Homeಮುಖಪುಟಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪವರ್ಗೀಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪವರ್ಗೀಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪ ವರ್ಗೀಕರಣ ಮಾಡುವುದರ ಕಾನೂನುಬದ್ಧತೆ ಪ್ರಶ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ಕಾಯ್ದಿರಿಸಿದೆ.

ಪ್ರಕರಣ ಕುರಿತಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿತ್ತಲ್‌, ಮನೋಜ್ ಮಿಶ್ರಾ ಹಾಗೂ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿತು.

ವಿಚಾರಣೆ ವೇಳೆ ಸಿಜೆಐ ಚಂದ್ರಚೂಡ್ ಅವರು ಪರಿಶಿಷ್ಟ ಸಮುದಾಯಗಳ ‘ಉಪ-ವರ್ಗೀಕರಣ’ ಮತ್ತು ‘ಉಪ- ವಿಂಗಡೀಕರಣ’ ನಡುವಿನ ವ್ಯತ್ಯಾಸ ತಿಳಿದ್ದಾರೆ. ಮೀಸಲಾತಿ ಪ್ರಯೋಜನಗಳು ಹೆಚ್ಚು ಹಿಂದುಳಿದ ಗುಂಪುಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮೀಸಲಾತಿ ವರ್ಗದ ಸಮುದಾಯಗಳನ್ನು ಉಪ- ವಿಂಗಡಣೆ ಮಾಡಬೇಕಾಗಬಹುದು ಎಂದು ಸಿಜೆಐ ಹೇಳಿದ್ದಾರೆ.

ಅನುಚ್ಛೇದ 341 (ಪರಿಶಿಷ್ಟ ಜಾತಿಗಳನ್ನು ಅಧಿಸೂಚಿಸುವ ರಾಷ್ಟ್ರಪತಿಗಳ ಅಧಿಕಾರ; ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಸೇರಿಸುವ ಅಥವಾ ಹೊರಗಿಡುವ ಸಂಸತ್ತಿನ ಅಧಿಕಾರ) ರಾಜ್ಯಗಳು ಪರಿಶಿಷ್ಟ ಜಾತಿಗಳಲ್ಲಿ ಉಪ ಗುಂಪುಗಳನ್ನು ರಚಿಸುವುದನ್ನು ನಿರ್ಬಂಧಿಸುತ್ತದೆ ಎಂದು ವಾದಿಸಿದ ಹಿರಿಯ ವಕೀಲ ಮನೋಜ್ ಸ್ವರೂಪ್ ಅವರ ವಾದಗಳಿಗೆ ಪ್ರತಿಕ್ರಿಯೆಯಾಗಿ ಸಿಜೆಐ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿ ಎಂಬುದು ಅಧಿಸೂಚಿತವಾದ ಗುಂಪಾಗಿದ್ದು ಮೀಸಲಾತಿ ಪ್ರಯೋಜನಗಳಿಗಾಗಿ ಅಧಿಸೂಚನೆ ಹೊರಡಿಸಿದ ನಂತರ ಏಕರೂಪದ ಗುಂಪಾಗುತ್ತದೆ ಎಂದು ಸ್ವರೂಪ್ ವಾದಿಸಿದ್ದಾರೆ. ಈ ಅಭಿಪ್ರಾಯದ ಬಗ್ಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದ್ದು, ಪರಿಶಿಷ್ಟ ಜಾತಿಯನ್ನು ಒಂದು ಜಾತಿಯಾಗಿ ನೋಡಲಾಗದು ಎಂದು ಸಿಜೆಐ ಹೇಳಿದ್ದಾರೆ.

ವಿಧಿ 341 ಪರಿಶಿಷ್ಟ ಜಾತಿಗಳ ಪದನಾಮವನ್ನು ಮೀಸಲಾತಿಗೆ ತರುವ ವಿಚಾರವನ್ನು ಸಂಸತ್ತಿಗೆ (ಕೇಂದ್ರಕ್ಕೆ) ಬಿಟ್ಟಿದ್ದರೂ, (ರಾಜ್ಯಗಳು ಯಾವುದೇ ಹಿಂದುಳಿದ ವರ್ಗದ ನಾಗರಿಕರಿಗೆ ರಾಜ್ಯಗಳು ಉದ್ಯೋಗದಲ್ಲಿ ಮೀಸಲಾತಿ ನೀಡುವ) ವಿಧಿ 16 ಈಗಲೂ ರಾಜ್ಯಗಳಿಗೆ ಅನುವು ಮಾಡಿಕೊಡುವ ಪಾತ್ರ ನೀಡಿದೆ ಎಂದು ನ್ಯಾಯಾಲಯು ತಿಳಿಸಿದೆ.

ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಸಮುದಯಾಗಳ ಒಳ ವಿಂಗಡಣೆ ಮಾಡದಂತೆ ರಾಜ್ಯಗಳನ್ನು ನಿರ್ಬಂಧಿಸಿದರೆ ಅದು ಅಸಮಾನತೆಗೆ ಕಾರಣವಾಗಬಹುದು ಎಂದು ನ್ಯಾ. ಗವಾಯಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

“ಒಳ ವಿಂಗಡಣೆಗೆ ವಿರೋಧ ಮಾಡುತ್ತಿರುವುದಾದರೂ ಏಕೆ? ಒಳ- ವಿಂಗಡೀಕರಣ ಆ ಜಾತಿಯೊಳಗಿನ ಇತರರಿಗೂ ಸಹಾಯ ಮಾಡುತ್ತದೆ, ಇಲ್ಲದಿದ್ದರೆ ಕೇವಲ ಒಂದು ವರ್ಗಕ್ಕೆ ಮಾತ್ರ ಪ್ರಯೋಜನಗಳು ಸಿಗುತ್ತವೆ” ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಅಭಿಪ್ರಾಯಪಟ್ಟಿದ್ದಾರೆ.

ಪರಿಶಿಷ್ಟ ವರ್ಗದೊಳಗೂ ಒಂದು ವರ್ಗ ಇರಬಹುದು. ಹಾಗಿದ್ದ ಮಾತ್ರಕ್ಕೆ ಅದು ಕೃತಕ ವರ್ಗವೇನೂ ಅಲ್ಲ. ವಸ್ತುನಿಷ್ಠ ಮಾನದಂಡಗಳಿಂದ ಅದು ಒಂದು ವರ್ಗ ಎಂಬುದನ್ನು ಆ ಸಮುದಾಯ ಸಾಬೀತುಪಡಿಸಿದರೆ ಆಗ ತನ್ನ ಸಮುದಾಯದ ಪ್ರಬಲ ಜಾತಿಗಳ ಸೌಲಭ್ಯವನ್ನು ಅದು ಪಡೆಯುತ್ತದೆ ಎಂದು ಸಿಜೆಐ ತಿಳಿಸಿದರು.

ಪರಿಶಿಷ್ಟ ಸಮುದಾಯಗಳ ಒಳ ವರ್ಗೀಕರಣಕ್ಕಾಗಿ 2006ರಲ್ಲಿ ಪಂಜಾಬ್ ವಿಧಾನಸಭೆ ‘ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ’ ಯನ್ನು ಜಾರಿಗೆ ತಂದಿತ್ತು. ಆದರೆ ಅದನ್ನು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಮಾಹಿತಿ ಕೃಪೆ : ಬಾರ್ & ಬೆಂಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...