Homeಮುಖಪುಟಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು ‘ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ’ ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು ಅನುಸರಿಸುತ್ತಿರುವ ‘ಸ್ವಯಂ ನಿಯಂತ್ರಣ’ ಮಾದರಿಯ ಪರಿಣಾಮಕಾರಿತ್ವದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ.

“ಇಂಡಿಯಾಸ್ ಗಾಟ್ ಲೇಟೆಂಟ್” ಕಾರ್ಯಕ್ರಮದಲ್ಲಿನ ಅಶ್ಲೀಲ ವಿಷಯಕ್ಕೆ ಸಂಬಂಧಿಸಿದ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಪಾಡ್‌ಕ್ಯಾಸ್ಟರ್ ರಣವೀರ್ ಅಲಹಾಬಾದಿಯಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಪ್ರಕರಣ ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದರೂ, ಪ್ರಕರಣದ ವ್ಯಾಪ್ತಿಯನ್ನು ವಿಸ್ತರಿಸುವ ಸುಪ್ರೀಂ ಕೋರ್ಟ್, ಇಡೀ ದೇಶದ ಆನ್‌ಲೈನ್ ಅಶ್ಲೀಲತೆಯನ್ನು ತಡೆಗಟ್ಟುವ ಸಂಬಂಧ ಮಾರ್ಗಸೂಚಿ ರೂಪಿಸುವ ಕುರಿತು ಚರ್ಚೆ ಆರಂಭಿಸಿದೆ.

ಗುರುವಾರ ವಿಚಾರಣೆಯ ವೇಳೆ ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಂದ್ರ ಸರ್ಕಾರ ಕೆಲವು ಹೊಸ ಮಾರ್ಗಸೂಚಿಗಳನ್ನು ಪ್ರಸ್ತಾಪಿಸಿದೆ ಮತ್ತು ಪಾಲುದಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಇದು ಕೇವಲ ‘ಅಶ್ಲೀಲತೆ’ಗೆ ಸೀಮಿತವಾಗಿಲ್ಲ, ಬದಲಾಗಿ ಇಂಟರ್‌ನೆಟ್ ಬಳಕೆದಾರರು ರಚಿಸಿದ ವಿಷಯಗಳಲ್ಲಿನ ‘ವಿಕೃತತೆಗೂ ಸಂಬಂಧಿಸಿದೆ. ಜನರು ತಮ್ಮದೇ ಆದ ಯೂಟ್ಯೂಬ್ ಚಾನೆಲ್‌ಗಳು ಅಥವಾ ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಅವುಗಳನ್ನು ಪ್ರಕಟಿಸುತ್ತಾರೆ ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಕಾಂತ್, ಅಂತಹ ವಿಷಯ ರಚನೆಕಾರರಿಗೆ ಯಾವುದೇ ನಿಯಂತ್ರಣವಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈಗ ನಾನು ನನ್ನದೇ ಚಾನೆಲ್ ರಚಿಸಿ ಏನು ಬೇಕಾದರೂ ಅಪ್ಲೋಡ್ ಮಾಡಬಹುದೇ? ಅದಕ್ಕೆ ನಿಯಂತ್ರಣವಿಲ್ಲವೇ? ನಿಯಂತ್ರಿಸುವವರು ಬೇಕಲ್ಲವೇ ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್, ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಮೌಲ್ಯಯುತವಾದ ಹಕ್ಕು, ಆದರೆ ಆ ಸ್ವಾತಂತ್ರ್ಯ ವಿಕೃತಿ ಮನೋಭಾವಕ್ಕೆ ದಾರಿ ಮಾಡಿಕೊಡಬಾರದು ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ಅಭಿವ್ಯಕ್ತಿ ಹಕ್ಕನ್ನು ಗೌರವಿಸಲೇ ಬೇಕು. ಆದರೆ ಒಂದು ವೇಳೆ ಯಾವುದಾದರೂ ಕಾರ್ಯಕ್ರಮದಲ್ಲಿ ವಯಸ್ಕರಿಗೆ ಮಾತ್ರ ಸೂಕ್ತವಾದ (adult) ವಿಷಯ ಇದ್ದರೆ, ಅದನ್ನು ಪ್ರಸಾರ ಮಾಡುವ ಮೊದಲು ಸ್ಪಷ್ಟವಾದ ಎಚ್ಚರಿಕೆ ಕೊಡಲೇ ಬೇಕು. ಪ್ರೇಕ್ಷಕರಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಹೇಳಿದ್ದಾರೆ.

ಓಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಇತ್ಯಾದಿಗಳನ್ನೊಳಗೊಂಡಿರುವ ಇಂಡಿಯನ್ ಬ್ರಾಡ್‌ಕಾಸ್ಟ್ ಅಂಡ್ ಡಿಜಿಟಲ್ ಫೌಂಡೇಷನ್ ಪರವಾಗಿ ವಾದಿಸಿದ ಹಿರಿಯ ವಕೀಲ ಅಮಿತ್ ಸಿಬಲ್ ಅವರು, ಈಗಾಗಲೇ ಆನ್‌ಲೈನ್ ವಿಷಯಗಳ ನಿಯಂತ್ರಣಕ್ಕೆ 2021ರ ಐಟಿ ರೂಲ್ಸ್ (Information Technology (Intermediary Guidelines and Digital Media Ethics Code) Rules, 2021) ಇವೆ. ಈ ನಿಯಮಗಳನ್ನು ಪ್ರಸ್ತುತ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಮತ್ತು ಅನೇಕ ಅರ್ಜಿಗಳು ಅಲ್ಲಿಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ನಿಯಮಗಳ ಕೆಲವು ಸೆಕ್ಷನ್‌ಗಳ ಮೇಲೆ ತಡೆಯಾಜ್ಞೆ ಇದ್ದರೂ ಸಹ, ಓಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂಪ್ರೇರಿತವಾಗಿ (voluntarily) ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ಅನ್ನು ಪಾಲಿಸುತ್ತಿವೆ. ಜನರ ದೂರುಗಳನ್ನು ಪರಿಹರಿಸಲು ಒಂದು ಸ್ವತಂತ್ರ ಸಂಸ್ಥೆ ಇದೆ. ಈ ಸಂಸ್ಥೆಯ ಅಧ್ಯಕ್ಷೆಯಾಗಿ ನಿವೃತ್ತ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರು ಇದ್ದಾರೆ. ಯಾರಿಗಾದರೂ ಯಾವುದಾದರೂ ಒಂದು ಶೋ/ಸಿನಿಮಾ ಅಡೆತಡೆಯಿಲ್ಲದೆ ಅಶ್ಲೀಲ ಎನಿಸಿದರೆ ಅಲ್ಲಿಗೆ ದೂರು ಸಲ್ಲಿಸಬಹುದು ಮತ್ತು ಅದನ್ನು ಪರಿಶೀಲಿಸಿ ತೀರ್ಪು ನೀಡಲಾಗುತ್ತದೆ ಎಂದಿದ್ದಾರೆ.

ಈ ಹಂತದಲ್ಲಿ, ಸಿಜೆಐ ಕಾಂತ್ ಸ್ವಯಂ-ನಿಯಂತ್ರಕ ಕಾರ್ಯವಿಧಾನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು ಮತ್ತು ಶಾಸನಬದ್ಧ ನಿಯಂತ್ರಣದ ಅಗತ್ಯವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...