Homeಕರ್ನಾಟಕಕನೇರಿ ಸ್ವಾಮಿಗೆ ಸುಪ್ರೀಂ ಛೀಮಾರಿ: "ನಿಮ್ಮನ್ನು ಗಡಿಪಾರು ಮಾಡಲೂ ಅಧಿಕಾರ ಇದೆ".

ಕನೇರಿ ಸ್ವಾಮಿಗೆ ಸುಪ್ರೀಂ ಛೀಮಾರಿ: “ನಿಮ್ಮನ್ನು ಗಡಿಪಾರು ಮಾಡಲೂ ಅಧಿಕಾರ ಇದೆ”.

- Advertisement -
- Advertisement -
ಇತ್ತೀಚೆಗಷ್ಟೆ ಕನೇರಿಯ ಕಾಡಸಿದ್ದೇಶ್ವರ ಸ್ವಾಮಿ ಮಾಡಿದ್ದ ದ್ವೇಷ ಭಾಷಣ ಕುರಿತು ಸಮಾಜದಲ್ಲಿ ತೀರ್ವ ವಿಮರ್ಶೆ ವ್ಯಕ್ತವಾಗಿತ್ತು. ಇದರ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳತ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಕಾಡಸಿದ್ದೇಶ್ವರ ಸ್ವಾಮಿಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿ ಅರ್ಜಿಯನ್ನು ವಜಾಗೊಳಿಸಿದೆ.

ಲಿಂಗಾಯತ ಮಠಾಧಿಪತಿಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಬಳಸಿ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದ್ದಾರೆ ಎಂಬ ಕಾರಣಕ್ಕೆ ವಿಜಯಪುರ ಜಿಲ್ಲಾಧಿಕಾರಿ ಅವರು ಸ್ವಾಮೀಜಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು.  ಎಂಬ ಆರೋಪದ ಕಾರಣ ಸ್ವಾಮೀಜಿಯವರು ಡಿ. 14ರವರೆಗೆ ವಿಜಯಪುರ ಜಿಲ್ಲೆ ಪ್ರವೇಶಿಸ ಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಇತ್ತೀಚೆಗೆ ಎತ್ತಿ ಹಿಡಿದಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಂಕಜ್‌ ಮಿತ್ತಲ್‌ ಹಾಗೂ ಪ್ರಸನ್ನ ಬಿ.ವರಾಳೆ ಪೀಠವು ಸ್ವಾಮೀಜಿ ಅವರನ್ನು ತರಾಟೆಗೆ ತೆಗೆದುಕೊಂಡಿತು.

‘ನೀವು ಜಿಲ್ಲೆಯಿಂದ ದೂರವಿದ್ದು ಆಧ್ಯಾತ್ಮಿಕ ವಿಷಯಗಳಲ್ಲಿ ತೊಡಗಿಸಿ ಕೊಳ್ಳಲು ಇದು ಒಂದು ಅವಕಾಶ. ನೀವು ಬೇರೆ ಯಾವುದಾದರೂ ಮಠದಲ್ಲಿ ಕುಳಿತು ಧ್ಯಾನ ಮಾಡಬೇಕು. ಈ ನಿರ್ದಿಷ್ಟ ಜಿಲ್ಲೆಗೆ ಹೋಗಲೇಬೇಕೆಂದು ನೀವೇಕೆ ಜಿಲ್ಲಾಡಳಿತಕಕ್ಕೆ ಒತ್ತಡ ಹೇರುತ್ತಿದ್ದೀರಿ’ ಎಂದು ಪೀಠವು ಸ್ವಾಮೀಜಿ ಅವರನ್ನು ಪ್ರಶ್ನಿಸಿತು. ‌

‘ಕೀಳು ಮಟ್ಟದ ಹೇಳಿಕೆ ನೀಡಿರುವ ನೀವು ಉತ್ತಮ ನಾಗರಿಕರಲ್ಲ’ ಎಂದು ಕನೇರಿ ಸ್ವಾಮಿಗೆ ಬಹಳ ಕಟುವಾಗಿ ಹೇಳಿತು.

‘ನೀವು ಧಾರ್ಮಿಕ ನಾಯಕ. ಮಾತನಾಡುವಾಗ ಬಹಳ ಜಾಗರೂಕರಾಗಿರ ಬೇಕು. ನಿಮ್ಮ ಇಂತಹ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ. ಇನ್ನು ಮುಂದೆ ಕೋಮು ಭಾವನೆ ಕೆರಳಿಸುವ ಯಾವುದೇ ಹೇಳಿಕೆ ನೀಡಬೇಡಿ. ಹೈಕೋರ್ಟ್‌ ಆದೇಶದಲ್ಲಿ ತಪ್ಪೇನಿದೆ’ ಎಂದು ಪೀಠ ಪ್ರಶ್ನಿಸಿತು.

‘ಅವಹೇಳನಕಾರಿ ಭಾಷೆ ಬಳಸಿರುವುದು ವಾಕ್ ಸ್ವಾತಂತ್ರ್ಯದ ವ್ಯಾಪ್ತಿಗೆ ಬರುವುದಿಲ್ಲ. ನೀವು ಹೀಗೆಯೇ ವರ್ತಿಸುತ್ತಿದ್ದರೆ ಎಲ್ಲ ಜಿಲ್ಲಾಧಿಕಾರಿಗಳು ಇಂತಹ ಆದೇಶಗಳನ್ನು ಹೊರಡಿಸುತ್ತಾರೆ’ ಎಂದು ಪೀಠ ಸೂಚ್ಯವಾಗಿ ಹೇಳಿತು. ‘ಪ್ರಕರಣದ ವಾಸ್ತವಾಂಶ ಹಾಗೂ ಸನ್ನಿವೇಶ ಗಳನ್ನು ಗಮನಿಸಿದರೆ, ಹೈಕೋರ್ಟ್‌ ಆದೇಶವು ಸರಿಯಾಗಿದೆ ಎಂದು ಪೀಠವು ಹೇಳಿದೆ . ಡಿಸೆಂಬರ್‌ 14ರ ನಂತರ ಸ್ವಾಮೀಜಿ ಅವರು ಜಿಲ್ಲೆ ಪ್ರವೇಶಿಸ ಬಹುದು’ ಎಂದು ಪೀಠ ಸ್ಪಷ್ಟಪಡಿಸಿತು.

‘ನಿಮ್ಮನ್ನು ಗಡಿಪಾರು ಮಾಡಲೂ ಜಿಲ್ಲಾಡಳಿತಕ್ಕೆ ಅಧಿಕಾರ ಇದೆ’- ಸುಪ್ರೀಂ

ಸ್ವಾಮೀಜಿ ಅವರನ್ನು ಎಲ್ಲ ಜಿಲ್ಲೆಗಳಿಂದ ಗಡಿಪಾರು ಮಾಡಲು ರಾಜ್ಯದ ಅಧಿಕಾರಿಗಳು ಬಯಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ‘ನಿಮ್ಮ ಕೃತ್ಯಗಳು ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದರೆ, ಜಿಲ್ಲಾಧಿಕಾರಿ ಅಥವಾ ಆಯುಕ್ತರಿಗೆ ನಿಮ್ಮನ್ನು ಗಡಿಪಾರು ಮಾಡಲು ಅಧಿಕಾರವಿದೆ’ ಎಂದು ನ್ಯಾಯಪೀಠವು ಸ್ಪಷ್ಟಪಡಿಸಿತು. ‘ನೀವು ಜಿಲ್ಲೆಯನ್ನು ಪ್ರವೇಶಿಸಬೇಕು ಎಂದು ಏಕೆ ಒತ್ತಾಯಿ ಸುತ್ತೀರಿ? ಭಾರತವು ತುಂಬಾ ದೊಡ್ಡ ದೇಶ. ನೀವು ಬೇರೆಡೆಗೆ ಹೋಗಿ’ ಎಂದು ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಘವೇಂದ್ರ ಶ್ರೀವಾಸ್ತವ ಅವರನ್ನು ಪೀಠ ಕೇಳಿತು.

ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಕರ್ನಾಟಕದ ಹೆಚ್ಚುವರಿ ಅಡ್ವೊಕೇಟ್ ಜನರಲ್ ನಿಶಾಂತ್ ಪಾಟೀಲ ಮತ್ತು ಅಮನ್ ಪನ್ವಾರ್ ಹಾಜರಾದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...