Homeಮುಖಪುಟಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ ‘ಮದರ್ ಮೇರಿ ಕಮ್ಸ್ ಟು ಮಿ’ ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು ಪ್ರಚಾರ ಮಾಡಿಲ್ಲ ಅಥವಾ ಜಾಹೀರಾತು ಮಾಡಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು, “ನಿಜವಾದ ಸಾರ್ವಜನಿಕ ಕಾಳಜಿಯ ವಿಷಯಕ್ಕಿಂತ ಸ್ವಯಂ ಪ್ರಚಾರವನ್ನು ಗಳಿಸುವ ಪ್ರಯತ್ನ’ ಎಂದು ಪರಿಗಣಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಪುಸ್ತಕ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂದೆ ವಜಾಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ಸವಾಲನ್ನು ಪರಿಗಣಿಸಿತು. ಪುಸ್ತಕದ ಮುಖಪುಟ ಚಿತ್ರವು ಅದನ್ನು ಸ್ವಇಚ್ಛೆಯಿಂದ ಖರೀದಿಸಿದ ಓದುಗರಿಗೆ ಮಾತ್ರ ಸೀಮಿತವಾಗಿರುವುದರಿಂದ ಮತ್ತು ಸಾರ್ವಜನಿಕ ಪ್ರಚಾರದ ಯಾವುದೇ ಅಂಶವನ್ನು ಹೊಂದಿರದ ಕಾರಣ, ಹೈಕೋರ್ಟ್‌ನ ಹಿಂದಿನ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಆಧಾರವಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಆಗಸ್ಟ್ 28 ರಂದು ಪುಸ್ತಕ ಬಿಡುಗಡೆಯಾದ ನಂತರ, ವಕೀಲರೊಬ್ಬರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮುಖಪುಟದ ಫೋಟೋ 2003 ರ ಸಿಗರೇಟ್, ಇತರ ತಂಬಾಕು ಉತ್ಪನ್ನಗಳ ಕಾಯ್ದೆ ಮತ್ತು 2008 ರ ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿ, ಧೂಮಪಾನದ ಚಿತ್ರಣಗಳು ಗೋಚರಿಸುವ ಆರೋಗ್ಯ ಎಚ್ಚರಿಕೆಗಳನ್ನು ಹೊಂದಿರಬೇಕು ಎಂದು ಅರ್ಜಿ ಸಲ್ಲಿಸುವ ಮೂಲಕ ವಿವಾದ ಪ್ರಾರಂಭವಾಯಿತು.

ಮುಖಪುಟದಲ್ಲಿ, ತಂಬಾಕು ಬಳಕೆಯ ಕುರತ ಎಚ್ಚರಿಕೆಗಳ ಅನುಪಸ್ಥಿತಿಯು ಆ ಉತ್ಪನ್ನಗಳ ಪರೋಕ್ಷ ಜಾಹೀರಾತಿಗೆ ಸಮನಾಗಿರುತ್ತದೆ. ಆದ್ದರಿಂದ, ಧೂಮಪಾನ ಸಂಬಂಧಿತ ಪ್ರಚಾರವನ್ನು ತಡೆಯಲು ಉದ್ದೇಶಿಸಲಾದ ಶಾಸನಬದ್ಧ ಚೌಕಟ್ಟನ್ನು ಉಲ್ಲಂಘಿಸುತ್ತದೆ ಎಂದು ಅವರು ವಾದಿಸಿದರು.

ಅರ್ಜಿದಾರರು, ‘ಪೆಂಗ್ವಿನ್ ಇಂಡಿಯಾ’ದಿಂದ ಹಿಂಬದಿಯ ಮುಖಪುಟದಲ್ಲಿ ಮುದ್ರಿಸಲಾದ ಹಕ್ಕು ನಿರಾಕರಣೆಯ ಉಲ್ಲೇಖ ಸಂಬಂಧಿತ ಸಂಗತಿಗಳನ್ನು ನಿರ್ಲಕ್ಷ್ಯಿಸಿದ್ದರಿಂದ, ಸಾರ್ವಜನಿಕ ಹಿತಾಸಕ್ತಿಗಿಂತ ವೈಯಕ್ತಿಕ ಪ್ರಚಾರದಿಂದ ಈ ಅರ್ಜಿಯು ಪ್ರೇರಿತವಾಗಿದೆ ಎಂದು ಗಮನಿಸಿ, ಅಕ್ಟೋಬರ್ 13 ರಂದು ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು.

ಅರುಂತಿ ರಾಯ್ ಅವರು ಪ್ರಸಿದ್ಧ ಸಾಹಿತಿಯಾಗಿದ್ದು, ಅವರ ಬರವಣಿಗೆ ಅಥವಾ ಪ್ರಕಾಶಕರ ನಡವಳಿಕೆಯು ಧೂಮಪಾನವನ್ನು ಪ್ರೋತ್ಸಾಹಿಸುವ ಯಾವುದೇ ಪ್ರಯತ್ನವನ್ನು ಸೂಚಿಸುವುದಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಸಾರ್ವಜನಿಕರ ಮೇಲೆ ಪ್ರಭಾವ ಬೀರುವ ಅಥವಾ ಹೊಸ ಧೂಮಪಾನಿಗಳನ್ನು ಆಕರ್ಷಿಸುವ ದೊಡ್ಡ ಪ್ರಮಾಣದ ಹೊರಾಂಗಣ ಜಾಹೀರಾತುಗಳ ಮೂಲಕ ಪುಸ್ತಕವನ್ನು ಮಾರಾಟ ಮಾಡಲಾಗುತ್ತಿಲ್ಲ ಎಂದು ಒತ್ತಿ ಹೇಳಿದೆ. ಏಕೆಂದರೆ, ಪುಸ್ತಕದ ಮುಖಪುಟವನ್ನು ಅದರ ವಿಷಯ ಮತ್ತು ಲೇಖಕರ ಖ್ಯಾತಿಯ ಆಧಾರದ ಮೇಲೆ ಖರೀದಿಸಲು ಆಯ್ಕೆ ಮಾಡಿದವರು ಮಾತ್ರ ವೀಕ್ಷಿಸಬಹುದು ಎಂದು ಹೇಳಿದೆ.

ಪಿಐಎಲ್‌ನಲ್ಲಿ ಯಾವುದೇ ಸತ್ವವಿಲ್ಲ, ಹೈಕೋರ್ಟ್ ಅದನ್ನು ವಜಾಗೊಳಿಸುವಲ್ಲಿ ಸರಿಯಾಗಿ ಕಾರ್ಯನಿರ್ವಹಿಸಿದೆ ಎಂದು ತೀರ್ಮಾನಿಸಿದ ಸುಪ್ರೀಂ ಕೋರ್ಟ್, ನಾವು ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಕಂಡುಕೊಂಡಿತು. ಹೈಕೋರ್ಟ್‌ನ ಆದೇಶವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...