Homeಮುಖಪುಟಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

- Advertisement -
- Advertisement -

ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ ಚುನಾವಣಾ ಆಯೋಗದಿಂದ (ಇಸಿಐ) ಪ್ರತಿಕ್ರಿಯೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ವಿಷಯದ ಕುರಿತು ಎನ್‌ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಪೀಠವು ಚುನಾವಣಾ ಆಯೋಗದ ಪರ ವಕೀಲ ಅಮಿತ್ ಶರ್ಮಾ ಅವರಲ್ಲಿ ತನ್ನ ವೆಬ್‌ಸೈಟ್‌ನಲ್ಲಿ ಮತದಾರರ ಮತದಾನದ ವಿವರಗಳನ್ನು ಹಾಕಲು ನಿಮಗೆ ಏನು ತೊಂದರೆ ಇದೆ ಎಂದು ಕೇಳಿದೆ.

ಅರ್ಜಿ ವಿಚಾರಣೆ ವೇಳೆ ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ. ನಾವು ಸಾಕಷ್ಟು ಡೇಟಾವನ್ನು ಸಂಗ್ರಹಿಸಬೇಕಾಗಿದೆ, ಎಂದು ಚುನಾವಣಾ ಆಯೋಗದ ಪರ ವಕೀಲರು ಹೇಳಿದ್ದಾರೆ. ಅರ್ಜಿಗೆ ಉತ್ತರಿಸಲು ಚುನಾವಣಾ ಆಯೋಗಕ್ಕೆ ಆರನೇ ಹಂತದ ಚುನಾವಣೆಗಳ ಮುನ್ನಾ ದಿನವಾದ ಮೇ 24ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ.

ಎನ್‌ಜಿಒ ಎಡಿಆರ್ ಪ್ರತಿನಿಧಿಸುವ ವಕೀಲ ಪ್ರಶಾಂತ್ ಭೂಷಣ್ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದ್ದರು. ಕಳೆದ ವಾರ NGO ತನ್ನ 2019ರ ಸಾರ್ವಜನಿಕ ಹಿತಾಸಕ್ತಿ ದಾವೆಗಳ ಭಾಗವಾಗಿ ಈ ಕುರಿತು ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಮತದಾನದ ನಂತರದ ಎಲ್ಲಾ ಮತಗಟ್ಟೆಗಳಿಂದ ಪಡೆದ ಸ್ಪಷ್ಟವಾದ ಮಾಹಿತಿಗಳನ್ನು ತಕ್ಷಣವೇ ಅಪ್‌ಲೋಡ್ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡುವಂತೆ ಕೋರಲಾಗಿತ್ತು.

ಲೋಕಸಭಾ ಚುನಾವಣೆಯ ಆರಂಭಿಕ ಎರಡು ಹಂತಗಳಲ್ಲಿ ನಡೆದ ಮತದಾನದಲ್ಲಿ ಆಯಾ ಮತದಾನದ ದಿನಗಳಲ್ಲಿ ಬಹಿರಂಗಪಡಿಸಿದ ಆರಂಭಿಕ ಅಂದಾಜು ಅಂಕಿ-ಅಂಶಗಳು ಮತ್ತು ಆ ಬಳಿಕ ಚುನಾವಣಾ ಆಯೋಗ ಬಹಿರಂಗಪಡಿಸಿದ ಅಂಕಿ-ಅಂಶಗಳಲ್ಲಿನ ವ್ಯತ್ಯಾಸಗಳಿಂದ ಸಂಶಯ ಸೃಷ್ಟಿಯಾಗಿದ್ದು, ಇದರ ಭಾಗವಾಗಿ ಅರ್ಜಿಯನ್ನು ಸಲ್ಲಿಸಲಾಗಿದೆ.

ಅಪ್ಲಿಕೇಶನ್ ಪ್ರಕಾರ, ಏಪ್ರಿಲ್ 30ರಂದು ಬಿಡುಗಡೆಯಾದ ಡೇಟಾವು ಮತದಾನದ ದಿನದಂದು ಚುನಾವಣಾ ಆಯೋಗ ಘೋಷಿಸಿದ ಪ್ರಾಥಮಿಕ ಶೇಕಡಾವಾರುಗಳಿಗೆ ಹೋಲಿಸಿದರೆ ಅಂತಿಮ ಮತದಾರರ ಮತದಾನದ ಅಂಕಿಅಂಶಗಳಲ್ಲಿ ಗಮನಾರ್ಹ ಏರಿಕೆ ಅಂದರೆ ಅಂದಾಜು 5-6% ಕಂಡು ಬಂದಿದೆ. ಇದಲ್ಲದೆ ಅಂಕಿ-ಅಂಶಗಳ ಬಿಡುಗಡೆಯಲ್ಲಿನ ವಿಳಂಬವು ಸಂಶಯಕ್ಕೆ ಕಾರಣವಾಗಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR)ನ ಅರ್ಜಿಯು, VVPAT ಸ್ಲಿಪ್‌ಗಳನ್ನು, ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಮೂಲಕ ಚಲಾಯಿಸಿದ ಮತಗಳೊಂದಿಗೆ ಎಣಿಸುವ ಮನವಿಯ ಭಾಗವಾಗಿದೆ, ಆದರೆ ಈ ಮನವಿಯನ್ನು ಏಪ್ರಿಲ್ 26 ರಂದು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು.

ಇದನ್ನು ಓದಿ: ಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...