Homeಮುಖಪುಟಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ ‘ಮದರ್ ಮೇರಿ ಕಮ್ಸ್ ಟು ಮಿ’ ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು ಪ್ರಚಾರ ಮಾಡಿಲ್ಲ ಅಥವಾ ಜಾಹೀರಾತು ಮಾಡಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು, “ನಿಜವಾದ ಸಾರ್ವಜನಿಕ ಕಾಳಜಿಯ ವಿಷಯಕ್ಕಿಂತ ಸ್ವಯಂ ಪ್ರಚಾರವನ್ನು ಗಳಿಸುವ ಪ್ರಯತ್ನ’ ಎಂದು ಪರಿಗಣಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಪುಸ್ತಕ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂದೆ ವಜಾಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ಸವಾಲನ್ನು ಪರಿಗಣಿಸಿತು. ಪುಸ್ತಕದ ಮುಖಪುಟ ಚಿತ್ರವು ಅದನ್ನು ಸ್ವಇಚ್ಛೆಯಿಂದ ಖರೀದಿಸಿದ ಓದುಗರಿಗೆ ಮಾತ್ರ ಸೀಮಿತವಾಗಿರುವುದರಿಂದ ಮತ್ತು ಸಾರ್ವಜನಿಕ ಪ್ರಚಾರದ ಯಾವುದೇ ಅಂಶವನ್ನು ಹೊಂದಿರದ ಕಾರಣ, ಹೈಕೋರ್ಟ್‌ನ ಹಿಂದಿನ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಆಧಾರವಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಆಗಸ್ಟ್ 28 ರಂದು ಪುಸ್ತಕ ಬಿಡುಗಡೆಯಾದ ನಂತರ, ವಕೀಲರೊಬ್ಬರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮುಖಪುಟದ ಫೋಟೋ 2003 ರ ಸಿಗರೇಟ್, ಇತರ ತಂಬಾಕು ಉತ್ಪನ್ನಗಳ ಕಾಯ್ದೆ ಮತ್ತು 2008 ರ ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿ, ಧೂಮಪಾನದ ಚಿತ್ರಣಗಳು ಗೋಚರಿಸುವ ಆರೋಗ್ಯ ಎಚ್ಚರಿಕೆಗಳನ್ನು ಹೊಂದಿರಬೇಕು ಎಂದು ಅರ್ಜಿ ಸಲ್ಲಿಸುವ ಮೂಲಕ ವಿವಾದ ಪ್ರಾರಂಭವಾಯಿತು.

ಮುಖಪುಟದಲ್ಲಿ, ತಂಬಾಕು ಬಳಕೆಯ ಕುರತ ಎಚ್ಚರಿಕೆಗಳ ಅನುಪಸ್ಥಿತಿಯು ಆ ಉತ್ಪನ್ನಗಳ ಪರೋಕ್ಷ ಜಾಹೀರಾತಿಗೆ ಸಮನಾಗಿರುತ್ತದೆ. ಆದ್ದರಿಂದ, ಧೂಮಪಾನ ಸಂಬಂಧಿತ ಪ್ರಚಾರವನ್ನು ತಡೆಯಲು ಉದ್ದೇಶಿಸಲಾದ ಶಾಸನಬದ್ಧ ಚೌಕಟ್ಟನ್ನು ಉಲ್ಲಂಘಿಸುತ್ತದೆ ಎಂದು ಅವರು ವಾದಿಸಿದರು.

ಅರ್ಜಿದಾರರು, ‘ಪೆಂಗ್ವಿನ್ ಇಂಡಿಯಾ’ದಿಂದ ಹಿಂಬದಿಯ ಮುಖಪುಟದಲ್ಲಿ ಮುದ್ರಿಸಲಾದ ಹಕ್ಕು ನಿರಾಕರಣೆಯ ಉಲ್ಲೇಖ ಸಂಬಂಧಿತ ಸಂಗತಿಗಳನ್ನು ನಿರ್ಲಕ್ಷ್ಯಿಸಿದ್ದರಿಂದ, ಸಾರ್ವಜನಿಕ ಹಿತಾಸಕ್ತಿಗಿಂತ ವೈಯಕ್ತಿಕ ಪ್ರಚಾರದಿಂದ ಈ ಅರ್ಜಿಯು ಪ್ರೇರಿತವಾಗಿದೆ ಎಂದು ಗಮನಿಸಿ, ಅಕ್ಟೋಬರ್ 13 ರಂದು ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು.

ಅರುಂತಿ ರಾಯ್ ಅವರು ಪ್ರಸಿದ್ಧ ಸಾಹಿತಿಯಾಗಿದ್ದು, ಅವರ ಬರವಣಿಗೆ ಅಥವಾ ಪ್ರಕಾಶಕರ ನಡವಳಿಕೆಯು ಧೂಮಪಾನವನ್ನು ಪ್ರೋತ್ಸಾಹಿಸುವ ಯಾವುದೇ ಪ್ರಯತ್ನವನ್ನು ಸೂಚಿಸುವುದಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಸಾರ್ವಜನಿಕರ ಮೇಲೆ ಪ್ರಭಾವ ಬೀರುವ ಅಥವಾ ಹೊಸ ಧೂಮಪಾನಿಗಳನ್ನು ಆಕರ್ಷಿಸುವ ದೊಡ್ಡ ಪ್ರಮಾಣದ ಹೊರಾಂಗಣ ಜಾಹೀರಾತುಗಳ ಮೂಲಕ ಪುಸ್ತಕವನ್ನು ಮಾರಾಟ ಮಾಡಲಾಗುತ್ತಿಲ್ಲ ಎಂದು ಒತ್ತಿ ಹೇಳಿದೆ. ಏಕೆಂದರೆ, ಪುಸ್ತಕದ ಮುಖಪುಟವನ್ನು ಅದರ ವಿಷಯ ಮತ್ತು ಲೇಖಕರ ಖ್ಯಾತಿಯ ಆಧಾರದ ಮೇಲೆ ಖರೀದಿಸಲು ಆಯ್ಕೆ ಮಾಡಿದವರು ಮಾತ್ರ ವೀಕ್ಷಿಸಬಹುದು ಎಂದು ಹೇಳಿದೆ.

ಪಿಐಎಲ್‌ನಲ್ಲಿ ಯಾವುದೇ ಸತ್ವವಿಲ್ಲ, ಹೈಕೋರ್ಟ್ ಅದನ್ನು ವಜಾಗೊಳಿಸುವಲ್ಲಿ ಸರಿಯಾಗಿ ಕಾರ್ಯನಿರ್ವಹಿಸಿದೆ ಎಂದು ತೀರ್ಮಾನಿಸಿದ ಸುಪ್ರೀಂ ಕೋರ್ಟ್, ನಾವು ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಕಂಡುಕೊಂಡಿತು. ಹೈಕೋರ್ಟ್‌ನ ಆದೇಶವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...