Homeಮುಖಪುಟಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

- Advertisement -
- Advertisement -

ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ ಚುನಾವಣಾ ಆಯೋಗದಿಂದ (ಇಸಿಐ) ಪ್ರತಿಕ್ರಿಯೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ವಿಷಯದ ಕುರಿತು ಎನ್‌ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಪೀಠವು ಚುನಾವಣಾ ಆಯೋಗದ ಪರ ವಕೀಲ ಅಮಿತ್ ಶರ್ಮಾ ಅವರಲ್ಲಿ ತನ್ನ ವೆಬ್‌ಸೈಟ್‌ನಲ್ಲಿ ಮತದಾರರ ಮತದಾನದ ವಿವರಗಳನ್ನು ಹಾಕಲು ನಿಮಗೆ ಏನು ತೊಂದರೆ ಇದೆ ಎಂದು ಕೇಳಿದೆ.

ಅರ್ಜಿ ವಿಚಾರಣೆ ವೇಳೆ ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ. ನಾವು ಸಾಕಷ್ಟು ಡೇಟಾವನ್ನು ಸಂಗ್ರಹಿಸಬೇಕಾಗಿದೆ, ಎಂದು ಚುನಾವಣಾ ಆಯೋಗದ ಪರ ವಕೀಲರು ಹೇಳಿದ್ದಾರೆ. ಅರ್ಜಿಗೆ ಉತ್ತರಿಸಲು ಚುನಾವಣಾ ಆಯೋಗಕ್ಕೆ ಆರನೇ ಹಂತದ ಚುನಾವಣೆಗಳ ಮುನ್ನಾ ದಿನವಾದ ಮೇ 24ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ.

ಎನ್‌ಜಿಒ ಎಡಿಆರ್ ಪ್ರತಿನಿಧಿಸುವ ವಕೀಲ ಪ್ರಶಾಂತ್ ಭೂಷಣ್ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದ್ದರು. ಕಳೆದ ವಾರ NGO ತನ್ನ 2019ರ ಸಾರ್ವಜನಿಕ ಹಿತಾಸಕ್ತಿ ದಾವೆಗಳ ಭಾಗವಾಗಿ ಈ ಕುರಿತು ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಮತದಾನದ ನಂತರದ ಎಲ್ಲಾ ಮತಗಟ್ಟೆಗಳಿಂದ ಪಡೆದ ಸ್ಪಷ್ಟವಾದ ಮಾಹಿತಿಗಳನ್ನು ತಕ್ಷಣವೇ ಅಪ್‌ಲೋಡ್ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡುವಂತೆ ಕೋರಲಾಗಿತ್ತು.

ಲೋಕಸಭಾ ಚುನಾವಣೆಯ ಆರಂಭಿಕ ಎರಡು ಹಂತಗಳಲ್ಲಿ ನಡೆದ ಮತದಾನದಲ್ಲಿ ಆಯಾ ಮತದಾನದ ದಿನಗಳಲ್ಲಿ ಬಹಿರಂಗಪಡಿಸಿದ ಆರಂಭಿಕ ಅಂದಾಜು ಅಂಕಿ-ಅಂಶಗಳು ಮತ್ತು ಆ ಬಳಿಕ ಚುನಾವಣಾ ಆಯೋಗ ಬಹಿರಂಗಪಡಿಸಿದ ಅಂಕಿ-ಅಂಶಗಳಲ್ಲಿನ ವ್ಯತ್ಯಾಸಗಳಿಂದ ಸಂಶಯ ಸೃಷ್ಟಿಯಾಗಿದ್ದು, ಇದರ ಭಾಗವಾಗಿ ಅರ್ಜಿಯನ್ನು ಸಲ್ಲಿಸಲಾಗಿದೆ.

ಅಪ್ಲಿಕೇಶನ್ ಪ್ರಕಾರ, ಏಪ್ರಿಲ್ 30ರಂದು ಬಿಡುಗಡೆಯಾದ ಡೇಟಾವು ಮತದಾನದ ದಿನದಂದು ಚುನಾವಣಾ ಆಯೋಗ ಘೋಷಿಸಿದ ಪ್ರಾಥಮಿಕ ಶೇಕಡಾವಾರುಗಳಿಗೆ ಹೋಲಿಸಿದರೆ ಅಂತಿಮ ಮತದಾರರ ಮತದಾನದ ಅಂಕಿಅಂಶಗಳಲ್ಲಿ ಗಮನಾರ್ಹ ಏರಿಕೆ ಅಂದರೆ ಅಂದಾಜು 5-6% ಕಂಡು ಬಂದಿದೆ. ಇದಲ್ಲದೆ ಅಂಕಿ-ಅಂಶಗಳ ಬಿಡುಗಡೆಯಲ್ಲಿನ ವಿಳಂಬವು ಸಂಶಯಕ್ಕೆ ಕಾರಣವಾಗಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR)ನ ಅರ್ಜಿಯು, VVPAT ಸ್ಲಿಪ್‌ಗಳನ್ನು, ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಮೂಲಕ ಚಲಾಯಿಸಿದ ಮತಗಳೊಂದಿಗೆ ಎಣಿಸುವ ಮನವಿಯ ಭಾಗವಾಗಿದೆ, ಆದರೆ ಈ ಮನವಿಯನ್ನು ಏಪ್ರಿಲ್ 26 ರಂದು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು.

ಇದನ್ನು ಓದಿ: ಚುನಾವಣಾ ಪ್ರಚಾರದ ವೇಳೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...