Homeಮುಖಪುಟಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪವರ್ಗೀಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪವರ್ಗೀಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪ ವರ್ಗೀಕರಣ ಮಾಡುವುದರ ಕಾನೂನುಬದ್ಧತೆ ಪ್ರಶ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ಕಾಯ್ದಿರಿಸಿದೆ.

ಪ್ರಕರಣ ಕುರಿತಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿತ್ತಲ್‌, ಮನೋಜ್ ಮಿಶ್ರಾ ಹಾಗೂ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿತು.

ವಿಚಾರಣೆ ವೇಳೆ ಸಿಜೆಐ ಚಂದ್ರಚೂಡ್ ಅವರು ಪರಿಶಿಷ್ಟ ಸಮುದಾಯಗಳ ‘ಉಪ-ವರ್ಗೀಕರಣ’ ಮತ್ತು ‘ಉಪ- ವಿಂಗಡೀಕರಣ’ ನಡುವಿನ ವ್ಯತ್ಯಾಸ ತಿಳಿದ್ದಾರೆ. ಮೀಸಲಾತಿ ಪ್ರಯೋಜನಗಳು ಹೆಚ್ಚು ಹಿಂದುಳಿದ ಗುಂಪುಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮೀಸಲಾತಿ ವರ್ಗದ ಸಮುದಾಯಗಳನ್ನು ಉಪ- ವಿಂಗಡಣೆ ಮಾಡಬೇಕಾಗಬಹುದು ಎಂದು ಸಿಜೆಐ ಹೇಳಿದ್ದಾರೆ.

ಅನುಚ್ಛೇದ 341 (ಪರಿಶಿಷ್ಟ ಜಾತಿಗಳನ್ನು ಅಧಿಸೂಚಿಸುವ ರಾಷ್ಟ್ರಪತಿಗಳ ಅಧಿಕಾರ; ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಸೇರಿಸುವ ಅಥವಾ ಹೊರಗಿಡುವ ಸಂಸತ್ತಿನ ಅಧಿಕಾರ) ರಾಜ್ಯಗಳು ಪರಿಶಿಷ್ಟ ಜಾತಿಗಳಲ್ಲಿ ಉಪ ಗುಂಪುಗಳನ್ನು ರಚಿಸುವುದನ್ನು ನಿರ್ಬಂಧಿಸುತ್ತದೆ ಎಂದು ವಾದಿಸಿದ ಹಿರಿಯ ವಕೀಲ ಮನೋಜ್ ಸ್ವರೂಪ್ ಅವರ ವಾದಗಳಿಗೆ ಪ್ರತಿಕ್ರಿಯೆಯಾಗಿ ಸಿಜೆಐ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿ ಎಂಬುದು ಅಧಿಸೂಚಿತವಾದ ಗುಂಪಾಗಿದ್ದು ಮೀಸಲಾತಿ ಪ್ರಯೋಜನಗಳಿಗಾಗಿ ಅಧಿಸೂಚನೆ ಹೊರಡಿಸಿದ ನಂತರ ಏಕರೂಪದ ಗುಂಪಾಗುತ್ತದೆ ಎಂದು ಸ್ವರೂಪ್ ವಾದಿಸಿದ್ದಾರೆ. ಈ ಅಭಿಪ್ರಾಯದ ಬಗ್ಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದ್ದು, ಪರಿಶಿಷ್ಟ ಜಾತಿಯನ್ನು ಒಂದು ಜಾತಿಯಾಗಿ ನೋಡಲಾಗದು ಎಂದು ಸಿಜೆಐ ಹೇಳಿದ್ದಾರೆ.

ವಿಧಿ 341 ಪರಿಶಿಷ್ಟ ಜಾತಿಗಳ ಪದನಾಮವನ್ನು ಮೀಸಲಾತಿಗೆ ತರುವ ವಿಚಾರವನ್ನು ಸಂಸತ್ತಿಗೆ (ಕೇಂದ್ರಕ್ಕೆ) ಬಿಟ್ಟಿದ್ದರೂ, (ರಾಜ್ಯಗಳು ಯಾವುದೇ ಹಿಂದುಳಿದ ವರ್ಗದ ನಾಗರಿಕರಿಗೆ ರಾಜ್ಯಗಳು ಉದ್ಯೋಗದಲ್ಲಿ ಮೀಸಲಾತಿ ನೀಡುವ) ವಿಧಿ 16 ಈಗಲೂ ರಾಜ್ಯಗಳಿಗೆ ಅನುವು ಮಾಡಿಕೊಡುವ ಪಾತ್ರ ನೀಡಿದೆ ಎಂದು ನ್ಯಾಯಾಲಯು ತಿಳಿಸಿದೆ.

ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಸಮುದಯಾಗಳ ಒಳ ವಿಂಗಡಣೆ ಮಾಡದಂತೆ ರಾಜ್ಯಗಳನ್ನು ನಿರ್ಬಂಧಿಸಿದರೆ ಅದು ಅಸಮಾನತೆಗೆ ಕಾರಣವಾಗಬಹುದು ಎಂದು ನ್ಯಾ. ಗವಾಯಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

“ಒಳ ವಿಂಗಡಣೆಗೆ ವಿರೋಧ ಮಾಡುತ್ತಿರುವುದಾದರೂ ಏಕೆ? ಒಳ- ವಿಂಗಡೀಕರಣ ಆ ಜಾತಿಯೊಳಗಿನ ಇತರರಿಗೂ ಸಹಾಯ ಮಾಡುತ್ತದೆ, ಇಲ್ಲದಿದ್ದರೆ ಕೇವಲ ಒಂದು ವರ್ಗಕ್ಕೆ ಮಾತ್ರ ಪ್ರಯೋಜನಗಳು ಸಿಗುತ್ತವೆ” ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಅಭಿಪ್ರಾಯಪಟ್ಟಿದ್ದಾರೆ.

ಪರಿಶಿಷ್ಟ ವರ್ಗದೊಳಗೂ ಒಂದು ವರ್ಗ ಇರಬಹುದು. ಹಾಗಿದ್ದ ಮಾತ್ರಕ್ಕೆ ಅದು ಕೃತಕ ವರ್ಗವೇನೂ ಅಲ್ಲ. ವಸ್ತುನಿಷ್ಠ ಮಾನದಂಡಗಳಿಂದ ಅದು ಒಂದು ವರ್ಗ ಎಂಬುದನ್ನು ಆ ಸಮುದಾಯ ಸಾಬೀತುಪಡಿಸಿದರೆ ಆಗ ತನ್ನ ಸಮುದಾಯದ ಪ್ರಬಲ ಜಾತಿಗಳ ಸೌಲಭ್ಯವನ್ನು ಅದು ಪಡೆಯುತ್ತದೆ ಎಂದು ಸಿಜೆಐ ತಿಳಿಸಿದರು.

ಪರಿಶಿಷ್ಟ ಸಮುದಾಯಗಳ ಒಳ ವರ್ಗೀಕರಣಕ್ಕಾಗಿ 2006ರಲ್ಲಿ ಪಂಜಾಬ್ ವಿಧಾನಸಭೆ ‘ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ’ ಯನ್ನು ಜಾರಿಗೆ ತಂದಿತ್ತು. ಆದರೆ ಅದನ್ನು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಮಾಹಿತಿ ಕೃಪೆ : ಬಾರ್ & ಬೆಂಚ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...