Homeಮುಖಪುಟಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ 18ರಂದು ತೀರ್ಪು ಕಾಯ್ದಿರಿಸಿತ್ತು. ಬಳಿಕ ಚುನಾವಣಾ ಆಯೋಗದಿಂದ ಕೆಲವು ತಾಂತ್ರಿಕ ಸ್ಪಷ್ಟೀಕರಣಗಳನ್ನು ಬಯಸಿದ್ದರಿಂದ ಪ್ರಕರಣವನ್ನು ಏಪ್ರಿಲ್ 24 ರಂದು ಮತ್ತೆ ವಿಚಾರಣೆಗೆ ಪಟ್ಟಿ ಮಾಡಿತ್ತು. ಅಂತಿಮವಾಗಿ ಇಂದು (ಏ.26) ತೀರ್ಪು ಪ್ರಕಟಿಸಿದೆ.

ಗಮನಾರ್ಹವಾಗಿ, ಇಬ್ಬರು ನ್ಯಾಯಾಧೀಶರು ಈ ಪ್ರಕರಣದಲ್ಲಿ ಪ್ರತ್ಯೇಕವಾದ, ಆದರೆ ಸಹಮತದ ತೀರ್ಪುಗಳನ್ನು ನೀಡಿದ್ದಾರೆ.

ತೀರ್ಪು ಓದಿದ ನ್ಯಾಯಮೂರ್ತಿ ಖನ್ನಾ ಅವರು, “ಬ್ಯಾಲೆಟ್ ಪೇಪರ್ ಮತದಾನಕ್ಕೆ ಹಿಂತಿರುಗುವುದು, ಇವಿಎಂ-ವಿವಿಪ್ಯಾಟ್‌ನ ಎಲ್ಲಾ ಮತಗಳನ್ನು ತಾಳೆ ಮಾಡಿ ನೋಡುವುದು, ಇವಿಎಂ ಸ್ಲಿಪ್‌ಗಳನ್ನು ಮತ ಪೆಟ್ಟಿಗೆಯಲ್ಲಿ ಹಾಕಲು ಮತದಾರರಿಗೆ ಅವಕಾಶ ನೀಡುವುದು ಸೇರಿದಂತೆ ಎಲ್ಲಾ ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದರು. ಮತದಾನ ಸ್ಥಳದ ಪ್ರೋಟೋಕಾಲ್, ತಾಂತ್ರಿಕ ಅಂಶಗಳು ಮತ್ತು ದಾಖಲೆಯಲ್ಲಿರುವ ಡೇಟಾವನ್ನು ಪರಿಶೀಲಿಸಿದ ನಂತರ ನಾವು ಅರ್ಜಿ ತಿರಸ್ಕರಿಸಿದ್ದೇವೆ ಎಂದರು.

ಆದರೆ, ತೀರ್ಪು ಪ್ರಕಟಿಸುವಾಗ ನ್ಯಾಯಮೂರ್ತಿಗಳು ಚುನಾವಣಾ ಆಯೋಗಕ್ಕೆ ಎರಡು ನಿರ್ದೇಶನಗಳನ್ನು ನೀಡಿದ್ದಾರೆ. ಅವುಗಳು ಹೀಗಿವೆ..

1. ಮೇ,1,2024ರಂದು ಅಥವಾ ನಂತರ ವಿವಿಪ್ಯಾಟ್‌ನಲ್ಲಿ ಚಿಹ್ನೆ ಲೋಡಿಂಗ್ ಪ್ರಕ್ರಿಯೆಯು ಪೂರ್ಣಗೊಂಡ ಬಳಿಕ ಸಿಂಬಲ್ ಲೋಡಿಂಗ್ ಯೂನಿಟ್ (ಎಸ್‌ಎಲ್‌ಯು) ಅನ್ನು ಸೀಲ್ ಮಾಡಬೇಕು ಮತ್ತು ಕಂಟೈನರ್‌ಗಳಲ್ಲಿ ಭದ್ರಪಡಿಸಬೇಕು. ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳು ಮುದ್ರೆಗೆ ಸಹಿ ಹಾಕಬೇಕು. ಎಸ್‌ಎಲ್‌ಯುಗಳನ್ನು ಹೊಂದಿರುವ ಸೀಲ್ ಮಾಡಿದ ಕಂಟೈನರ್‌ಗಳನ್ನು ಇವಿಎಂಗಳ ಜೊತೆಗೆ ಸ್ಟ್ರಾಂಗ್ ರೂಮ್‌ಗಳಲ್ಲಿ ಕನಿಷ್ಠ 45 ದಿನಗಳ ಅವಧಿಯವರೆಗೆ ಫಲಿತಾಂಶಗಳ ಘೋಷಣೆಯ ನಂತರ ಇರಿಸಬೇಕು. ಇವಿಎಂಗಳಂತೆಯೇ ಅವುಗಳನ್ನು ತೆರೆಯಬೇಕು ಮತ್ತು ಪರಿಶೀಲಿಸಬೇಕು ಮತ್ತು ವ್ಯವಹರಿಸಬೇಕು.

2. ಚುನಾವಣೆಯ ಫಲಿತಾಂಶ ಪ್ರಕಟಿಸಿದ ಬಳಿಕ ಎರಡರಿಂದ ಮೂರು ಅಭ್ಯರ್ಥಿಗಳು ಲಿಖಿತ ಮನವಿ ಮಾಡಿದರೆ, ಪ್ರತೀ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಶೇ. 5ರಷ್ಟು ಇವಿಎಂಗಳ ಬರ್ನ್ಟ್ ಮೆಮೊರಿ ಸೆಮಿಕಂಟ್ರೋಲರ್, ಅಂದರೆ ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್ ಅನ್ನು ಇವಿಎಂ ತಯಾರಕರ ಇಂಜಿನಿಯರ್‌ಗಳ ತಂಡವು ಪರಿಶೀಲಿಸಬೇಕು. ಆದರೆ, ಅಭ್ಯರ್ಥಿಗಳು ಫಲಿತಾಂಶಗಳ ಘೋಷಣೆಯ 7 ದಿನಗಳೊಳಗೆ ಲಿಖಿತ ಮನವಿ ಮಾಡಬೇಕು. ಇಂಜಿನಿಯರ್‌ಗಳ ಪರಿಶೀಲನೆಯಲ್ಲಿ ಇವಿಎಂ ಟ್ಯಾಂಪರ್ ಆಗಿರುವುದು ಕಂಡು ಬಂದಲ್ಲಿ ಅಭ್ಯರ್ಥಿಗಳು ಮನವಿ ಸಲ್ಲಿಸುವಾಗ ನೀಡಿದ ಹಣವನ್ನು ಹಿಂದಿರುಗಿಸಬೇಕು.

ಚಿಹ್ನೆಯ ಜೊತೆಗೆ ಪ್ರತಿ ಪಕ್ಷಕ್ಕೂ ಬಾರ್ ಕೋಡ್ ನೀಡಬಹುದೇ? ಎಂಬುವುದನ್ನು ಪರಿಶೀಲಿಸಲು ನ್ಯಾಯಮೂರ್ತಿ ಖನ್ನಾ ಅವರು ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.

ನ್ಯಾಯಮೂರ್ತಿ ದತ್ತಾ ಅವರು ತಮ್ಮ ತೀರ್ಪಿನ ಹೆಚ್ಚುವರಿ ಅಂಶಗಳನ್ನು ಉಲ್ಲೇಖಿಸಿ, ವ್ಯವಸ್ಥೆಯನ್ನು ಕುರುಡಾಗಿ ನಂಬುವುದು ಅನಗತ್ಯ ಸಂದೇಹಕ್ಕೆ ಕಾರಣವಾಗಬಹುದು ಎಂದು ಹೇಳಿದರು. ವ್ಯವಸ್ಥೆಯ ಪರಿಣಾಮಕಾರಿತ್ವವನ್ನು ಖಚಿತಪಡಿಸಿಕೊಳ್ಳಲು ಸಾಕ್ಷ್ಯ ಮತ್ತು ಕಾರಣದಿಂದ ಮಾರ್ಗದರ್ಶಿಸಲ್ಪಟ್ಟ ನಿರ್ಣಾಯಕ ಆದರೆ ರಚನಾತ್ಮಕ ವಿಧಾನವನ್ನು ಅನುಸರಿಸಬೇಕು ಎಂದು ಹೇಳಿದರು.

ನ್ಯಾಯಾಲಯ ನೀಡಿರುವ ಇಂದಿನ ತೀರ್ಪು 2024ರ ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನಕ್ಕೆ ಅನ್ವಯವಾಗಲಿದೆ.

ವೋಟರ್-ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್) ಚೀಟಿಗಳನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳ (ಇವಿಎಂ) ಮೂಲಕ ಚಲಾಯಿಸಿದ ಮತಗಳೊಂದಿಗೆ ತಾಳೆ ಮಾಡಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...