾಂತರಿಸಿರಲಿಲ್ಲ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಆರೋಪ ಎದುರಿಸುತ್ತಿರುವ ನವ್ಲಾಖಾ ಅವರು, ಮುಂಬೈನಲ್ಲಿ ತನ್ನ ಸಹೋದರಿ ಮೃದುಲಾ ಕೊಠಾರಿಯವರೊಂದಿಗೆ ಇರುವುದಾಗಿ ಆರಂಭದಲ್ಲಿ ಹೇಳಿದ್ದರು. ಆದರೆ ನವ್ಲಾಖಾ ಅವರು ಸಲ್ಲಿಸಿದ ವೈದ್ಯಕೀಯ ವರದಿಗೆ ಸಹಿ ಹಾಕಿರುವ ವೈದ್ಯರಲ್ಲಿ ಮೃದುಲಾ ಅವರ ಪತಿಯೂ ಇದ್ದಾರೆ ಎಂದು ಎನ್ಐಎ ಆಕ್ಷೇಪ ಎತ್ತಿತ್ತು. ಇದರ ನಂತರ, ನವ್ಲಾಖಾ ಅವರು ತಮ್ಮ ಪಾಲುದಾರರಾದ ಸಾಹ್ಬಾ ಹುಸೇನ್ ಅವರೊಂದಿಗೆ ಇರುವುದಾಗಿ ಹೇಳಿದರು. ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.

ಪ್ರಕರಣವು ಡಿಸೆಂಬರ್ 31, 2017ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳಿಗೆ ಸಂಬಂಧಿಸಿದೆ. ಈ ಭಾಷಣಗಳು ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿದವು ಎಂದು ಪೊಲೀಸರು ಆರೋಪಿಸಿದ್ದಾರೆ.

ನವ್ಲಾಖಾ ಅವರ ಆರೋಗ್ಯದ ದೃಷ್ಟಿಯಿಂದ ಗೃಹಬಂಧನದ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಅವರು ಈಗಾಗಲೇ ನ್ಯಾಯಾಲಯಕ್ಕೆ ಒದಗಿಸಿದ ವಿಳಾಸದಲ್ಲಿ ಮುಂಬೈನಲ್ಲಿ ಇರುತ್ತಾರೆ ಎಂದು ಅದು ನಿರ್ದೇಶಿಸಿದೆ. ಅವರನ್ನು ಅಲ್ಲಿಗೆ ಸ್ಥಳಾಂತರಿಸುವ ಮೊದಲು ಆವರಣವನ್ನು ಪರಿಶೀಲಿಸಲು ಎನ್‌ಐಎಗೆ ಅವಕಾಶ ಮಾಡಿಕೊಟ್ಟಿತು. ಸಿಸಿಟಿವಿ ಕಣ್ಗಾವಲು ಇರಲಿದೆ. ಫೋನ್ ಬಳಕೆಗೆ ನಿರ್ಬಂಧವಿದ್ದು, ಇಂಟರ್ನೆಟ್‌ ಬಳಸಬಾರದು ಎಂದು ಸೂಚಿಸಲಾಗಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ಜೈಲಿನಲ್ಲಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಕರಾರು ತೆಗೆದಿತ್ತು. ಗೌತಮ್‌ ಅವರು ಉಳಿಯಲು ಬಯಸಿದ ಸ್ಥಳದಲ್ಲಿ ಭದ್ರತಾ ಲೋಪವಿದೆ ಎಂದು ಆಕ್ಷೇಪ ಎತ್ತಿತ್ತು.

ಇದನ್ನೂ ಓದಿರಿ: ರಾಜ್ಯದ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೇಂದ್ರಕ್ಕೆ ಜಿಎಸ್‌ಟಿ ಪಾವತಿ ನಿಲ್ಲಿಸುತ್ತೇವೆ: ಮಮತಾ ಬ್ಯಾನರ್ಜಿ

ಸುಪ್ರೀಂ ಕೋರ್ಟ್ ನವೆಂಬರ್ 10ರಂದು ನವ್ಲಾಖಾ ಅವರನ್ನು ಒಂದು ತಿಂಗಳ ಕಾಲ ಗೃಹಬಂಧನದಲ್ಲಿಡಲು ಅನುಮತಿ ನೀಡಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಆಧಾರದ ಮೇಲೆ ಜೈಲಿನಿಂದ ಸ್ಥಳಾಂತರಿಸುವಂತೆ ಕೋರಿ ಅವರು ಸಲ್ಲಿಸಿದ ಮನವಿಗೆ ಕೋರ್ಟ್ ಒಪ್ಪಿತ್ತು.

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ. ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ 16 ಮಂದಿಯನ್ನು ಬಂಧಿಸಲಾಗಿದೆ.

ಇದರ ಹೊರತಾಗಿಯೂ ಎನ್‌ಐಎ ತಕರಾರು ತೆಗೆಯಿತು. ನವ್ಲಾಖಾ ಅವರು ಗೃಹಬಂಧನದಲ್ಲಿ ಉಳಿಯಲು ಸೂಚಿಸಿದ ಕಟ್ಟಡದಲ್ಲಿ ಒಳಹೋಗಲು ಮತ್ತು ಹೊರಬರಲು ಮೂರುಮೂರು ಪ್ರವೇಶಗಳನ್ನು ನೀಡಲಾಗಿದೆ. ಹೊರಗೆ ಹೋಗುವುದನ್ನು ದಾಖಲಿಸಲು ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ ನಂತರ ನವ್ಲಾಖಾ ಅವರನ್ನು ಬುಧವಾರ ಜೈಲಿನಿಂದ ಸ್ಥಳಾಂತರಿಸಲು ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಎನ್‌ಐಎ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, 70 ವರ್ಷ ವಯಸ್ಸಿನ ಗೌತಮ್ ನವ್ಲಾಖಾ ಅವರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಲು ಸಹಕಾರಿಯಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ...

0
"ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ...