Homeಕರ್ನಾಟಕಕನೇರಿ ಸ್ವಾಮಿಗೆ ಸುಪ್ರೀಂ ಛೀಮಾರಿ: "ನಿಮ್ಮನ್ನು ಗಡಿಪಾರು ಮಾಡಲೂ ಅಧಿಕಾರ ಇದೆ".

ಕನೇರಿ ಸ್ವಾಮಿಗೆ ಸುಪ್ರೀಂ ಛೀಮಾರಿ: “ನಿಮ್ಮನ್ನು ಗಡಿಪಾರು ಮಾಡಲೂ ಅಧಿಕಾರ ಇದೆ”.

- Advertisement -
- Advertisement -
ಇತ್ತೀಚೆಗಷ್ಟೆ ಕನೇರಿಯ ಕಾಡಸಿದ್ದೇಶ್ವರ ಸ್ವಾಮಿ ಮಾಡಿದ್ದ ದ್ವೇಷ ಭಾಷಣ ಕುರಿತು ಸಮಾಜದಲ್ಲಿ ತೀರ್ವ ವಿಮರ್ಶೆ ವ್ಯಕ್ತವಾಗಿತ್ತು. ಇದರ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳತ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಕಾಡಸಿದ್ದೇಶ್ವರ ಸ್ವಾಮಿಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿ ಅರ್ಜಿಯನ್ನು ವಜಾಗೊಳಿಸಿದೆ.

ಲಿಂಗಾಯತ ಮಠಾಧಿಪತಿಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಬಳಸಿ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದ್ದಾರೆ ಎಂಬ ಕಾರಣಕ್ಕೆ ವಿಜಯಪುರ ಜಿಲ್ಲಾಧಿಕಾರಿ ಅವರು ಸ್ವಾಮೀಜಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು.  ಎಂಬ ಆರೋಪದ ಕಾರಣ ಸ್ವಾಮೀಜಿಯವರು ಡಿ. 14ರವರೆಗೆ ವಿಜಯಪುರ ಜಿಲ್ಲೆ ಪ್ರವೇಶಿಸ ಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಇತ್ತೀಚೆಗೆ ಎತ್ತಿ ಹಿಡಿದಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ್‌ ಮಿತ್ತಲ್‌ ಹಾಗೂ ಪ್ರಸನ್ನ ಬಿ.ವರಾಳೆ ಪೀಠವು ಸ್ವಾಮೀಜಿ ಅವರನ್ನು ತರಾಟೆಗೆ ತೆಗೆದುಕೊಂಡಿತು.

‘ನೀವು ಜಿಲ್ಲೆಯಿಂದ ದೂರವಿದ್ದು ಆಧ್ಯಾತ್ಮಿಕ ವಿಷಯಗಳಲ್ಲಿ ತೊಡಗಿಸಿ ಕೊಳ್ಳಲು ಇದು ಒಂದು ಅವಕಾಶ. ನೀವು ಬೇರೆ ಯಾವುದಾದರೂ ಮಠದಲ್ಲಿ ಕುಳಿತು ಧ್ಯಾನ ಮಾಡಬೇಕು. ಈ ನಿರ್ದಿಷ್ಟ ಜಿಲ್ಲೆಗೆ ಹೋಗಲೇಬೇಕೆಂದು ನೀವೇಕೆ ಜಿಲ್ಲಾಡಳಿತಕಕ್ಕೆ ಒತ್ತಡ ಹೇರುತ್ತಿದ್ದೀರಿ’ ಎಂದು ಪೀಠವು ಸ್ವಾಮೀಜಿ ಅವರನ್ನು ಪ್ರಶ್ನಿಸಿತು. ‌

‘ಕೀಳು ಮಟ್ಟದ ಹೇಳಿಕೆ ನೀಡಿರುವ ನೀವು ಉತ್ತಮ ನಾಗರಿಕರಲ್ಲ’ ಎಂದು ಕನೇರಿ ಸ್ವಾಮಿಗೆ ಬಹಳ ಕಟುವಾಗಿ ಹೇಳಿತು.

‘ನೀವು ಧಾರ್ಮಿಕ ನಾಯಕ. ಮಾತನಾಡುವಾಗ ಬಹಳ ಜಾಗರೂಕರಾಗಿರ ಬೇಕು. ನಿಮ್ಮ ಇಂತಹ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ. ಇನ್ನು ಮುಂದೆ ಕೋಮು ಭಾವನೆ ಕೆರಳಿಸುವ ಯಾವುದೇ ಹೇಳಿಕೆ ನೀಡಬೇಡಿ. ಹೈಕೋರ್ಟ್‌ ಆದೇಶದಲ್ಲಿ ತಪ್ಪೇನಿದೆ’ ಎಂದು ಪೀಠ ಪ್ರಶ್ನಿಸಿತು.

‘ಅವಹೇಳನಕಾರಿ ಭಾಷೆ ಬಳಸಿರುವುದು ವಾಕ್ ಸ್ವಾತಂತ್ರ್ಯದ ವ್ಯಾಪ್ತಿಗೆ ಬರುವುದಿಲ್ಲ. ನೀವು ಹೀಗೆಯೇ ವರ್ತಿಸುತ್ತಿದ್ದರೆ ಎಲ್ಲ ಜಿಲ್ಲಾಧಿಕಾರಿಗಳು ಇಂತಹ ಆದೇಶಗಳನ್ನು ಹೊರಡಿಸುತ್ತಾರೆ’ ಎಂದು ಪೀಠ ಸೂಚ್ಯವಾಗಿ ಹೇಳಿತು. ‘ಪ್ರಕರಣದ ವಾಸ್ತವಾಂಶ ಹಾಗೂ ಸನ್ನಿವೇಶ ಗಳನ್ನು ಗಮನಿಸಿದರೆ, ಹೈಕೋರ್ಟ್‌ ಆದೇಶವು ಸರಿಯಾಗಿದೆ ಎಂದು ಪೀಠವು ಹೇಳಿದೆ . ಡಿಸೆಂಬರ್‌ 14ರ ನಂತರ ಸ್ವಾಮೀಜಿ ಅವರು ಜಿಲ್ಲೆ ಪ್ರವೇಶಿಸ ಬಹುದು’ ಎಂದು ಪೀಠ ಸ್ಪಷ್ಟಪಡಿಸಿತು.

‘ನಿಮ್ಮನ್ನು ಗಡಿಪಾರು ಮಾಡಲೂ ಜಿಲ್ಲಾಡಳಿತಕ್ಕೆ ಅಧಿಕಾರ ಇದೆ’- ಸುಪ್ರೀಂ

ಸ್ವಾಮೀಜಿ ಅವರನ್ನು ಎಲ್ಲ ಜಿಲ್ಲೆಗಳಿಂದ ಗಡಿಪಾರು ಮಾಡಲು ರಾಜ್ಯದ ಅಧಿಕಾರಿಗಳು ಬಯಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ‘ನಿಮ್ಮ ಕೃತ್ಯಗಳು ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದರೆ, ಜಿಲ್ಲಾಧಿಕಾರಿ ಅಥವಾ ಆಯುಕ್ತರಿಗೆ ನಿಮ್ಮನ್ನು ಗಡಿಪಾರು ಮಾಡಲು ಅಧಿಕಾರವಿದೆ’ ಎಂದು ನ್ಯಾಯಪೀಠವು ಸ್ಪಷ್ಟಪಡಿಸಿತು. ‘ನೀವು ಜಿಲ್ಲೆಯನ್ನು ಪ್ರವೇಶಿಸಬೇಕು ಎಂದು ಏಕೆ ಒತ್ತಾಯಿ ಸುತ್ತೀರಿ? ಭಾರತವು ತುಂಬಾ ದೊಡ್ಡ ದೇಶ. ನೀವು ಬೇರೆಡೆಗೆ ಹೋಗಿ’ ಎಂದು ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಘವೇಂದ್ರ ಶ್ರೀವಾಸ್ತವ ಅವರನ್ನು ಪೀಠ ಕೇಳಿತು.

ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಕರ್ನಾಟಕದ ಹೆಚ್ಚುವರಿ ಅಡ್ವೊಕೇಟ್ ಜನರಲ್ ನಿಶಾಂತ್ ಪಾಟೀಲ ಮತ್ತು ಅಮನ್ ಪನ್ವಾರ್ ಹಾಜರಾದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...