Homeಮುಖಪುಟಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ (ಎಎಂಯು) ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರದಲ್ಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಇಂದು ತನ್ನ ತೀರ್ಪು ಕಾಯ್ದಿರಿಸಿದೆ ಎಂದು live law ವರದಿ ಮಾಡಿದೆ. ಪೀಠವು 8 ದಿನಗಳ ಕಾಲ ಎರಡೂ ಕಡೆಯ ವಾದಗಳನ್ನು ಆಲಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಸೂರ್ಯ ಕಾಂತ್, ಜೆಬಿ ಪರ್ದಿವಾಲಾ, ದೀಪಂಕರ್ ದತ್ತಾ, ಮನೋಜ್ ಮಿಶ್ರಾ ಮತ್ತು ಎಸ್‌ಸಿ ಶರ್ಮಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಎಎಂಯು ಅಲ್ಪಸಂಖ್ಯಾತ ಸಂಸ್ಥೆ ಅಲ್ಲ ಎಂಬ ಅಲಹಾಬಾದ್ ಹೈಕೋರ್ಟ್‌ನ 2006ರ ತೀರ್ಪಿನ ವಿರುದ್ದದ ಮೇಲ್ಮನವಿಯನ್ನು ಆಲಿಸುತ್ತಿದೆ.

2019ರಲ್ಲಿ, ಸುಪ್ರೀಂ ಕೋರ್ಟ್‌ನ ಮೂವರು ನ್ಯಾಯಾಧೀಶರ ಪೀಠವು, ಪ್ರಕರಣವನ್ನು 7 ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತ್ತು. ಈ ಪ್ರಕರಣದಲ್ಲಿ ಉದ್ಭವಿಸುವ ಸಮಸ್ಯೆಗಳೆಂದರೆ, ಒಂದು ಶಾಸನದಿಂದ (ಎಎಂಯು ಕಾಯಿದೆ-1920) ಸ್ಥಾಪಿಸಲ್ಪಟ್ಟ ಮತ್ತು ಆಡಳಿತ ನಡೆಸುವ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆದುಕೊಳ್ಳಬಹುದೇ ಎಂಬುವುದಾಗಿದೆ.

ಎಎಂಯು ಮತ್ತು ಎಎಂಯು ಓಲ್ಡ್ ಬಾಯ್ಸ್ ಅಸೋಸಿಯೇಷನ್ ಪರ ಹಿರಿಯ ವಕೀಲರಾದ ಡಾ ರಾಜೀವ್ ಧವನ್ ಮತ್ತು ಕಪಿಲ್ ಸಿಬಲ್ ವಾದಿಸುತ್ತಿದ್ದಾರೆ. ಸಲ್ಮಾನ್ ಖುರ್ಷಿದ್, ಶಾದನ್ ಫರಾಸತ್ ಮಧ್ಯಸ್ಥಗಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ನೀರಜ್ ಕಿಶನ್ ಕೌಲ್, ಗುರು ಕೃಷ್ಣ ಕುಮಾರ್, ವಿನಯ್ ನವರೆ, ಯತೀಂದರ್ ಸಿಂಗ್, ವಿಕ್ರಮಜಿತ್ ಬ್ಯಾನರ್ಜಿ (ಎಎಸ್‌ಜಿ) ಮತ್ತು ಕೆ ಎಂ ನಟರಾಜ್ (ಎಎಸ್‌ಜಿ) ಸೇರಿದಂತೆ ಹಲವಾರು ಇತರ ಹಿರಿಯ ವಕೀಲರು ಸಹ ಪ್ರತಿವಾದಿಗಳು ಮತ್ತು ಮಧ್ಯಸ್ಥಗಾರರ ಪರವಾಗಿ ವಾದ ಮಂಡಿಸಿದ್ದಾರೆ.

8 ದಿನಗಳ ಸುದೀರ್ಘ ವಿಚಾರಣೆಯಯಲ್ಲಿ ನ್ಯಾಯಪೀಠದ ಮುಂದೆ ಹಲವಾರು ಪ್ರಮುಖ ಅಂಶಗಳು ಚರ್ಚೆಯಾಗಿವೆ. ಭಾರತೀಯ ಸಂವಿಧಾನದ 30ನೇ ವಿಧಿಯ ವ್ಯಾಖ್ಯಾನದಿಂದ ಹಿಡಿದು, ಲಿಸ್ಟ್‌ 1 ರ ಎಂಟ್ರಿ 63 ಎಎಂಯುನ ಕಾರ್ಯ ನಿರ್ವಹಣೆ, ಇತಿಹಾಸ ಮತ್ತು 1951 ರಿಂದ 1981 ರವರೆಗೆ ಮೂಲ 1920 ಎಎಂಯು ಕಾಯಿದೆಗೆ ತಂದ ವಿವಿಧ ತಿದ್ದುಪಡಿಗಳ ವಿಶ್ಲೇಷಣೆಯೂ ನ್ಯಾಯಾಲಯದಲ್ಲಿ ನಡೆದಿದೆ.

ಇದನ್ನೂ ಓದಿ: ಪೂಜೆಗೆ ಅವಕಾಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ ಜ್ಞಾನವಾಪಿ ಮಸೀದಿ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...