Homeಮುಖಪುಟಮಹುವಾ ಉಚ್ಛಾಟನೆ; ಪ್ರತಿಕ್ರಿಯೆ ಸಲ್ಲಿಸುವಂತೆ ಲೋಕಸಭೆಯ ಕಾರ್ಯದರ್ಶಿಗೆ ಸುಪ್ರೀಂ ಸೂಚನೆ

ಮಹುವಾ ಉಚ್ಛಾಟನೆ; ಪ್ರತಿಕ್ರಿಯೆ ಸಲ್ಲಿಸುವಂತೆ ಲೋಕಸಭೆಯ ಕಾರ್ಯದರ್ಶಿಗೆ ಸುಪ್ರೀಂ ಸೂಚನೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಮನವಿಗೆ ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ಬುಧವಾರ ಸೂಚಿಸಿದೆ.

ಪಶ್ಚಿಮ ಬಂಗಾಳದ ಕೃಷ್ಣನಗರದ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಪ್ರಶ್ನೆಗಾಗಿ ನಗದು ಸ್ವೀಕರಿಸಿದ ಆರೋಪದಲ್ಲಿ ಲೋಕಸಭೆಯ ನೈತಿಕ ಸಮಿತಿ ಶಿಫಾರಸ್ಸಿನ ಮೇರೆಗೆ ಡಿಸೆಂಬರ್ 8ರಂದು ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು.

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಿರುವುದನ್ನು ಪ್ರಶ್ನಿಸಿ ತೃಣಮೂಲಕ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.  ಲೋಕಸಭೆಯ ನೈತಿಕ ಸಮಿತಿಗೆ ತನ್ನನ್ನು ಉಚ್ಚಾಟನೆ ಮಾಡುವ ಅಧಿಕಾರ ಇಲ್ಲ. ನಾನು ದರ್ಶನ್ ಹಿರಾನಂದನಿಯಿಂದ ಹಣ ಸ್ವೀಕರಿಸಿದ್ದೇನೆ ಎಂಬುವುದು ಸಾಬೀತಾಗಿಲ್ಲ. ಕೇವಲ ನಿಶಿಕಾಂತ್ ದುಬೆ ಮತ್ತು ಜೈ ಅನಂತ್ ದೇಹದ್ರಾಯ್ ಅವರ ಆರೋಪದ ಹಿನ್ನೆಲೆ ತನ್ನ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಹಿರಾನಂದನಿ ಮತ್ತು ದೇಹದ್ರಾಯ್‌ಯನ್ನು ಕ್ರಾಸ್ ಪ್ರಶ್ನೆ ಮಾಡಲು ನನಗೆ ಅವಕಾಶ ನೀಡಿಲ್ಲ ಎಂದು ಮಹುವಾ ಹೇಳಿದ್ದರು.

ಲೋಕಸಭೆಯ ನೈತಿಕ ಸಮಿತಿಯ ಶಿಫಾರಸ್ಸಿನ ಮೇರೆಗೆ ಸ್ಪೀಕರ್ ಓಂ ಬಿರ್ಲಾ  ಮಹುವಾ ಅವರನ್ನು ಸಂಸತ್ತಿನಿಂದ ಅಮಾನತು ಮಾಡಿದ್ದರು. ಉಚ್ಚಾಟನೆ ಬೆನ್ನಲ್ಲೇ ಸಂಸತ್ತಿನ ಹೊರಗೆ ಕೇಂದ್ರದ ಬಿಜೆಪಿ ಸರ್ಕಾದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಮಹುವಾ, ಅಸ್ತಿತ್ವದಲ್ಲೇ ಇಲ್ಲದ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಾನು ತಪ್ಪಿತಸ್ಥೆ ಎಂದು ನೈತಿಕ ಸಮಿತಿ ಸದಸ್ಯರು ಹೇಳಿದ್ದಾರೆ. ಸಮಿತಿಯು ಸಂಸತ್ತಿನ ಪ್ರತಿಯೊಂದು ನಿಯಮಗಳನ್ನೂ ಮುರಿದಿದ್ದಾರೆ. ನಾನು ಸಂಸತ್ತಿನ ಒಳಗೆ, ಹೊರಗೆ ಮುಂದಿನ 30 ವರ್ಷ ಬಿಜೆಪಿ ವಿರುದ್ಧ ಹೋರಾಡುತ್ತೇನೆ ಎಂದು ಸವಾಲ್ ಹಾಕಿದ್ದರು.

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ಅವರಿಗೆ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲೆ ಹೊರಿಸಲಾಗಿತ್ತು. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಇದನ್ನು ಓದಿ: ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...