Homeಮುಖಪುಟಸುಪ್ರೀಂಕೋರ್ಟ್‌ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ: ಸಿಜೆಐ ಚಂದ್ರಚೂಡ್

ಸುಪ್ರೀಂಕೋರ್ಟ್‌ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ: ಸಿಜೆಐ ಚಂದ್ರಚೂಡ್

- Advertisement -
- Advertisement -

ಸುಪ್ರೀಂಕೋರ್ಟ್‌ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ ಎಂದು ಸುಪ್ರೀಂ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ಸುಪ್ರಿಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಗುರುವಾರ ಹೇಳಿದ್ದಾರೆ. ಈ ಬಗ್ಗೆ ಕಾನೂನು ಸುದ್ದಿ ವೆಬ್‌ಸೈಟ್ ಬಾರ್ ಆಂಡ್ ಬೆಂಚ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿ.ವೈ. ಚಂದ್ರಚೂಡ್ ಅವರ ಉಸ್ತುವಾರಿಯಲ್ಲಿ ನ್ಯಾಯಾಲಯದ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್‌ನ ವರದಿಗಾರಿಕೆಗೆ ಕಾನೂನು ಪದವಿ ಅಗತ್ಯವಿಲ್ಲ ಎನ್ನುವ ನಿರ್ಣಯ ತೆಗೆದುಕೊಂಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಜೆಐ ಡಿ.ವೈ ಚಂದ್ರಚೂಡ್‌ ಅವರು ಮಾಹಿತಿ ನೀಡಿದ್ದಾರೆ. ಸುಪ್ರೀಂಕೋರ್ಟ್‌ನ ವರದಿಗಾರಿಕೆ

“ನಿನ್ನೆಯಷ್ಟೇ, ನಾನು ಸುಪ್ರೀಂ ಕೋರ್ಟ್‌ಗೆ ಮಾನ್ಯತೆ ಪಡೆದ ಪತ್ರವ್ಯವಹಾರದ ಹೆಜ್ಜೆಗುರುತನ್ನು ವಿಸ್ತರಿಸುವ ಫೈಲ್‌ಗೆ ಸಹಿ ಹಾಕಿದ್ದೇನೆ. ಯಾವ ಕಾರಣಕ್ಕಾಗಿ ನೀವು ಕಾನೂನು ಎಲ್‌ಎಲ್‌ಬಿ ಪಾಸಾಗಿರಬೇಕು ಎಂಬ ಷರತ್ತು ಇತ್ತು ಎಂದು ನನಗೆ ತಿಳಿದಿಲ್ಲ. ನಾವು ಅದನ್ನು ಸಡಿಲಗೊಳಿಸಿದ್ದೇವೆ” ಎಂದು ಸಿಜೆಐ ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಮಾನ್ಯತೆ ಪಡೆದ ಪತ್ರಕರ್ತರು ಕೂಡ ಸುಪ್ರೀಂ ಕೋರ್ಟ್ ಪಾರ್ಕಿಂಗ್‌ಗೆ ಇಲ್ಲಿ ಪ್ರವೇಶವನ್ನು ಹೊಂದಿರುತ್ತಾರೆ ಎಂದು ಚಂದ್ರಚೂಡ್ ಮಾತನಾಡುತ್ತಾ ಹೇಳಿದ್ದಾರೆ. ಸುಪ್ರಿಂ ಕೋರ್ಟ್ ಆವರಣದಲ್ಲಿ ನಡೆದ ದೀಪಾವಳಿ ಪೂರ್ವ ಕೂಟದಲ್ಲಿ ಸಿಜೆಐ ಚಂದ್ರಚೂಡ್ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.

ಈ ಹಿಂದೆ ಸುಪ್ರೀಂ ಕೋರ್ಟ್‌ ವರದಿಗಾರಿಕೆಗೆ ಅಗತ್ಯವಿರುವ ಮಾನ್ಯತಾ ಪತ್ರ ಪಡೆಯಲು ಮೊದಲು ಕಾನೂನು ಪದವಿ ಅಗತ್ಯವಾಗಿತ್ತು ಎಂದು ಬಾರ್‌ ಆ್ಯಂಡ್‌ ಬೆಂಚ್‌ ವರದಿ ಮಾಡಿದೆ. 2018 ರಲ್ಲಿ, ಸುಪ್ರೀಂ ಕೋರ್ಟ್ ಕಾನೂನು ವರದಿಗಾರರ ಮಾನ್ಯತೆಗಾಗಿ ತನ್ನ ನಿಯಮಗಳಿಗೆ ತಿದ್ದುಪಡಿ ಮಾಡಿತ್ತು ಎಂದು ಅದು ಹೇಳಿದೆ.

ಸುಪ್ರಿಂ ಕೋರ್ಟ್‌ನಲ್ಲಿ ವರದಿಗಾರರಾಗಿ ಮಾನ್ಯತೆ ಪಡೆಯಲು ಕಾನೂನು ಪದವಿಯನ್ನು ಹೊಂದುವ ಷರತ್ತನ್ನು ಬಿಟ್ಟುಬಿಡಲು, ಸೂಕ್ತ ಸಂದರ್ಭಗಳಲ್ಲಿ ವಿವೇಚನೆಯನ್ನು ಚಲಾಯಿಸಲು ತಿದ್ದುಪಡಿ ಮಾಡಲಾದ ನಿಯಮಗಳು ಭಾರತದ ಮುಖ್ಯ ನ್ಯಾಯಾಧೀಶರಿಗೆ ಅನುವು ಮಾಡಿತ್ತು. ಈಗ ಅದನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ.

ಇದನ್ನೂ ಓದಿ: ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...