Homeಮುಖಪುಟಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ 18ರಂದು ತೀರ್ಪು ಕಾಯ್ದಿರಿಸಿತ್ತು. ಬಳಿಕ ಚುನಾವಣಾ ಆಯೋಗದಿಂದ ಕೆಲವು ತಾಂತ್ರಿಕ ಸ್ಪಷ್ಟೀಕರಣಗಳನ್ನು ಬಯಸಿದ್ದರಿಂದ ಪ್ರಕರಣವನ್ನು ಏಪ್ರಿಲ್ 24 ರಂದು ಮತ್ತೆ ವಿಚಾರಣೆಗೆ ಪಟ್ಟಿ ಮಾಡಿತ್ತು. ಅಂತಿಮವಾಗಿ ಇಂದು (ಏ.26) ತೀರ್ಪು ಪ್ರಕಟಿಸಿದೆ.

ಗಮನಾರ್ಹವಾಗಿ, ಇಬ್ಬರು ನ್ಯಾಯಾಧೀಶರು ಈ ಪ್ರಕರಣದಲ್ಲಿ ಪ್ರತ್ಯೇಕವಾದ, ಆದರೆ ಸಹಮತದ ತೀರ್ಪುಗಳನ್ನು ನೀಡಿದ್ದಾರೆ.

ತೀರ್ಪು ಓದಿದ ನ್ಯಾಯಮೂರ್ತಿ ಖನ್ನಾ ಅವರು, “ಬ್ಯಾಲೆಟ್ ಪೇಪರ್ ಮತದಾನಕ್ಕೆ ಹಿಂತಿರುಗುವುದು, ಇವಿಎಂ-ವಿವಿಪ್ಯಾಟ್‌ನ ಎಲ್ಲಾ ಮತಗಳನ್ನು ತಾಳೆ ಮಾಡಿ ನೋಡುವುದು, ಇವಿಎಂ ಸ್ಲಿಪ್‌ಗಳನ್ನು ಮತ ಪೆಟ್ಟಿಗೆಯಲ್ಲಿ ಹಾಕಲು ಮತದಾರರಿಗೆ ಅವಕಾಶ ನೀಡುವುದು ಸೇರಿದಂತೆ ಎಲ್ಲಾ ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದರು. ಮತದಾನ ಸ್ಥಳದ ಪ್ರೋಟೋಕಾಲ್, ತಾಂತ್ರಿಕ ಅಂಶಗಳು ಮತ್ತು ದಾಖಲೆಯಲ್ಲಿರುವ ಡೇಟಾವನ್ನು ಪರಿಶೀಲಿಸಿದ ನಂತರ ನಾವು ಅರ್ಜಿ ತಿರಸ್ಕರಿಸಿದ್ದೇವೆ ಎಂದರು.

ಆದರೆ, ತೀರ್ಪು ಪ್ರಕಟಿಸುವಾಗ ನ್ಯಾಯಮೂರ್ತಿಗಳು ಚುನಾವಣಾ ಆಯೋಗಕ್ಕೆ ಎರಡು ನಿರ್ದೇಶನಗಳನ್ನು ನೀಡಿದ್ದಾರೆ. ಅವುಗಳು ಹೀಗಿವೆ..

1. ಮೇ,1,2024ರಂದು ಅಥವಾ ನಂತರ ವಿವಿಪ್ಯಾಟ್‌ನಲ್ಲಿ ಚಿಹ್ನೆ ಲೋಡಿಂಗ್ ಪ್ರಕ್ರಿಯೆಯು ಪೂರ್ಣಗೊಂಡ ಬಳಿಕ ಸಿಂಬಲ್ ಲೋಡಿಂಗ್ ಯೂನಿಟ್ (ಎಸ್‌ಎಲ್‌ಯು) ಅನ್ನು ಸೀಲ್ ಮಾಡಬೇಕು ಮತ್ತು ಕಂಟೈನರ್‌ಗಳಲ್ಲಿ ಭದ್ರಪಡಿಸಬೇಕು. ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳು ಮುದ್ರೆಗೆ ಸಹಿ ಹಾಕಬೇಕು. ಎಸ್‌ಎಲ್‌ಯುಗಳನ್ನು ಹೊಂದಿರುವ ಸೀಲ್ ಮಾಡಿದ ಕಂಟೈನರ್‌ಗಳನ್ನು ಇವಿಎಂಗಳ ಜೊತೆಗೆ ಸ್ಟ್ರಾಂಗ್ ರೂಮ್‌ಗಳಲ್ಲಿ ಕನಿಷ್ಠ 45 ದಿನಗಳ ಅವಧಿಯವರೆಗೆ ಫಲಿತಾಂಶಗಳ ಘೋಷಣೆಯ ನಂತರ ಇರಿಸಬೇಕು. ಇವಿಎಂಗಳಂತೆಯೇ ಅವುಗಳನ್ನು ತೆರೆಯಬೇಕು ಮತ್ತು ಪರಿಶೀಲಿಸಬೇಕು ಮತ್ತು ವ್ಯವಹರಿಸಬೇಕು.

2. ಚುನಾವಣೆಯ ಫಲಿತಾಂಶ ಪ್ರಕಟಿಸಿದ ಬಳಿಕ ಎರಡರಿಂದ ಮೂರು ಅಭ್ಯರ್ಥಿಗಳು ಲಿಖಿತ ಮನವಿ ಮಾಡಿದರೆ, ಪ್ರತೀ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಶೇ. 5ರಷ್ಟು ಇವಿಎಂಗಳ ಬರ್ನ್ಟ್ ಮೆಮೊರಿ ಸೆಮಿಕಂಟ್ರೋಲರ್, ಅಂದರೆ ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್ ಅನ್ನು ಇವಿಎಂ ತಯಾರಕರ ಇಂಜಿನಿಯರ್‌ಗಳ ತಂಡವು ಪರಿಶೀಲಿಸಬೇಕು. ಆದರೆ, ಅಭ್ಯರ್ಥಿಗಳು ಫಲಿತಾಂಶಗಳ ಘೋಷಣೆಯ 7 ದಿನಗಳೊಳಗೆ ಲಿಖಿತ ಮನವಿ ಮಾಡಬೇಕು. ಇಂಜಿನಿಯರ್‌ಗಳ ಪರಿಶೀಲನೆಯಲ್ಲಿ ಇವಿಎಂ ಟ್ಯಾಂಪರ್ ಆಗಿರುವುದು ಕಂಡು ಬಂದಲ್ಲಿ ಅಭ್ಯರ್ಥಿಗಳು ಮನವಿ ಸಲ್ಲಿಸುವಾಗ ನೀಡಿದ ಹಣವನ್ನು ಹಿಂದಿರುಗಿಸಬೇಕು.

ಚಿಹ್ನೆಯ ಜೊತೆಗೆ ಪ್ರತಿ ಪಕ್ಷಕ್ಕೂ ಬಾರ್ ಕೋಡ್ ನೀಡಬಹುದೇ? ಎಂಬುವುದನ್ನು ಪರಿಶೀಲಿಸಲು ನ್ಯಾಯಮೂರ್ತಿ ಖನ್ನಾ ಅವರು ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.

ನ್ಯಾಯಮೂರ್ತಿ ದತ್ತಾ ಅವರು ತಮ್ಮ ತೀರ್ಪಿನ ಹೆಚ್ಚುವರಿ ಅಂಶಗಳನ್ನು ಉಲ್ಲೇಖಿಸಿ, ವ್ಯವಸ್ಥೆಯನ್ನು ಕುರುಡಾಗಿ ನಂಬುವುದು ಅನಗತ್ಯ ಸಂದೇಹಕ್ಕೆ ಕಾರಣವಾಗಬಹುದು ಎಂದು ಹೇಳಿದರು. ವ್ಯವಸ್ಥೆಯ ಪರಿಣಾಮಕಾರಿತ್ವವನ್ನು ಖಚಿತಪಡಿಸಿಕೊಳ್ಳಲು ಸಾಕ್ಷ್ಯ ಮತ್ತು ಕಾರಣದಿಂದ ಮಾರ್ಗದರ್ಶಿಸಲ್ಪಟ್ಟ ನಿರ್ಣಾಯಕ ಆದರೆ ರಚನಾತ್ಮಕ ವಿಧಾನವನ್ನು ಅನುಸರಿಸಬೇಕು ಎಂದು ಹೇಳಿದರು.

ನ್ಯಾಯಾಲಯ ನೀಡಿರುವ ಇಂದಿನ ತೀರ್ಪು 2024ರ ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನಕ್ಕೆ ಅನ್ವಯವಾಗಲಿದೆ.

ವೋಟರ್-ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್) ಚೀಟಿಗಳನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳ (ಇವಿಎಂ) ಮೂಲಕ ಚಲಾಯಿಸಿದ ಮತಗಳೊಂದಿಗೆ ತಾಳೆ ಮಾಡಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...