Homeಮುಖಪುಟ‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು...

‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದ ಸುಪ್ರೀಂ

- Advertisement -
- Advertisement -

ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಆರೋಪಿಗಳನ್ನು ಶಿಕ್ಷಿಸಲು, ‘ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆಗಿರಬೇಕು’ ಎಂಬ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರು ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ. ಪೋಕ್ಸೊ ಕಾಯಿದೆಯಡಿ ಲೈಂಗಿಕ ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಮುಖ್ಯ ಅಂಶ, ‘ಲೈಂಗಿಕ ಉದ್ದೇಶವೇ ಹೊರತು ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆಗಿದೆಯೆ ಎಂಬುವುದಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕವಿಲ್ಲದೆ” ಮುಟ್ಟುವುದು ಲೈಂಗಿಕ ಅಪರಾಧ ಆಗುವುದಿಲ್ಲ ಎಂದು ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್‌, 12 ವರ್ಷದ ಮಗುವನ್ನು ‘ತಡವಿ’ ಲೈಂಗಿಕ ಕಿರುಕುಳ ನಡೆಸಿದ್ದಾನೆ ಎನ್ನಲಾಗಿದ್ದ ಆರೋಪಿಯ ಮೇಲಿನ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದದಿಂದ ಖುಲಾಸೆಗೊಳಿಸಿತ್ತು.

ಇದನ್ನೂ ಓದಿ: ಮಕ್ಕಳ ಮೇಲಿನ ಲೈಂಗಿಕ ಹಿಂಸಾಚಾರ; ಮುಂಬೈ ಹೈಕೋರ್ಟ್ ತೀರ್ಪಿನ ‘ಡಬಲ್ ಧಮಾಕಾ’!!

ನಾಲ್ಕು ವಾರಗಳಲ್ಲಿ ಶರಣಾಗುವಂತೆ ಮತ್ತು ವಿಶೇಷ ಪೋಕ್ಸೊ ನ್ಯಾಯಾಲಯವು ನೀಡಿದ ಮೂರು ವರ್ಷ ಮತ್ತು ಐದು ವರ್ಷಗಳ ಸಜೆಯನ್ನು ಅನುಭವಿಸುವಂತೆ ಆರೋಪಿಗೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ಜನವರಿಯಲ್ಲಿ, ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ನಾಲ್ಕು ವರ್ಷಗಳ ಹಿಂದೆ 12 ವರ್ಷದ ಬಾಲಕಿಯನ್ನು ತಡವಿದ್ದಕ್ಕಾಗಿ ಪೋಕ್ಸೊ ಕಾಯ್ದೆಯಡಿಯಲ್ಲಿ ತಪ್ಪಿತಸ್ಥನೆಂದು ಸಾಬೀತಾದ ವ್ಯಕ್ತಿಯ ಶಿಕ್ಷೆಯನ್ನು ರದ್ದುಗೊಳಿಸಿತ್ತು.

ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕವಿಲ್ಲದೆ ಅಪ್ರಾಪ್ತ ವಯಸ್ಕ ಮಗುವಿನ ಎದೆ ಹಿಡಿಯುವುದನ್ನು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ ಎಂದು ಪೋಕ್ಸೋ ಕಾಯಿದೆಯಡಿ ವ್ಯಾಖ್ಯಾನಿಸಲಾಗಿದೆ ಎಂದು ಬಾಂಬೆ ಹೈಕೋರ್ಟ್‌ ಜನವರಿ 19 ರಂದು ವಿವಾದಾತ್ಮಕ ತೀರ್ಪು ನೀಡಿತ್ತು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಾಧೀಶರ ಈ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಆದೇಶವನ್ನು ತಡೆಹಿಡಿದಿತ್ತು. ‘ಈ ಆದೇಶವು ಗೊಂದಲದ ಮತ್ತು ಅಪಾಯಕಾರಿ ಪೂರ್ವನಿದರ್ಶನವನ್ನು ಸೃಷ್ಟಿಸುತ್ತದೆ’ ಎಂದು ಅಟಾರ್ನಿ ಜನರಲ್ ಹೇಳಿದ್ದರು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...