Homeಮುಖಪುಟಮಹುವಾ ಉಚ್ಛಾಟನೆ; ಪ್ರತಿಕ್ರಿಯೆ ಸಲ್ಲಿಸುವಂತೆ ಲೋಕಸಭೆಯ ಕಾರ್ಯದರ್ಶಿಗೆ ಸುಪ್ರೀಂ ಸೂಚನೆ

ಮಹುವಾ ಉಚ್ಛಾಟನೆ; ಪ್ರತಿಕ್ರಿಯೆ ಸಲ್ಲಿಸುವಂತೆ ಲೋಕಸಭೆಯ ಕಾರ್ಯದರ್ಶಿಗೆ ಸುಪ್ರೀಂ ಸೂಚನೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕಿ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಮನವಿಗೆ ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ಬುಧವಾರ ಸೂಚಿಸಿದೆ.

ಪಶ್ಚಿಮ ಬಂಗಾಳದ ಕೃಷ್ಣನಗರದ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಪ್ರಶ್ನೆಗಾಗಿ ನಗದು ಸ್ವೀಕರಿಸಿದ ಆರೋಪದಲ್ಲಿ ಲೋಕಸಭೆಯ ನೈತಿಕ ಸಮಿತಿ ಶಿಫಾರಸ್ಸಿನ ಮೇರೆಗೆ ಡಿಸೆಂಬರ್ 8ರಂದು ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು.

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಿರುವುದನ್ನು ಪ್ರಶ್ನಿಸಿ ತೃಣಮೂಲಕ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.  ಲೋಕಸಭೆಯ ನೈತಿಕ ಸಮಿತಿಗೆ ತನ್ನನ್ನು ಉಚ್ಚಾಟನೆ ಮಾಡುವ ಅಧಿಕಾರ ಇಲ್ಲ. ನಾನು ದರ್ಶನ್ ಹಿರಾನಂದನಿಯಿಂದ ಹಣ ಸ್ವೀಕರಿಸಿದ್ದೇನೆ ಎಂಬುವುದು ಸಾಬೀತಾಗಿಲ್ಲ. ಕೇವಲ ನಿಶಿಕಾಂತ್ ದುಬೆ ಮತ್ತು ಜೈ ಅನಂತ್ ದೇಹದ್ರಾಯ್ ಅವರ ಆರೋಪದ ಹಿನ್ನೆಲೆ ತನ್ನ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಹಿರಾನಂದನಿ ಮತ್ತು ದೇಹದ್ರಾಯ್‌ಯನ್ನು ಕ್ರಾಸ್ ಪ್ರಶ್ನೆ ಮಾಡಲು ನನಗೆ ಅವಕಾಶ ನೀಡಿಲ್ಲ ಎಂದು ಮಹುವಾ ಹೇಳಿದ್ದರು.

ಲೋಕಸಭೆಯ ನೈತಿಕ ಸಮಿತಿಯ ಶಿಫಾರಸ್ಸಿನ ಮೇರೆಗೆ ಸ್ಪೀಕರ್ ಓಂ ಬಿರ್ಲಾ  ಮಹುವಾ ಅವರನ್ನು ಸಂಸತ್ತಿನಿಂದ ಅಮಾನತು ಮಾಡಿದ್ದರು. ಉಚ್ಚಾಟನೆ ಬೆನ್ನಲ್ಲೇ ಸಂಸತ್ತಿನ ಹೊರಗೆ ಕೇಂದ್ರದ ಬಿಜೆಪಿ ಸರ್ಕಾದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಮಹುವಾ, ಅಸ್ತಿತ್ವದಲ್ಲೇ ಇಲ್ಲದ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಾನು ತಪ್ಪಿತಸ್ಥೆ ಎಂದು ನೈತಿಕ ಸಮಿತಿ ಸದಸ್ಯರು ಹೇಳಿದ್ದಾರೆ. ಸಮಿತಿಯು ಸಂಸತ್ತಿನ ಪ್ರತಿಯೊಂದು ನಿಯಮಗಳನ್ನೂ ಮುರಿದಿದ್ದಾರೆ. ನಾನು ಸಂಸತ್ತಿನ ಒಳಗೆ, ಹೊರಗೆ ಮುಂದಿನ 30 ವರ್ಷ ಬಿಜೆಪಿ ವಿರುದ್ಧ ಹೋರಾಡುತ್ತೇನೆ ಎಂದು ಸವಾಲ್ ಹಾಕಿದ್ದರು.

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ಅವರಿಗೆ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲೆ ಹೊರಿಸಲಾಗಿತ್ತು. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಇದನ್ನು ಓದಿ: ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....