Homeಮುಖಪುಟಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ 18ರಂದು ತೀರ್ಪು ಕಾಯ್ದಿರಿಸಿತ್ತು. ಬಳಿಕ ಚುನಾವಣಾ ಆಯೋಗದಿಂದ ಕೆಲವು ತಾಂತ್ರಿಕ ಸ್ಪಷ್ಟೀಕರಣಗಳನ್ನು ಬಯಸಿದ್ದರಿಂದ ಪ್ರಕರಣವನ್ನು ಏಪ್ರಿಲ್ 24 ರಂದು ಮತ್ತೆ ವಿಚಾರಣೆಗೆ ಪಟ್ಟಿ ಮಾಡಿತ್ತು. ಅಂತಿಮವಾಗಿ ಇಂದು (ಏ.26) ತೀರ್ಪು ಪ್ರಕಟಿಸಿದೆ.

ಗಮನಾರ್ಹವಾಗಿ, ಇಬ್ಬರು ನ್ಯಾಯಾಧೀಶರು ಈ ಪ್ರಕರಣದಲ್ಲಿ ಪ್ರತ್ಯೇಕವಾದ, ಆದರೆ ಸಹಮತದ ತೀರ್ಪುಗಳನ್ನು ನೀಡಿದ್ದಾರೆ.

ತೀರ್ಪು ಓದಿದ ನ್ಯಾಯಮೂರ್ತಿ ಖನ್ನಾ ಅವರು, “ಬ್ಯಾಲೆಟ್ ಪೇಪರ್ ಮತದಾನಕ್ಕೆ ಹಿಂತಿರುಗುವುದು, ಇವಿಎಂ-ವಿವಿಪ್ಯಾಟ್‌ನ ಎಲ್ಲಾ ಮತಗಳನ್ನು ತಾಳೆ ಮಾಡಿ ನೋಡುವುದು, ಇವಿಎಂ ಸ್ಲಿಪ್‌ಗಳನ್ನು ಮತ ಪೆಟ್ಟಿಗೆಯಲ್ಲಿ ಹಾಕಲು ಮತದಾರರಿಗೆ ಅವಕಾಶ ನೀಡುವುದು ಸೇರಿದಂತೆ ಎಲ್ಲಾ ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದರು. ಮತದಾನ ಸ್ಥಳದ ಪ್ರೋಟೋಕಾಲ್, ತಾಂತ್ರಿಕ ಅಂಶಗಳು ಮತ್ತು ದಾಖಲೆಯಲ್ಲಿರುವ ಡೇಟಾವನ್ನು ಪರಿಶೀಲಿಸಿದ ನಂತರ ನಾವು ಅರ್ಜಿ ತಿರಸ್ಕರಿಸಿದ್ದೇವೆ ಎಂದರು.

ಆದರೆ, ತೀರ್ಪು ಪ್ರಕಟಿಸುವಾಗ ನ್ಯಾಯಮೂರ್ತಿಗಳು ಚುನಾವಣಾ ಆಯೋಗಕ್ಕೆ ಎರಡು ನಿರ್ದೇಶನಗಳನ್ನು ನೀಡಿದ್ದಾರೆ. ಅವುಗಳು ಹೀಗಿವೆ..

1. ಮೇ,1,2024ರಂದು ಅಥವಾ ನಂತರ ವಿವಿಪ್ಯಾಟ್‌ನಲ್ಲಿ ಚಿಹ್ನೆ ಲೋಡಿಂಗ್ ಪ್ರಕ್ರಿಯೆಯು ಪೂರ್ಣಗೊಂಡ ಬಳಿಕ ಸಿಂಬಲ್ ಲೋಡಿಂಗ್ ಯೂನಿಟ್ (ಎಸ್‌ಎಲ್‌ಯು) ಅನ್ನು ಸೀಲ್ ಮಾಡಬೇಕು ಮತ್ತು ಕಂಟೈನರ್‌ಗಳಲ್ಲಿ ಭದ್ರಪಡಿಸಬೇಕು. ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳು ಮುದ್ರೆಗೆ ಸಹಿ ಹಾಕಬೇಕು. ಎಸ್‌ಎಲ್‌ಯುಗಳನ್ನು ಹೊಂದಿರುವ ಸೀಲ್ ಮಾಡಿದ ಕಂಟೈನರ್‌ಗಳನ್ನು ಇವಿಎಂಗಳ ಜೊತೆಗೆ ಸ್ಟ್ರಾಂಗ್ ರೂಮ್‌ಗಳಲ್ಲಿ ಕನಿಷ್ಠ 45 ದಿನಗಳ ಅವಧಿಯವರೆಗೆ ಫಲಿತಾಂಶಗಳ ಘೋಷಣೆಯ ನಂತರ ಇರಿಸಬೇಕು. ಇವಿಎಂಗಳಂತೆಯೇ ಅವುಗಳನ್ನು ತೆರೆಯಬೇಕು ಮತ್ತು ಪರಿಶೀಲಿಸಬೇಕು ಮತ್ತು ವ್ಯವಹರಿಸಬೇಕು.

2. ಚುನಾವಣೆಯ ಫಲಿತಾಂಶ ಪ್ರಕಟಿಸಿದ ಬಳಿಕ ಎರಡರಿಂದ ಮೂರು ಅಭ್ಯರ್ಥಿಗಳು ಲಿಖಿತ ಮನವಿ ಮಾಡಿದರೆ, ಪ್ರತೀ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಶೇ. 5ರಷ್ಟು ಇವಿಎಂಗಳ ಬರ್ನ್ಟ್ ಮೆಮೊರಿ ಸೆಮಿಕಂಟ್ರೋಲರ್, ಅಂದರೆ ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್ ಅನ್ನು ಇವಿಎಂ ತಯಾರಕರ ಇಂಜಿನಿಯರ್‌ಗಳ ತಂಡವು ಪರಿಶೀಲಿಸಬೇಕು. ಆದರೆ, ಅಭ್ಯರ್ಥಿಗಳು ಫಲಿತಾಂಶಗಳ ಘೋಷಣೆಯ 7 ದಿನಗಳೊಳಗೆ ಲಿಖಿತ ಮನವಿ ಮಾಡಬೇಕು. ಇಂಜಿನಿಯರ್‌ಗಳ ಪರಿಶೀಲನೆಯಲ್ಲಿ ಇವಿಎಂ ಟ್ಯಾಂಪರ್ ಆಗಿರುವುದು ಕಂಡು ಬಂದಲ್ಲಿ ಅಭ್ಯರ್ಥಿಗಳು ಮನವಿ ಸಲ್ಲಿಸುವಾಗ ನೀಡಿದ ಹಣವನ್ನು ಹಿಂದಿರುಗಿಸಬೇಕು.

ಚಿಹ್ನೆಯ ಜೊತೆಗೆ ಪ್ರತಿ ಪಕ್ಷಕ್ಕೂ ಬಾರ್ ಕೋಡ್ ನೀಡಬಹುದೇ? ಎಂಬುವುದನ್ನು ಪರಿಶೀಲಿಸಲು ನ್ಯಾಯಮೂರ್ತಿ ಖನ್ನಾ ಅವರು ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.

ನ್ಯಾಯಮೂರ್ತಿ ದತ್ತಾ ಅವರು ತಮ್ಮ ತೀರ್ಪಿನ ಹೆಚ್ಚುವರಿ ಅಂಶಗಳನ್ನು ಉಲ್ಲೇಖಿಸಿ, ವ್ಯವಸ್ಥೆಯನ್ನು ಕುರುಡಾಗಿ ನಂಬುವುದು ಅನಗತ್ಯ ಸಂದೇಹಕ್ಕೆ ಕಾರಣವಾಗಬಹುದು ಎಂದು ಹೇಳಿದರು. ವ್ಯವಸ್ಥೆಯ ಪರಿಣಾಮಕಾರಿತ್ವವನ್ನು ಖಚಿತಪಡಿಸಿಕೊಳ್ಳಲು ಸಾಕ್ಷ್ಯ ಮತ್ತು ಕಾರಣದಿಂದ ಮಾರ್ಗದರ್ಶಿಸಲ್ಪಟ್ಟ ನಿರ್ಣಾಯಕ ಆದರೆ ರಚನಾತ್ಮಕ ವಿಧಾನವನ್ನು ಅನುಸರಿಸಬೇಕು ಎಂದು ಹೇಳಿದರು.

ನ್ಯಾಯಾಲಯ ನೀಡಿರುವ ಇಂದಿನ ತೀರ್ಪು 2024ರ ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನಕ್ಕೆ ಅನ್ವಯವಾಗಲಿದೆ.

ವೋಟರ್-ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್) ಚೀಟಿಗಳನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳ (ಇವಿಎಂ) ಮೂಲಕ ಚಲಾಯಿಸಿದ ಮತಗಳೊಂದಿಗೆ ತಾಳೆ ಮಾಡಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...