Homeಮುಖಪುಟಮಹುವಾ ಉಚ್ಛಾಟನೆ; ಪ್ರತಿಕ್ರಿಯೆ ಸಲ್ಲಿಸುವಂತೆ ಲೋಕಸಭೆಯ ಕಾರ್ಯದರ್ಶಿಗೆ ಸುಪ್ರೀಂ ಸೂಚನೆ

ಮಹುವಾ ಉಚ್ಛಾಟನೆ; ಪ್ರತಿಕ್ರಿಯೆ ಸಲ್ಲಿಸುವಂತೆ ಲೋಕಸಭೆಯ ಕಾರ್ಯದರ್ಶಿಗೆ ಸುಪ್ರೀಂ ಸೂಚನೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಮನವಿಗೆ ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ಬುಧವಾರ ಸೂಚಿಸಿದೆ.

ಪಶ್ಚಿಮ ಬಂಗಾಳದ ಕೃಷ್ಣನಗರದ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಪ್ರಶ್ನೆಗಾಗಿ ನಗದು ಸ್ವೀಕರಿಸಿದ ಆರೋಪದಲ್ಲಿ ಲೋಕಸಭೆಯ ನೈತಿಕ ಸಮಿತಿ ಶಿಫಾರಸ್ಸಿನ ಮೇರೆಗೆ ಡಿಸೆಂಬರ್ 8ರಂದು ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು.

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಿರುವುದನ್ನು ಪ್ರಶ್ನಿಸಿ ತೃಣಮೂಲಕ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.  ಲೋಕಸಭೆಯ ನೈತಿಕ ಸಮಿತಿಗೆ ತನ್ನನ್ನು ಉಚ್ಚಾಟನೆ ಮಾಡುವ ಅಧಿಕಾರ ಇಲ್ಲ. ನಾನು ದರ್ಶನ್ ಹಿರಾನಂದನಿಯಿಂದ ಹಣ ಸ್ವೀಕರಿಸಿದ್ದೇನೆ ಎಂಬುವುದು ಸಾಬೀತಾಗಿಲ್ಲ. ಕೇವಲ ನಿಶಿಕಾಂತ್ ದುಬೆ ಮತ್ತು ಜೈ ಅನಂತ್ ದೇಹದ್ರಾಯ್ ಅವರ ಆರೋಪದ ಹಿನ್ನೆಲೆ ತನ್ನ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಹಿರಾನಂದನಿ ಮತ್ತು ದೇಹದ್ರಾಯ್‌ಯನ್ನು ಕ್ರಾಸ್ ಪ್ರಶ್ನೆ ಮಾಡಲು ನನಗೆ ಅವಕಾಶ ನೀಡಿಲ್ಲ ಎಂದು ಮಹುವಾ ಹೇಳಿದ್ದರು.

ಲೋಕಸಭೆಯ ನೈತಿಕ ಸಮಿತಿಯ ಶಿಫಾರಸ್ಸಿನ ಮೇರೆಗೆ ಸ್ಪೀಕರ್ ಓಂ ಬಿರ್ಲಾ  ಮಹುವಾ ಅವರನ್ನು ಸಂಸತ್ತಿನಿಂದ ಅಮಾನತು ಮಾಡಿದ್ದರು. ಉಚ್ಚಾಟನೆ ಬೆನ್ನಲ್ಲೇ ಸಂಸತ್ತಿನ ಹೊರಗೆ ಕೇಂದ್ರದ ಬಿಜೆಪಿ ಸರ್ಕಾದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಮಹುವಾ, ಅಸ್ತಿತ್ವದಲ್ಲೇ ಇಲ್ಲದ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಾನು ತಪ್ಪಿತಸ್ಥೆ ಎಂದು ನೈತಿಕ ಸಮಿತಿ ಸದಸ್ಯರು ಹೇಳಿದ್ದಾರೆ. ಸಮಿತಿಯು ಸಂಸತ್ತಿನ ಪ್ರತಿಯೊಂದು ನಿಯಮಗಳನ್ನೂ ಮುರಿದಿದ್ದಾರೆ. ನಾನು ಸಂಸತ್ತಿನ ಒಳಗೆ, ಹೊರಗೆ ಮುಂದಿನ 30 ವರ್ಷ ಬಿಜೆಪಿ ವಿರುದ್ಧ ಹೋರಾಡುತ್ತೇನೆ ಎಂದು ಸವಾಲ್ ಹಾಕಿದ್ದರು.

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ಅವರಿಗೆ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲೆ ಹೊರಿಸಲಾಗಿತ್ತು. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಇದನ್ನು ಓದಿ: ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...