Homeಮುಖಪುಟಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪವರ್ಗೀಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪವರ್ಗೀಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪ ವರ್ಗೀಕರಣ ಮಾಡುವುದರ ಕಾನೂನುಬದ್ಧತೆ ಪ್ರಶ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ಕಾಯ್ದಿರಿಸಿದೆ.

ಪ್ರಕರಣ ಕುರಿತಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿತ್ತಲ್‌, ಮನೋಜ್ ಮಿಶ್ರಾ ಹಾಗೂ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿತು.

ವಿಚಾರಣೆ ವೇಳೆ ಸಿಜೆಐ ಚಂದ್ರಚೂಡ್ ಅವರು ಪರಿಶಿಷ್ಟ ಸಮುದಾಯಗಳ ‘ಉಪ-ವರ್ಗೀಕರಣ’ ಮತ್ತು ‘ಉಪ- ವಿಂಗಡೀಕರಣ’ ನಡುವಿನ ವ್ಯತ್ಯಾಸ ತಿಳಿದ್ದಾರೆ. ಮೀಸಲಾತಿ ಪ್ರಯೋಜನಗಳು ಹೆಚ್ಚು ಹಿಂದುಳಿದ ಗುಂಪುಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮೀಸಲಾತಿ ವರ್ಗದ ಸಮುದಾಯಗಳನ್ನು ಉಪ- ವಿಂಗಡಣೆ ಮಾಡಬೇಕಾಗಬಹುದು ಎಂದು ಸಿಜೆಐ ಹೇಳಿದ್ದಾರೆ.

ಅನುಚ್ಛೇದ 341 (ಪರಿಶಿಷ್ಟ ಜಾತಿಗಳನ್ನು ಅಧಿಸೂಚಿಸುವ ರಾಷ್ಟ್ರಪತಿಗಳ ಅಧಿಕಾರ; ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಸೇರಿಸುವ ಅಥವಾ ಹೊರಗಿಡುವ ಸಂಸತ್ತಿನ ಅಧಿಕಾರ) ರಾಜ್ಯಗಳು ಪರಿಶಿಷ್ಟ ಜಾತಿಗಳಲ್ಲಿ ಉಪ ಗುಂಪುಗಳನ್ನು ರಚಿಸುವುದನ್ನು ನಿರ್ಬಂಧಿಸುತ್ತದೆ ಎಂದು ವಾದಿಸಿದ ಹಿರಿಯ ವಕೀಲ ಮನೋಜ್ ಸ್ವರೂಪ್ ಅವರ ವಾದಗಳಿಗೆ ಪ್ರತಿಕ್ರಿಯೆಯಾಗಿ ಸಿಜೆಐ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿ ಎಂಬುದು ಅಧಿಸೂಚಿತವಾದ ಗುಂಪಾಗಿದ್ದು ಮೀಸಲಾತಿ ಪ್ರಯೋಜನಗಳಿಗಾಗಿ ಅಧಿಸೂಚನೆ ಹೊರಡಿಸಿದ ನಂತರ ಏಕರೂಪದ ಗುಂಪಾಗುತ್ತದೆ ಎಂದು ಸ್ವರೂಪ್ ವಾದಿಸಿದ್ದಾರೆ. ಈ ಅಭಿಪ್ರಾಯದ ಬಗ್ಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದ್ದು, ಪರಿಶಿಷ್ಟ ಜಾತಿಯನ್ನು ಒಂದು ಜಾತಿಯಾಗಿ ನೋಡಲಾಗದು ಎಂದು ಸಿಜೆಐ ಹೇಳಿದ್ದಾರೆ.

ವಿಧಿ 341 ಪರಿಶಿಷ್ಟ ಜಾತಿಗಳ ಪದನಾಮವನ್ನು ಮೀಸಲಾತಿಗೆ ತರುವ ವಿಚಾರವನ್ನು ಸಂಸತ್ತಿಗೆ (ಕೇಂದ್ರಕ್ಕೆ) ಬಿಟ್ಟಿದ್ದರೂ, (ರಾಜ್ಯಗಳು ಯಾವುದೇ ಹಿಂದುಳಿದ ವರ್ಗದ ನಾಗರಿಕರಿಗೆ ರಾಜ್ಯಗಳು ಉದ್ಯೋಗದಲ್ಲಿ ಮೀಸಲಾತಿ ನೀಡುವ) ವಿಧಿ 16 ಈಗಲೂ ರಾಜ್ಯಗಳಿಗೆ ಅನುವು ಮಾಡಿಕೊಡುವ ಪಾತ್ರ ನೀಡಿದೆ ಎಂದು ನ್ಯಾಯಾಲಯು ತಿಳಿಸಿದೆ.

ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಸಮುದಯಾಗಳ ಒಳ ವಿಂಗಡಣೆ ಮಾಡದಂತೆ ರಾಜ್ಯಗಳನ್ನು ನಿರ್ಬಂಧಿಸಿದರೆ ಅದು ಅಸಮಾನತೆಗೆ ಕಾರಣವಾಗಬಹುದು ಎಂದು ನ್ಯಾ. ಗವಾಯಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

“ಒಳ ವಿಂಗಡಣೆಗೆ ವಿರೋಧ ಮಾಡುತ್ತಿರುವುದಾದರೂ ಏಕೆ? ಒಳ- ವಿಂಗಡೀಕರಣ ಆ ಜಾತಿಯೊಳಗಿನ ಇತರರಿಗೂ ಸಹಾಯ ಮಾಡುತ್ತದೆ, ಇಲ್ಲದಿದ್ದರೆ ಕೇವಲ ಒಂದು ವರ್ಗಕ್ಕೆ ಮಾತ್ರ ಪ್ರಯೋಜನಗಳು ಸಿಗುತ್ತವೆ” ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಅಭಿಪ್ರಾಯಪಟ್ಟಿದ್ದಾರೆ.

ಪರಿಶಿಷ್ಟ ವರ್ಗದೊಳಗೂ ಒಂದು ವರ್ಗ ಇರಬಹುದು. ಹಾಗಿದ್ದ ಮಾತ್ರಕ್ಕೆ ಅದು ಕೃತಕ ವರ್ಗವೇನೂ ಅಲ್ಲ. ವಸ್ತುನಿಷ್ಠ ಮಾನದಂಡಗಳಿಂದ ಅದು ಒಂದು ವರ್ಗ ಎಂಬುದನ್ನು ಆ ಸಮುದಾಯ ಸಾಬೀತುಪಡಿಸಿದರೆ ಆಗ ತನ್ನ ಸಮುದಾಯದ ಪ್ರಬಲ ಜಾತಿಗಳ ಸೌಲಭ್ಯವನ್ನು ಅದು ಪಡೆಯುತ್ತದೆ ಎಂದು ಸಿಜೆಐ ತಿಳಿಸಿದರು.

ಪರಿಶಿಷ್ಟ ಸಮುದಾಯಗಳ ಒಳ ವರ್ಗೀಕರಣಕ್ಕಾಗಿ 2006ರಲ್ಲಿ ಪಂಜಾಬ್ ವಿಧಾನಸಭೆ ‘ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ’ ಯನ್ನು ಜಾರಿಗೆ ತಂದಿತ್ತು. ಆದರೆ ಅದನ್ನು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಮಾಹಿತಿ ಕೃಪೆ : ಬಾರ್ & ಬೆಂಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...