Homeಮುಖಪುಟಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ 18ರಂದು ತೀರ್ಪು ಕಾಯ್ದಿರಿಸಿತ್ತು. ಬಳಿಕ ಚುನಾವಣಾ ಆಯೋಗದಿಂದ ಕೆಲವು ತಾಂತ್ರಿಕ ಸ್ಪಷ್ಟೀಕರಣಗಳನ್ನು ಬಯಸಿದ್ದರಿಂದ ಪ್ರಕರಣವನ್ನು ಏಪ್ರಿಲ್ 24 ರಂದು ಮತ್ತೆ ವಿಚಾರಣೆಗೆ ಪಟ್ಟಿ ಮಾಡಿತ್ತು. ಅಂತಿಮವಾಗಿ ಇಂದು (ಏ.26) ತೀರ್ಪು ಪ್ರಕಟಿಸಿದೆ.

ಗಮನಾರ್ಹವಾಗಿ, ಇಬ್ಬರು ನ್ಯಾಯಾಧೀಶರು ಈ ಪ್ರಕರಣದಲ್ಲಿ ಪ್ರತ್ಯೇಕವಾದ, ಆದರೆ ಸಹಮತದ ತೀರ್ಪುಗಳನ್ನು ನೀಡಿದ್ದಾರೆ.

ತೀರ್ಪು ಓದಿದ ನ್ಯಾಯಮೂರ್ತಿ ಖನ್ನಾ ಅವರು, “ಬ್ಯಾಲೆಟ್ ಪೇಪರ್ ಮತದಾನಕ್ಕೆ ಹಿಂತಿರುಗುವುದು, ಇವಿಎಂ-ವಿವಿಪ್ಯಾಟ್‌ನ ಎಲ್ಲಾ ಮತಗಳನ್ನು ತಾಳೆ ಮಾಡಿ ನೋಡುವುದು, ಇವಿಎಂ ಸ್ಲಿಪ್‌ಗಳನ್ನು ಮತ ಪೆಟ್ಟಿಗೆಯಲ್ಲಿ ಹಾಕಲು ಮತದಾರರಿಗೆ ಅವಕಾಶ ನೀಡುವುದು ಸೇರಿದಂತೆ ಎಲ್ಲಾ ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದರು. ಮತದಾನ ಸ್ಥಳದ ಪ್ರೋಟೋಕಾಲ್, ತಾಂತ್ರಿಕ ಅಂಶಗಳು ಮತ್ತು ದಾಖಲೆಯಲ್ಲಿರುವ ಡೇಟಾವನ್ನು ಪರಿಶೀಲಿಸಿದ ನಂತರ ನಾವು ಅರ್ಜಿ ತಿರಸ್ಕರಿಸಿದ್ದೇವೆ ಎಂದರು.

ಆದರೆ, ತೀರ್ಪು ಪ್ರಕಟಿಸುವಾಗ ನ್ಯಾಯಮೂರ್ತಿಗಳು ಚುನಾವಣಾ ಆಯೋಗಕ್ಕೆ ಎರಡು ನಿರ್ದೇಶನಗಳನ್ನು ನೀಡಿದ್ದಾರೆ. ಅವುಗಳು ಹೀಗಿವೆ..

1. ಮೇ,1,2024ರಂದು ಅಥವಾ ನಂತರ ವಿವಿಪ್ಯಾಟ್‌ನಲ್ಲಿ ಚಿಹ್ನೆ ಲೋಡಿಂಗ್ ಪ್ರಕ್ರಿಯೆಯು ಪೂರ್ಣಗೊಂಡ ಬಳಿಕ ಸಿಂಬಲ್ ಲೋಡಿಂಗ್ ಯೂನಿಟ್ (ಎಸ್‌ಎಲ್‌ಯು) ಅನ್ನು ಸೀಲ್ ಮಾಡಬೇಕು ಮತ್ತು ಕಂಟೈನರ್‌ಗಳಲ್ಲಿ ಭದ್ರಪಡಿಸಬೇಕು. ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳು ಮುದ್ರೆಗೆ ಸಹಿ ಹಾಕಬೇಕು. ಎಸ್‌ಎಲ್‌ಯುಗಳನ್ನು ಹೊಂದಿರುವ ಸೀಲ್ ಮಾಡಿದ ಕಂಟೈನರ್‌ಗಳನ್ನು ಇವಿಎಂಗಳ ಜೊತೆಗೆ ಸ್ಟ್ರಾಂಗ್ ರೂಮ್‌ಗಳಲ್ಲಿ ಕನಿಷ್ಠ 45 ದಿನಗಳ ಅವಧಿಯವರೆಗೆ ಫಲಿತಾಂಶಗಳ ಘೋಷಣೆಯ ನಂತರ ಇರಿಸಬೇಕು. ಇವಿಎಂಗಳಂತೆಯೇ ಅವುಗಳನ್ನು ತೆರೆಯಬೇಕು ಮತ್ತು ಪರಿಶೀಲಿಸಬೇಕು ಮತ್ತು ವ್ಯವಹರಿಸಬೇಕು.

2. ಚುನಾವಣೆಯ ಫಲಿತಾಂಶ ಪ್ರಕಟಿಸಿದ ಬಳಿಕ ಎರಡರಿಂದ ಮೂರು ಅಭ್ಯರ್ಥಿಗಳು ಲಿಖಿತ ಮನವಿ ಮಾಡಿದರೆ, ಪ್ರತೀ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಶೇ. 5ರಷ್ಟು ಇವಿಎಂಗಳ ಬರ್ನ್ಟ್ ಮೆಮೊರಿ ಸೆಮಿಕಂಟ್ರೋಲರ್, ಅಂದರೆ ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್ ಅನ್ನು ಇವಿಎಂ ತಯಾರಕರ ಇಂಜಿನಿಯರ್‌ಗಳ ತಂಡವು ಪರಿಶೀಲಿಸಬೇಕು. ಆದರೆ, ಅಭ್ಯರ್ಥಿಗಳು ಫಲಿತಾಂಶಗಳ ಘೋಷಣೆಯ 7 ದಿನಗಳೊಳಗೆ ಲಿಖಿತ ಮನವಿ ಮಾಡಬೇಕು. ಇಂಜಿನಿಯರ್‌ಗಳ ಪರಿಶೀಲನೆಯಲ್ಲಿ ಇವಿಎಂ ಟ್ಯಾಂಪರ್ ಆಗಿರುವುದು ಕಂಡು ಬಂದಲ್ಲಿ ಅಭ್ಯರ್ಥಿಗಳು ಮನವಿ ಸಲ್ಲಿಸುವಾಗ ನೀಡಿದ ಹಣವನ್ನು ಹಿಂದಿರುಗಿಸಬೇಕು.

ಚಿಹ್ನೆಯ ಜೊತೆಗೆ ಪ್ರತಿ ಪಕ್ಷಕ್ಕೂ ಬಾರ್ ಕೋಡ್ ನೀಡಬಹುದೇ? ಎಂಬುವುದನ್ನು ಪರಿಶೀಲಿಸಲು ನ್ಯಾಯಮೂರ್ತಿ ಖನ್ನಾ ಅವರು ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.

ನ್ಯಾಯಮೂರ್ತಿ ದತ್ತಾ ಅವರು ತಮ್ಮ ತೀರ್ಪಿನ ಹೆಚ್ಚುವರಿ ಅಂಶಗಳನ್ನು ಉಲ್ಲೇಖಿಸಿ, ವ್ಯವಸ್ಥೆಯನ್ನು ಕುರುಡಾಗಿ ನಂಬುವುದು ಅನಗತ್ಯ ಸಂದೇಹಕ್ಕೆ ಕಾರಣವಾಗಬಹುದು ಎಂದು ಹೇಳಿದರು. ವ್ಯವಸ್ಥೆಯ ಪರಿಣಾಮಕಾರಿತ್ವವನ್ನು ಖಚಿತಪಡಿಸಿಕೊಳ್ಳಲು ಸಾಕ್ಷ್ಯ ಮತ್ತು ಕಾರಣದಿಂದ ಮಾರ್ಗದರ್ಶಿಸಲ್ಪಟ್ಟ ನಿರ್ಣಾಯಕ ಆದರೆ ರಚನಾತ್ಮಕ ವಿಧಾನವನ್ನು ಅನುಸರಿಸಬೇಕು ಎಂದು ಹೇಳಿದರು.

ನ್ಯಾಯಾಲಯ ನೀಡಿರುವ ಇಂದಿನ ತೀರ್ಪು 2024ರ ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನಕ್ಕೆ ಅನ್ವಯವಾಗಲಿದೆ.

ವೋಟರ್-ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್) ಚೀಟಿಗಳನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳ (ಇವಿಎಂ) ಮೂಲಕ ಚಲಾಯಿಸಿದ ಮತಗಳೊಂದಿಗೆ ತಾಳೆ ಮಾಡಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...