Homeಮುಖಪುಟಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ 18ರಂದು ತೀರ್ಪು ಕಾಯ್ದಿರಿಸಿತ್ತು. ಬಳಿಕ ಚುನಾವಣಾ ಆಯೋಗದಿಂದ ಕೆಲವು ತಾಂತ್ರಿಕ ಸ್ಪಷ್ಟೀಕರಣಗಳನ್ನು ಬಯಸಿದ್ದರಿಂದ ಪ್ರಕರಣವನ್ನು ಏಪ್ರಿಲ್ 24 ರಂದು ಮತ್ತೆ ವಿಚಾರಣೆಗೆ ಪಟ್ಟಿ ಮಾಡಿತ್ತು. ಅಂತಿಮವಾಗಿ ಇಂದು (ಏ.26) ತೀರ್ಪು ಪ್ರಕಟಿಸಿದೆ.

ಗಮನಾರ್ಹವಾಗಿ, ಇಬ್ಬರು ನ್ಯಾಯಾಧೀಶರು ಈ ಪ್ರಕರಣದಲ್ಲಿ ಪ್ರತ್ಯೇಕವಾದ, ಆದರೆ ಸಹಮತದ ತೀರ್ಪುಗಳನ್ನು ನೀಡಿದ್ದಾರೆ.

ತೀರ್ಪು ಓದಿದ ನ್ಯಾಯಮೂರ್ತಿ ಖನ್ನಾ ಅವರು, “ಬ್ಯಾಲೆಟ್ ಪೇಪರ್ ಮತದಾನಕ್ಕೆ ಹಿಂತಿರುಗುವುದು, ಇವಿಎಂ-ವಿವಿಪ್ಯಾಟ್‌ನ ಎಲ್ಲಾ ಮತಗಳನ್ನು ತಾಳೆ ಮಾಡಿ ನೋಡುವುದು, ಇವಿಎಂ ಸ್ಲಿಪ್‌ಗಳನ್ನು ಮತ ಪೆಟ್ಟಿಗೆಯಲ್ಲಿ ಹಾಕಲು ಮತದಾರರಿಗೆ ಅವಕಾಶ ನೀಡುವುದು ಸೇರಿದಂತೆ ಎಲ್ಲಾ ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದರು. ಮತದಾನ ಸ್ಥಳದ ಪ್ರೋಟೋಕಾಲ್, ತಾಂತ್ರಿಕ ಅಂಶಗಳು ಮತ್ತು ದಾಖಲೆಯಲ್ಲಿರುವ ಡೇಟಾವನ್ನು ಪರಿಶೀಲಿಸಿದ ನಂತರ ನಾವು ಅರ್ಜಿ ತಿರಸ್ಕರಿಸಿದ್ದೇವೆ ಎಂದರು.

ಆದರೆ, ತೀರ್ಪು ಪ್ರಕಟಿಸುವಾಗ ನ್ಯಾಯಮೂರ್ತಿಗಳು ಚುನಾವಣಾ ಆಯೋಗಕ್ಕೆ ಎರಡು ನಿರ್ದೇಶನಗಳನ್ನು ನೀಡಿದ್ದಾರೆ. ಅವುಗಳು ಹೀಗಿವೆ..

1. ಮೇ,1,2024ರಂದು ಅಥವಾ ನಂತರ ವಿವಿಪ್ಯಾಟ್‌ನಲ್ಲಿ ಚಿಹ್ನೆ ಲೋಡಿಂಗ್ ಪ್ರಕ್ರಿಯೆಯು ಪೂರ್ಣಗೊಂಡ ಬಳಿಕ ಸಿಂಬಲ್ ಲೋಡಿಂಗ್ ಯೂನಿಟ್ (ಎಸ್‌ಎಲ್‌ಯು) ಅನ್ನು ಸೀಲ್ ಮಾಡಬೇಕು ಮತ್ತು ಕಂಟೈನರ್‌ಗಳಲ್ಲಿ ಭದ್ರಪಡಿಸಬೇಕು. ಅಭ್ಯರ್ಥಿಗಳು ಅಥವಾ ಅವರ ಪ್ರತಿನಿಧಿಗಳು ಮುದ್ರೆಗೆ ಸಹಿ ಹಾಕಬೇಕು. ಎಸ್‌ಎಲ್‌ಯುಗಳನ್ನು ಹೊಂದಿರುವ ಸೀಲ್ ಮಾಡಿದ ಕಂಟೈನರ್‌ಗಳನ್ನು ಇವಿಎಂಗಳ ಜೊತೆಗೆ ಸ್ಟ್ರಾಂಗ್ ರೂಮ್‌ಗಳಲ್ಲಿ ಕನಿಷ್ಠ 45 ದಿನಗಳ ಅವಧಿಯವರೆಗೆ ಫಲಿತಾಂಶಗಳ ಘೋಷಣೆಯ ನಂತರ ಇರಿಸಬೇಕು. ಇವಿಎಂಗಳಂತೆಯೇ ಅವುಗಳನ್ನು ತೆರೆಯಬೇಕು ಮತ್ತು ಪರಿಶೀಲಿಸಬೇಕು ಮತ್ತು ವ್ಯವಹರಿಸಬೇಕು.

2. ಚುನಾವಣೆಯ ಫಲಿತಾಂಶ ಪ್ರಕಟಿಸಿದ ಬಳಿಕ ಎರಡರಿಂದ ಮೂರು ಅಭ್ಯರ್ಥಿಗಳು ಲಿಖಿತ ಮನವಿ ಮಾಡಿದರೆ, ಪ್ರತೀ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಶೇ. 5ರಷ್ಟು ಇವಿಎಂಗಳ ಬರ್ನ್ಟ್ ಮೆಮೊರಿ ಸೆಮಿಕಂಟ್ರೋಲರ್, ಅಂದರೆ ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್ ಅನ್ನು ಇವಿಎಂ ತಯಾರಕರ ಇಂಜಿನಿಯರ್‌ಗಳ ತಂಡವು ಪರಿಶೀಲಿಸಬೇಕು. ಆದರೆ, ಅಭ್ಯರ್ಥಿಗಳು ಫಲಿತಾಂಶಗಳ ಘೋಷಣೆಯ 7 ದಿನಗಳೊಳಗೆ ಲಿಖಿತ ಮನವಿ ಮಾಡಬೇಕು. ಇಂಜಿನಿಯರ್‌ಗಳ ಪರಿಶೀಲನೆಯಲ್ಲಿ ಇವಿಎಂ ಟ್ಯಾಂಪರ್ ಆಗಿರುವುದು ಕಂಡು ಬಂದಲ್ಲಿ ಅಭ್ಯರ್ಥಿಗಳು ಮನವಿ ಸಲ್ಲಿಸುವಾಗ ನೀಡಿದ ಹಣವನ್ನು ಹಿಂದಿರುಗಿಸಬೇಕು.

ಚಿಹ್ನೆಯ ಜೊತೆಗೆ ಪ್ರತಿ ಪಕ್ಷಕ್ಕೂ ಬಾರ್ ಕೋಡ್ ನೀಡಬಹುದೇ? ಎಂಬುವುದನ್ನು ಪರಿಶೀಲಿಸಲು ನ್ಯಾಯಮೂರ್ತಿ ಖನ್ನಾ ಅವರು ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.

ನ್ಯಾಯಮೂರ್ತಿ ದತ್ತಾ ಅವರು ತಮ್ಮ ತೀರ್ಪಿನ ಹೆಚ್ಚುವರಿ ಅಂಶಗಳನ್ನು ಉಲ್ಲೇಖಿಸಿ, ವ್ಯವಸ್ಥೆಯನ್ನು ಕುರುಡಾಗಿ ನಂಬುವುದು ಅನಗತ್ಯ ಸಂದೇಹಕ್ಕೆ ಕಾರಣವಾಗಬಹುದು ಎಂದು ಹೇಳಿದರು. ವ್ಯವಸ್ಥೆಯ ಪರಿಣಾಮಕಾರಿತ್ವವನ್ನು ಖಚಿತಪಡಿಸಿಕೊಳ್ಳಲು ಸಾಕ್ಷ್ಯ ಮತ್ತು ಕಾರಣದಿಂದ ಮಾರ್ಗದರ್ಶಿಸಲ್ಪಟ್ಟ ನಿರ್ಣಾಯಕ ಆದರೆ ರಚನಾತ್ಮಕ ವಿಧಾನವನ್ನು ಅನುಸರಿಸಬೇಕು ಎಂದು ಹೇಳಿದರು.

ನ್ಯಾಯಾಲಯ ನೀಡಿರುವ ಇಂದಿನ ತೀರ್ಪು 2024ರ ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನಕ್ಕೆ ಅನ್ವಯವಾಗಲಿದೆ.

ವೋಟರ್-ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್) ಚೀಟಿಗಳನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳ (ಇವಿಎಂ) ಮೂಲಕ ಚಲಾಯಿಸಿದ ಮತಗಳೊಂದಿಗೆ ತಾಳೆ ಮಾಡಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...