Homeಮುಖಪುಟತಮಿಳುನಾಡು, ಪ.ಬಂಗಾಳದಲ್ಲಿ ಎಸ್‌ಐಆರ್ ಪ್ರಶ್ನಿಸಿ ಅರ್ಜಿ : ಚು. ಆಯೋಗಕ್ಕೆ ಸುಪ್ರೀಂ ನೋಟಿಸ್

ತಮಿಳುನಾಡು, ಪ.ಬಂಗಾಳದಲ್ಲಿ ಎಸ್‌ಐಆರ್ ಪ್ರಶ್ನಿಸಿ ಅರ್ಜಿ : ಚು. ಆಯೋಗಕ್ಕೆ ಸುಪ್ರೀಂ ನೋಟಿಸ್

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೋರಿ ಸುಪ್ರೀಂ ಕೋರ್ಟ್ ಮಂಗಳವಾರ (ನ.11) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನೋಟಿಸ್ ಜಾರಿ ಮಾಡಿದೆ.

ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚ್ಚೇರಿಯ ಎಸ್‌ಐಆರ್ ಪ್ರಶ್ನಿಸಿ ಡಿಎಂಕೆ, ಟಿಎಂಸಿ, ಕಾಂಗ್ರೆಸ್, ಸಿಪಿಐ(ಎಂ) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇವುಗಳ ಜೊತೆ ಬಿಹಾರಕ್ಕೆ ಸಂಬಂಧಿಸಿದ ಅರ್ಜಿಗಳು ಸೇರಿದಂತೆ ಎಲ್ಲವನ್ನೂ ಒಟ್ಟಿಗೆ ವಿಚಾರಣೆ ನಡೆಸಲಾಗುತ್ತಿದೆ.

ಮಂಗಳವಾರ ವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಮುಂದಿನ ವಿಚಾರಣೆಯನ್ನು ನವೆಂಬರ್ 26ಕ್ಕೆ ನಿಗದಿ ಮಾಡಿದೆ. ಈ ನಡುವೆ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಯಾವುದೇ ಆದೇಶಗಳನ್ನು ನೀಡದಂತೆ ಹೈಕೋರ್ಟ್‌ಗಳಿಗೆ (ಮದ್ರಾಸ್, ಕಲ್ಕತ್ತಾ, ಪಾಟ್ನಾ) ಸೂಚಿಸಿದೆ.

ಅಕ್ಟೋಬರ್ 27ರಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ 9 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಎಸ್ಐಆರ್‌ ಘೋಷಣೆ ಮಾಡಿದ್ದಾರೆ.

ತೀವ್ರ ವಿರೋಧಗಳ ನಡುವೆಯೂ ನವೆಂಬರ್ 4ರಂದು ಎಸ್‌ಐಆರ್‌ನ ಮೊದಲ ಹಂತ ಮನೆಗಳ ಎಣಿಕೆಯನ್ನು ಚುನಾವಣಾ ಆಯೋಗ ಪ್ರಾರಂಭಿಸಿದೆ. ಡಿಸೆಂಬರ್ 9ರಂದು ಕರಡು ಮತದಾರರ ಪಟ್ಟಿ ಮತ್ತು 2026ರ ಫೆಬ್ರವರಿ 7ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಆಯೋಗ ಹೇಳಿದೆ.

ಬಿಹಾರದ ಎಸ್‌ಐಆರ್ ಪ್ರಕ್ರಿಯೆಯನ್ನು 2025ರ ಜೂನ್‌ನಲ್ಲಿ ಪ್ರಾರಂಭಿಸಿ, ವಿಧಾನಸಭೆ ಚುನಾವಣೆಗೆ ಮುನ್ನ ಸೆಪ್ಟೆಂಬರ್ 30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿರುವ ಮೂಲಕ ಮುಕ್ತಾಯಗೊಳಿಸಲಾಗಿದೆ.

ಬಿಹಾರದ ಎಸ್‌ಐಆರ್ ಪ್ರಶ್ನಿಸಿ ಹಲವಾರು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿತ್ತು. ಈ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸುದೀರ್ಘವಾಗಿ ವಿಚಾರಣೆ ನಡೆಸಿದೆ. ನ್ಯಾಯಾಲಯ ತಡೆ ನೀಡದ ಕಾರಣ ಚುನಾವಣಾ ಆಯೋಗ ಎಸ್‌ಐಆರ್ ಮುಗಿಸಿದೆ. ಆದರೆ, ಈ ನಡುವೆ ಸುಪ್ರೀಂ ಕೋರ್ಟ್ ಹಲವು ನಿರ್ದೇಶನಗಳನ್ನು ಆಯೋಗಕ್ಕೆ ನೀಡಿದೆ.

ಸೆಪ್ಟೆಂಬರ್ 8ರಂದು, ಬಿಹಾರದ ಎಸ್‌ಐಆರ್‌ನಲ್ಲಿ ಆಧಾರ್ ಕಾರ್ಡ್‌ ಅನ್ನು ಮಾನ್ಯ ಗುರುತಿನ ಪುರಾವೆಯಾಗಿ ಸ್ವೀಕರಿಸುವಂತೆ ನ್ಯಾಯಾಲಯವು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಪೌರತ್ವದ ಪುರಾವೆಯಾಗಿ ಚುನಾವಣಾ ಆಯೋಗವು ಅನುಮತಿಸಿದ 11 ದಾಖಲೆಗಳಲ್ಲಿ ಆಧಾರ್ ಕಾರ್ಡ್‌ ಇರಲಿಲ್ಲ. ಅರ್ಜಿದಾರರು ಆಧಾರ್ ಅನ್ನು ಹೊರಗಿಡುವುದನ್ನು ‘ಅಸಂಬದ್ಧ’ ಎಂದಿದ್ದರು. ಇದು ಅತ್ಯಂತ ವ್ಯಾಪಕವಾಗಿ ಬಳಸಲಾಗುವ ಗುರುತಿನ ಚೀಟಿ ಎಂದು ವಾದಿಸಿದ್ದರು.

ಚುನಾವಣಾ ಆಯೋಗವು ಎಸ್‌ಐಆರ್ ಅನ್ನು ಮೃತರ ಹೆಸರುಗಳು, ನಕಲಿ ನಮೂದುಗಳು ಮತ್ತು ದಾಖಲೆರಹಿತ ವಲಸಿಗರ ಹೆಸರುಗಳನ್ನು ತೆಗೆದುಹಾಕುವ ಶುದ್ಧೀಕರಣ ಪ್ರಯತ್ನವೆಂದು ಪದೇ ಪದೇ ಸಮರ್ಥಿಸಿಕೊಂಡಿದೆ.

ಬಿಹಾರದ ಎಸ್‌ಐಆರ್‌ನಲ್ಲಿ ಮರಣ ಹೊಂದಿದವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಮತ್ತು ಎರಡೆರಡು ಬಾರಿ ನೋಂದಣಿಯಾದವರು ಎಂಬ ಕಾರಣಗಳನ್ನು ನೀಡಿ ಸುಮಾರು 68 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದನ್ನು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಪರೋಕ್ಷವಾಗಿ ಎನ್‌ಆರ್‌ಸಿ ಮಾಡುತ್ತಿದೆ ಎಂದು ಆರೋಪಿಸಿವೆ.

ಬಿಹಾರದಲ್ಲಿ ಯಾರಿಗೆ ಗೆಲುವು..ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...