Homeಮುಖಪುಟಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು ‘ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ’ ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು ಅನುಸರಿಸುತ್ತಿರುವ ‘ಸ್ವಯಂ ನಿಯಂತ್ರಣ’ ಮಾದರಿಯ ಪರಿಣಾಮಕಾರಿತ್ವದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ.

“ಇಂಡಿಯಾಸ್ ಗಾಟ್ ಲೇಟೆಂಟ್” ಕಾರ್ಯಕ್ರಮದಲ್ಲಿನ ಅಶ್ಲೀಲ ವಿಷಯಕ್ಕೆ ಸಂಬಂಧಿಸಿದ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಪಾಡ್‌ಕ್ಯಾಸ್ಟರ್ ರಣವೀರ್ ಅಲಹಾಬಾದಿಯಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಪ್ರಕರಣ ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದರೂ, ಪ್ರಕರಣದ ವ್ಯಾಪ್ತಿಯನ್ನು ವಿಸ್ತರಿಸುವ ಸುಪ್ರೀಂ ಕೋರ್ಟ್, ಇಡೀ ದೇಶದ ಆನ್‌ಲೈನ್ ಅಶ್ಲೀಲತೆಯನ್ನು ತಡೆಗಟ್ಟುವ ಸಂಬಂಧ ಮಾರ್ಗಸೂಚಿ ರೂಪಿಸುವ ಕುರಿತು ಚರ್ಚೆ ಆರಂಭಿಸಿದೆ.

ಗುರುವಾರ ವಿಚಾರಣೆಯ ವೇಳೆ ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಂದ್ರ ಸರ್ಕಾರ ಕೆಲವು ಹೊಸ ಮಾರ್ಗಸೂಚಿಗಳನ್ನು ಪ್ರಸ್ತಾಪಿಸಿದೆ ಮತ್ತು ಪಾಲುದಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಇದು ಕೇವಲ ‘ಅಶ್ಲೀಲತೆ’ಗೆ ಸೀಮಿತವಾಗಿಲ್ಲ, ಬದಲಾಗಿ ಇಂಟರ್‌ನೆಟ್ ಬಳಕೆದಾರರು ರಚಿಸಿದ ವಿಷಯಗಳಲ್ಲಿನ ‘ವಿಕೃತತೆಗೂ ಸಂಬಂಧಿಸಿದೆ. ಜನರು ತಮ್ಮದೇ ಆದ ಯೂಟ್ಯೂಬ್ ಚಾನೆಲ್‌ಗಳು ಅಥವಾ ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಅವುಗಳನ್ನು ಪ್ರಕಟಿಸುತ್ತಾರೆ ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಕಾಂತ್, ಅಂತಹ ವಿಷಯ ರಚನೆಕಾರರಿಗೆ ಯಾವುದೇ ನಿಯಂತ್ರಣವಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈಗ ನಾನು ನನ್ನದೇ ಚಾನೆಲ್ ರಚಿಸಿ ಏನು ಬೇಕಾದರೂ ಅಪ್ಲೋಡ್ ಮಾಡಬಹುದೇ? ಅದಕ್ಕೆ ನಿಯಂತ್ರಣವಿಲ್ಲವೇ? ನಿಯಂತ್ರಿಸುವವರು ಬೇಕಲ್ಲವೇ ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್, ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಮೌಲ್ಯಯುತವಾದ ಹಕ್ಕು, ಆದರೆ ಆ ಸ್ವಾತಂತ್ರ್ಯ ವಿಕೃತಿ ಮನೋಭಾವಕ್ಕೆ ದಾರಿ ಮಾಡಿಕೊಡಬಾರದು ಎಂದಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ಅಭಿವ್ಯಕ್ತಿ ಹಕ್ಕನ್ನು ಗೌರವಿಸಲೇ ಬೇಕು. ಆದರೆ ಒಂದು ವೇಳೆ ಯಾವುದಾದರೂ ಕಾರ್ಯಕ್ರಮದಲ್ಲಿ ವಯಸ್ಕರಿಗೆ ಮಾತ್ರ ಸೂಕ್ತವಾದ (adult) ವಿಷಯ ಇದ್ದರೆ, ಅದನ್ನು ಪ್ರಸಾರ ಮಾಡುವ ಮೊದಲು ಸ್ಪಷ್ಟವಾದ ಎಚ್ಚರಿಕೆ ಕೊಡಲೇ ಬೇಕು. ಪ್ರೇಕ್ಷಕರಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಹೇಳಿದ್ದಾರೆ.

ಓಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಇತ್ಯಾದಿಗಳನ್ನೊಳಗೊಂಡಿರುವ ಇಂಡಿಯನ್ ಬ್ರಾಡ್‌ಕಾಸ್ಟ್ ಅಂಡ್ ಡಿಜಿಟಲ್ ಫೌಂಡೇಷನ್ ಪರವಾಗಿ ವಾದಿಸಿದ ಹಿರಿಯ ವಕೀಲ ಅಮಿತ್ ಸಿಬಲ್ ಅವರು, ಈಗಾಗಲೇ ಆನ್‌ಲೈನ್ ವಿಷಯಗಳ ನಿಯಂತ್ರಣಕ್ಕೆ 2021ರ ಐಟಿ ರೂಲ್ಸ್ (Information Technology (Intermediary Guidelines and Digital Media Ethics Code) Rules, 2021) ಇವೆ. ಈ ನಿಯಮಗಳನ್ನು ಪ್ರಸ್ತುತ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಮತ್ತು ಅನೇಕ ಅರ್ಜಿಗಳು ಅಲ್ಲಿಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ನಿಯಮಗಳ ಕೆಲವು ಸೆಕ್ಷನ್‌ಗಳ ಮೇಲೆ ತಡೆಯಾಜ್ಞೆ ಇದ್ದರೂ ಸಹ, ಓಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂಪ್ರೇರಿತವಾಗಿ (voluntarily) ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ಅನ್ನು ಪಾಲಿಸುತ್ತಿವೆ. ಜನರ ದೂರುಗಳನ್ನು ಪರಿಹರಿಸಲು ಒಂದು ಸ್ವತಂತ್ರ ಸಂಸ್ಥೆ ಇದೆ. ಈ ಸಂಸ್ಥೆಯ ಅಧ್ಯಕ್ಷೆಯಾಗಿ ನಿವೃತ್ತ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರು ಇದ್ದಾರೆ. ಯಾರಿಗಾದರೂ ಯಾವುದಾದರೂ ಒಂದು ಶೋ/ಸಿನಿಮಾ ಅಡೆತಡೆಯಿಲ್ಲದೆ ಅಶ್ಲೀಲ ಎನಿಸಿದರೆ ಅಲ್ಲಿಗೆ ದೂರು ಸಲ್ಲಿಸಬಹುದು ಮತ್ತು ಅದನ್ನು ಪರಿಶೀಲಿಸಿ ತೀರ್ಪು ನೀಡಲಾಗುತ್ತದೆ ಎಂದಿದ್ದಾರೆ.

ಈ ಹಂತದಲ್ಲಿ, ಸಿಜೆಐ ಕಾಂತ್ ಸ್ವಯಂ-ನಿಯಂತ್ರಕ ಕಾರ್ಯವಿಧಾನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು ಮತ್ತು ಶಾಸನಬದ್ಧ ನಿಯಂತ್ರಣದ ಅಗತ್ಯವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...