HomeUncategorizedಮೀಸಲಾತಿಯ ಕುರಿತ ಸುಪ್ರೀಂ ತೀರ್ಪು ಅಪಾಯಕಾರಿಯಾದುದು..

ಮೀಸಲಾತಿಯ ಕುರಿತ ಸುಪ್ರೀಂ ತೀರ್ಪು ಅಪಾಯಕಾರಿಯಾದುದು..

ನಾವು ಖಾಸಗೀಕರಣದ ವಿರುದ್ಧ ಹೋರಾಡುತ್ತಲೆ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಕೇಳುವ ಹೋರಾಟಗಳನ್ನು ಕಟ್ಟಬೇಕಿದೆ. ಜೊತೆ ಜೊತೆಗೆ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿಯನ್ನು ಕೇಳಬೇಕಾಗುತ್ತದೆ.

- Advertisement -
- Advertisement -

ಮುಖೇಶ್ ಕುಮಾರ್ ವರ್ಸಸ್‌ ಉತ್ತರಖಂಡ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೀಸಲಾತಿಯು ಮೂಲಭೂತ ‌ಹಕ್ಕಲ್ಲ ಎಂದು ತೀರ್ಪು ನೀಡಿದೆ. ಮುಖೇಶ್ ಕುಮಾರ್ ಎನ್ನುವವರು ಉತ್ತರ ಖಂಡ ರಾಜ್ಯ ಸರ್ಕಾರ ಭಡ್ತಿ ಮೀಸಲಾತಿಯನ್ನು ನೀಡುತ್ತಿಲ್ಲ ಎಂದು ಆರೋಪಿಸಿ ಸುಪ್ರೀಂ ಮೆಟ್ಟಿಲೇರಿದ್ದರು. ಆಗ ಮೀಸಲಾತಿ ಮೂಲಭೂತ ಹಕ್ಕಲ್ಲ ಮತ್ತು ಮೀಸಲಾತಿ ನೀಡಿ ಎಂದು ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡುವಂತಿಲ್ಲ ಎಂದಿದೆ. ಆದರೆ ಸರ್ಕಾರ ಮೀಸಲಾತಿಯನ್ನು ಕೊಡಲು ಹೊರಟರೆ ಅದನ್ನು ಮೂಲಭೂತ ಹಕ್ಕಾಗಿ ಪರಿಗಣಿಸಬಹುದು ಎಂದು ಹೇಳಿದೆ.

ಮೀಸಲಾತಿ ಎಂಬ ಶಬ್ದ ಕೇಳಿದ ಕೂಡಲೆ ಎಲ್ಲರ ಕಣ್ಣುಗಳು ಎಸ್ಸಿ ಎಸ್ಟಿ ಸಮುದಾಯದ ಕಡೆಗೆ ಹೋಗುತ್ತದೆ. ಮೀಸಲಾತಿ ಎಂದರೆ ದಲಿತರನ್ನು, ಹಿಂದುಳಿದವರನ್ನು ಆರ್ಥಿಕವಾಗಿ ಮೇಲಕ್ಕೆತ್ತುವ ಒಂದು ದಾರಿ ಎಂದು ಹೆಚ್ಚಿನ ಜನರ ಅಭಿಪ್ರಾಯ. ಇಲ್ಲಿ ನಾವು ಮುಖ್ಯವಾಗಿ ತಿಳಿಯಬೇಕಾಗಿರುವುದೇನೆಂದರೆ ತಲತಲಾಂತರದಿಂದ ನೂರು ಶೇಕಡ ಮೀಸಲಾತಿ ಪಡೆಯುವ ಕೆಲವೇ ಕೆಲವು ಸಮುದಾಯಗಳ ಬದಲಿಗೆ ಎಲ್ಲರಿಗೂ ಸಮಾನವಾಗಿ ಹಂಚುವ ಒಂದು ವ್ಯವಸ್ಥೆಯಾಗಿ ಮೀಸಲಾತಿ ಜಾರಿಯಲ್ಲಿದೆ.

ಮೀಸಲಾತಿ ಕೇವಲ ಎಸ್ಸಿ, ಎಸ್ಟಿಗಳು ಮಾತ್ರ ಪಡೆಯುತ್ತಿಲ್ಲ. ಶೇ. 23 ಇತರ ಹಿಂದುಳಿದ ಸಮುದಾಯ ಕೂಡಾ ಪಡೆಯುತ್ತಿದೆ. ಅಸಮಾನತೆಯಿಂದ ಕೂಡಿದ, ತಲೆತಲಾಂತರದಿಂದ ಜಾತಿಯ ಕಾರಣಕ್ಕಾಗಿ ಅನುಮಾನಿಸಲ್ಪಟ್ಟ, ಅವಮಾನಿಸಲ್ಪಟ್ಟ ಸಮಾಜದ ಎಲ್ಲರಿಗೂ ಸಮವಾಗಿ ಮೀಸಲಾತಿ ಸಿಗಬೇಕು ಎಂದು ಬಯಸಬೇಕೆ ಹೊರತು ಮೀಸಲಾತಿ ಬೇಡ ಎನ್ನುವುದು ಅಮಾನವೀಯತೆಯೆ ಆಗಿದೆ. ತೀವ್ರಗತಿಯಲ್ಲಿ ಬೆಳೆಯುತ್ತಿರುವ ಅಸಮಾನ ಸಮಾಜವನ್ನು ಸಮಸಮಾಜವನ್ನಾಗಿ ಕಟ್ಟಲು ಬೇಕಾಗಿ ಈ ಮೀಸಲಾತಿ ಇದೆ‌ಯೇ ಹೊರತು ಬಡತನ ಹೋಗಲಾಡಿಸಲು ಅಲ್ಲ. ಬಡತನ ನಿರ್ಮೂಲನೆಗೋಸ್ಕರ ಸರ್ಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ. ಅದು ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸುತ್ತದೆ ಎಂದು ನಂಬಿದ್ದೇವೆ. ಆದರೆ ಮೀಸಲಾತಿ ಎನ್ನುವುದು ಸಾಮಾಜಿಕ ಸಮಾನತೆಗಾಗಿ.

ಬಡತನ ಹೋದರೆ ಸಾಮಾಜಿಕ ಅಸಮಾನತೆಯ ಹೋಗುತ್ತದೆ ಎಂಬ ವಾದವಿದೆ ಆದರೆ ಇದು ಅರ್ಧ ಸತ್ಯ ಮಾತ್ರವೇ ಆಗಿದೆ.‌ ಉದಾಹರಣೆಗೆ ನಮ್ಮ ದೇಶದ ಪ್ರಥಮ‌ ಪ್ರಜೆ ಎಂದು ಕರೆಯಲ್ಪಡುವ ರಾಷ್ಟ್ರಪತಿಯನ್ನು ದಲಿತ ಎಂಬ ಕಾರಣಕ್ಕೆ ಧಾರ್ಮಿಕ ಕ್ಷೇತ್ರವೊಂದರಿಂದ ಹೊರಗಿಟ್ಟ ಪ್ರಕರಣ ನೀವು ಓದಿರಬಹುದು. ಅಲ್ಲಿಗೆ ಭಾರತದ ಸಾಮಾಜಿಕ ಸ್ಥಿತಿಯ ಬಗ್ಗೆ ನಿಮಗರಿವಾಗಬಹುದು.

ಭಾರತದ ಸಂವಿಧಾನವು ದೇಶದ ಎಲ್ಲಾ ನಾಗರೀಕರಿಗೆ ಸಮಾನತೆಯ ಭರವಸೆ ನೀಡುತ್ತದೆ. ಭಾರತದ ಎಲ್ಲಾ ಜನರಿಗೆ ಸಮಾನ ಅವಕಾಶ, ಪ್ರಾತಿನಿಧಿತ್ವವನ್ನು ನೀಡುವುದಾಗಿ ಭಾರತದ ಸಂವಿಧಾನ ಹೇಳುತ್ತದೆ. ಸಂವಿಧಾನದ 14,15,16 ನೇ ವಿಧಿಗಳು ಸಮಾನತೆಯನ್ನೆ ಹೇಳುತ್ತವೆ. ಆದರೆ ಭಾರತದ ಸಾಮಾಜಿಕ ಸ್ಥಿತಿ ಸಾವಿರಾರು ವರ್ಷಗಳಿಂದ ಒಂದು ಪಿರಮಿಡ್ಡಿನ ರೂಪದಲ್ಲಿ ಇರುವುದರಿಂದ ಸರ್ವ ಭಾರತೀಯರಿಗೆ ಸಮಾನ ಅವಕಾಶಗಳು ಸಿಗಬೇಕೆಂದು ಮೀಸಲಾತಿಯನ್ನು ಪರಿಚಯಿಸಿದೆ. ಪ್ರಸ್ತುತ ಭಾರತದ ಸಾಮಾಜಿಕ ಸ್ಥಿತಿ ಈಗಲೂ ಹಾಗೆಯೇ ಇದೆ, ನೆನಪಿಡಿ ‌ಸ್ವಾತಂತ್ರ್ಯ ಬಂದು ಎಪ್ಪತ್ತೆರಡು ವರ್ಷಗಳಾಗಿವೆ.

ಸಧ್ಯಕ್ಕೆ ನಮ್ಮನ್ನು ಆಳುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ಮಾತೃ ಸಂಘಟನೆಯಾದ ಆರೆಸ್ಸೆಸ್‌ಗೆ ಮೀಸಲಾತಿ ಬಗ್ಗೆ ತೀವ್ರವಾದ ಅಸಮಾಧಾನ ಇರುವುದು ಎಲ್ಲರಿಗೂ ತಿಳಿದ ವಿಷಯವೇ ಆಗಿದೆ. ಅದು ಮೀಸಲಾತಿ ಬಗ್ಗೆ ಅವಾಗವಾಗ ತಕರಾರನ್ನೂ ತೆಗೆದು ಈ ಚರ್ಚೆಯನ್ನು ಜೀವಂತವಾಗಿಡುತ್ತಿದೆ. ಇವರ ವಾದದ ಪ್ರಕಾರ ಮೀಸಲಾತಿ ಕೊಟ್ಟರೆ ಗುಣಮಟ್ಟದ ಕೊರತೆ ಉಂಟಾಗುತ್ತದೆ ಎನ್ನುವುದಾಗಿದೆ. ಆದರೆ ಆ ಗುಣಮಟ್ಟದ ಕೊರತೆಗೆ ಕಾರಣ ಏನು‌, ಯಾಕೆ ಭಾರತದ ಸಾಮಾಜಿಕ ಸ್ಥಿತಿ ಹೀಗಾಗಿದೆ ಎಂಬುದರ ಬಗ್ಗೆ ಇವರು ಮಾತೆ‌ ಎತ್ತುವುದಿಲ್ಲ, ಆದರೆ ನಿಜ ಸ್ಥಿತಿ ಇವರಿಗೂ ಗೊತ್ತಿದೆ.

ಭಾರತದಂತಹ ಜಾತಿ ಪೀಡಿತ ದೇಶದಲ್ಲಿ ಎಲ್ಲಿಯವರೆಗೂ ಸಾಮಾಜಿಕ ಅಸಮಾನತೆ ಇರುತ್ತದೆಯೊ ಅಲ್ಲಿವರೆಗೂ ಮೀಸಲಾತಿ ಇರಲೇಬೇಕಾಗಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತೆರಡು ವರ್ಷಗಳಾದರೂ, ಸಂವಿಧಾನ ರಚಿಸಿ ಅರವತ್ತೊಂಬತ್ತು ವರ್ಷಗಳಾದರೂ ಇನ್ನೂ ಅಸಮಾನತೆ ಇದೆಯೆಂದರೆ ಮೀಸಲಾತಿಯು ಎಲ್ಲಾ ಸಮುದಾಯಗಳಿಗೂ ಸಿಕ್ಕಿದೆಯೇ ಎಂಬುವುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾಗಿದೆ. ಮೀಸಲಾತಿಯ ಹಿಂತೆಗೆತಕ್ಕಿಂತ ಇನ್ನೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕಾದ ಅನಿವಾರ್ಯತೆಯಿದೆ.

ಮೀಸಲಾತಿ ಇದ್ದರೂ ಸಮಾನ ಅವಕಾಶಗಳು ಸಿಗದ ಎಷ್ಟೋ ಸಮುದಾಯಗಳು ನಮ್ಮ ಮುಂದೆ ಇದೆ. ಇದರಲ್ಲಿ ಇನ್ನೂ ತಮ್ಮ ಜಾತಿಗಳು ಯಾವುದು ಎಂಬುದೇ ತಿಳಿಯದ ಜನಸಮುದಾಯಗಳಿವೆ. ಸರ್ಕಾರಗಳು ಕೂಡ ಅವರನ್ನು ಗುರುತಿಸಲು ಪರದಾಡಿದಂತೆ ಮಾಡುತ್ತಿದ್ದರೂ ಇಚ್ಛಾಶಕ್ತಿ ಇಲ್ಲದಿರುವುದು‌ ನೈಜ ಕಾರಣವಾಗಿದೆ. ಒಂದು ಕಡೆ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ತಯಾರಿಸಿ ಉಳ್ಳವರೆ ಪಡೆಯುತ್ತಿದ್ದರೆ, ಇನ್ನೊಂದು ಕಡೆ ಮೀಸಲಾತಿಯ‌ ಕಾನೂನುಗಳು ಇದ್ದರೂ ಅದನ್ನು ಜಾರಿಗೊಳಿಸುವಂತಹ ಜಾಗದಲ್ಲಿ ಭಾರತೀಯ ಜಾತಿ ಮನಸ್ಥಿತಿಯ ಜನರೆ ಕುಳಿತಿದ್ದಾರೆ. ಇಲ್ಲಿ ನಮಗೆ ಮೀಸಲಾತಿ ಇನ್ನೂ ಯಾಕೆ ಪರಿಣಾಮಕಾರಿಯಾಗಿ ಕೆಲಸ ಮಾಡಿಲ್ಲ ಎಂಬುವುದರ ಹೊಳಹು ಸಿಗುತ್ತದೆ. ಹೆಚ್ಚಿನ ಎಲ್ಲರೂ ತಮ್ಮ ಜಾತಿಯಾಧಾರಿತ ಮನಸ್ಥಿತಿಯನ್ನು ಬಿಟ್ಟು ಹೊರಬರಲಾರದೆ ಸ್ವಜನ ಪಕ್ಷಪಾತಿಯರೆ ಆಗಿದ್ದಾರೆ. ಅದರಲ್ಲೂ ಅಧಿಕಾರಿ ವರ್ಗದಲ್ಲಿ ಅದು ಇನ್ನೂ ಜಾಸ್ತಿಯೆ ಇದೆ.

ಸಧ್ಯಕ್ಕೆ ಸುಪ್ರೀಂ ಕೋರ್ಟ್ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದಿದೆ. ಇದು ಎಷ್ಟರ ಮಟ್ಟಿಗೆ ದ್ವಂದ್ವ ಸೃಷ್ಟಿಸುತ್ತದೆ ಎಂದರೆ ಸಂವಿಧಾನ ಸಮಾನತೆಯ ಹಕ್ಕು ನೀಡುವ 14, 15, 16 ವಿಧಿಗಳಿಗೆ ಸವಾಲನ್ನೇ ಹಾಕುತ್ತದೆ ಎಂದೆನಿಸುತ್ತದೆ. ಅಲ್ಲದೆ ಈ ಬಗ್ಗೆ ಕಾನೂನು ರೂಪಿಸಲು ಕೋರ್ಟ್ ರಾಜ್ಯಗಳಿಗೆ ನಿರ್ದೇಶನವನ್ನು ನೀಡುವಂತಿಲ್ಲ ಎಂದಿದೆ. ಅಲ್ಲಿಗೆ ಅದು ರಾಜ್ಯಗಳ ವಿವೇಚನೆಗೆ ‌ಬಿಟ್ಟ ವಿಚಾರ ಎಂಬಂತಾಗಿದೆ. ಭಾರತದಲ್ಲಿ ಮೀಸಲಾತಿ ಬಂದು ಇಷ್ಟು ವರ್ಷಗಳಾಗಿಯು ಸಾಮಾಜಿಕ ಅಸಮಾನತೆ ಇನ್ನೂ ಕಣ್ಣಿಗೆ ರಾಚುವಷ್ಟು ಇರುವುದು ನೋಡಿದರೆ ಮಿಸಲಾತಿಯು ತನ್ನ ಅನುಷ್ಠಾನದಲ್ಲಿ ವಿಫಲಗೊಂಡಿದೆ ಎಂಬುವುದು ಎದ್ದು ಕಾಣುತ್ತದೆ. ಆದರೆ ಯಾಕೆ ಅನುಷ್ಠಾನಗೊಂಡಿಲ್ಲ ಎಂಬುವುದನ್ನು ಹುಡುಕುತ್ತಾ ಹೊರಟರೆ ನಮಗೆ ಸಿಗುವುದು ಮತ್ತೇ ಅದೆ “ಜಾತಿ ವ್ಯವಸ್ಥೆ” ಅಷ್ಟೆ.

ಅದರಾಚೆಗೂ ಮೀಸಲಾತಿ ಕೊಡುವ ಉದ್ಯೋಗಗಳು ನಮ್ಮ ಆರ್ಥಿಕ ವ್ಯವಸ್ಥೆಯ ಕೇವಲ ಎರಡರಷ್ಟು ಮಾತ್ರ ಎಂದು ಅಂಕಿ ಅಂಶಗಳು ಹೇಳುತ್ತವೆ. ಅಲ್ಲದೆ ಈಗಿನ ಸರ್ಕಾರ ತನ್ನ ಎಲ್ಲಾ ಸಂಸ್ಥೆಗಳನ್ನು ಖಾಸಗಿಕರಣ ಮಾಡಲು ಹೊರಟಿದೆ. ಅಲ್ಲಿಗೆ ಮೀಸಲಾತಿ ಇದ್ದರೂ ಯಾರಿಗೆ ಎಷ್ಟು ಅವಕಾಶಗಳು ಸಿಗುತ್ತವೆ ಹೇಳಿ? ಸರ್ಕಾರಗಳು ಯಾವುದೆ ಹೊಸ ಸಾರ್ವಜನಿಕ ಸಂಸ್ಥೆಗಳನ್ನು ಕಟ್ಟುತ್ತಿಲ್ಲ. ಇವತ್ತಿಗೆ ನಾವು ಖಾಸಗೀಕರಣದ ವಿರುದ್ಧ ಹೋರಾಡುತ್ತಲೆ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಕೇಳುವ ಹೋರಾಟಗಳನ್ನು ಕಟ್ಟಬೇಕಿದೆ. ಜೊತೆ ಜೊತೆಗೆ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿಯನ್ನು ಕೇಳಬೇಕಾಗುತ್ತದೆ.

ಉತ್ತರ ಖಂಡ ಸುಪ್ರೀಂ ಕೋರ್ಟ್‌ಗೆ ಹೋಗಿರುವುದು ಭಡ್ತಿ ಮೀಸಲಾತಿಯನ್ನು ವಿರುದ್ಧ. ಆದರೆ ಸುಪ್ರೀಂ ತನ್ನ ತೀರ್ಪಿನಲ್ಲಿ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ತಿಳಿಸಿರುವುದು ಅಪಾಯಕಾರಿ ನಡೆಯೇ ಆಗಿದೆ. ಇದು ಸಂವಿಧಾನ ನೀಡಿರುವ ಮೂಲಭೂತ ಹಕ್ಕಾದ ಸಮಾನತೆಯ ಹಕ್ಕಿಗೆ ಸವಾಲೆಸೆಯುವಂತಹದ್ದು. ಈ ಬಗ್ಗೆ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾ಼ದ್ ಮೇಲ್ಮನವಿಯನ್ನು ಹಾಕಿದ್ದಾರೆ. ಮುಂದೆ ಏನಾಗುತ್ತದೆ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...