Homeಮುಖಪುಟಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಮತ್ತು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ನಡುವಿನ ಎಲ್ಲಾ ಮತಗಳನ್ನು (ಶೇ.100) ತಾಳೆ ಹಾಕಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಇಂದು (ಏ.18) ತೀರ್ಪು ಕಾಯ್ದಿರಿಸಿದೆ.

ಸುದೀರ್ಘ ವಿಚಾರಣೆಯ ಬಳಿಕ, ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (ಎಡಿಆರ್) ಮತ್ತು ಇತರರು ಸಲ್ಲಿಸಿದ ಅರ್ಜಿಗಳ ತೀರ್ಪನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಕಾಯ್ದಿರಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಪೀಠವು ಇವಿಎಂಗಳ ಭದ್ರತಾ ವೈಶಿಷ್ಟ್ಯಗಳನ್ನು ಅರ್ಥಮಾಡಿಕೊಳ್ಳಲು ಭಾರತೀಯ ಚುನಾವಣಾ ಆಯೋಗದ (ಇಸಿಐ) ಅಧಿಕಾರಿಯೊಂದಿಗೆ ಚರ್ಚೆ ನಡೆಸಿದೆ.

ಇಂದು, ಎರಡನೇ ದಿನದ ವಿಚಾರಣೆಯಲ್ಲಿ, ವಕೀಲ ಪ್ರಶಾಂತ್ ಭೂಷಣ್ ಅವರು ಮತದಾನದ ಸಮಯದಲ್ಲಿ ವಿವಿಪ್ಯಾಟ್ ಮಸೂರದಲ್ಲಿ ಸಂಪೂರ್ಣ ಲೈಟ್ ಇರುವಂತೆ ಮಾಡಲು ಮನವಿ ಮಾಡಿದರು. ಪ್ರಸ್ತುತ ಏಳು ಸೆಕೆಂಡ್‌ಗಳ ಕಾಲ ಮಾತ್ರ ವಿವಿಪ್ಯಾಟ್ ಮಸೂರದಲ್ಲಿ ಲೈಟ್ ಇರುತ್ತವೆ. ಮತದಾನ ಪ್ರಕ್ರಿಯೆ ಮುಗಿಯುವವರೆ ಲೈಟ್ ಇದ್ದರೆ, ಮತದಾರರಿಗೆ ಸ್ಲಿಪ್ ಕಟ್ಟಾಗಿ ಬೀಳುವುದು ನೋಡಬಹುದು ಎಂಬುವುದು ಪ್ರಶಾಂತ್ ಭೂಷಣ್ ಅವರ ವಾದ.

ಇನ್ನೋರ್ವ ವಕೀಲ ನಿಝಾಂ ಪಾಶಾ ಅವರು, ಮತದಾರರು ಭೌತಿಕವಾಗಿ ವಿವಿಪ್ಯಾಟ್ ಚೀಟಿ ತೆಗೆದುಕೊಂಡು ಮತಪೆಟ್ಟಿಗೆಯಲ್ಲಿ ಹಾಕಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು. ಇದು ಮತದಾರರ ಗೌಪ್ಯತೆಯನ್ನು ಉಲ್ಲಂಘಿಸುವುದಿಲ್ಲವೇ? ಎಂದು ನ್ಯಾಯಮೂರ್ತಿ ಖನ್ನಾ ಕೇಳಿದಾಗ, ಮತದಾನದ ಗೌಪ್ಯತೆಯ ಹೆಸರಿನಲ್ಲಿ ಮತದಾರರನ್ನು ಅವರ ಹಕ್ಕಿನಿಂದ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ವೇಳೆ, “ನೀವು ಬಯಸುತ್ತಿರುವ ಪ್ರಾಯೋಗಿಕ ಫಲಿತಾಂಶಗಳನ್ನು ನೀವು ಅರ್ಥಮಾಡಿಕೊಂಡಿದ್ದೀರಿ ಎಂದು ನಾನು ಭಾವಿಸುತ್ತೇನೆ” ಎಂದು ನ್ಯಾಯಮೂರ್ತಿ ಖನ್ನಾ ಪ್ರತಿಕ್ರಿಯಿಸಿದ್ದಾರೆ.

ಹಿರಿಯ ವಕೀಲ ಸಂಜಯ್ ಹೆಗ್ಡೆ, ವಿವಿಪ್ಯಾಟ್ ‘ಆಡಿಟ್’ಗೆ ಒತ್ತು ನೀಡಿದ್ದು, ಇವಿಎಂ ಮತಗಳ ಎಣಿಕೆಯ ನಂತರವೂ ‘ಆಡಿಟ್’ಗಾಗಿ ಎಲ್ಲಾ ವಿವಿಪ್ಯಾಟ್‌ಗಳನ್ನು ಎಣಿಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. 2019ರಲ್ಲಿ ಪ್ರತೀ ಕ್ಷೇತ್ರದ ಐದು ವಿವಿಪ್ಯಾಟ್‌ಗಳ ಮತ ಎಣಿಕೆ ಮಾಡಬೇಕು ಎಂಬ ಆದೇಶವನ್ನು ಪರಿಗಣಿಸದಂತೆ ಹೆಗ್ಡೆ ಮನವಿ ಮಾಡಿದರು. ವ್ಯವಸ್ಥೆಯಲ್ಲಿ ಮತದಾರರ ವಿಶ್ವಾಸವನ್ನು ಹೆಚ್ಚಿಸುವ ಯಾವುದೇ ಕ್ರಮವನ್ನು ಸ್ವಾಗತಿಸಬೇಕು ಎಂದಿದ್ದಾರೆ.

ವಿಚಾರಣೆ ವೇಳೆ, ಕಾಸರಗೋಡಿನಲ್ಲಿ ವಿವಿಪ್ಯಾಟ್ ಪರಿಶೀಲನೆ ವೇಳೆ ಬಿಜೆಪಿ ಚಿಹ್ನೆಯ ಸ್ಲಿಪ್ ಬಂದಿರುವ ಕುರಿತ ‘ಮನೋರಮಾ ಆನ್‌ಲೈನ್‌’ ಸುದ್ದಿಯನ್ನು ವಕೀಲ ಪ್ರಶಾಂತ್ ಭೂಷಣ್ ಉಲ್ಲೇಖಿಸಿದರು. ಈ ವೇಳೆ ನ್ಯಾಯಪೀಠ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಈ ಕುರಿತು ಪರಿಶೀಲಿಸುವಂತೆ ಸೂಚಿಸಿದೆ. ಮಧ್ಯಾಹ್ನ 2 ಗಂಟೆಗೆ ಪೀಠದ ಮುಂದೆ ಉತ್ತರಿಸಿದ ಚುನಾವಣಾ ಆಯೋಗದ ಅಧಿಕಾರಿಗಳು ಮನೋರಮಾ ವರದಿ ಸಂಪೂರ್ಣ ಸುಳ್ಳು ಎಂದು ಹೇಳಿರುವುದಾಗಿ ಲೈವ್‌ ಲಾ ವರದಿ ಮಾಡಿದೆ.

ಇದನ್ನೂ ಓದಿ : ‘ಸಕ್ಕರೆ ಮಟ್ಟ ಹೆಚ್ಚಿಸಿಕೊಳ್ಳಲು ಮಾವಿನಹಣ್ಣು, ಸಿಹಿತಿಂಡಿ ಸೇವಿಸುತ್ತಿರುವ ಕೇಜ್ರಿವಾಲ್..; ಇಡಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...