Homeಮುಖಪುಟಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಗುಂಪು ಹತ್ಯೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ನಡೆದ ಹಿಂಸಾಚಾರಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಆರು ವಾರಗಳಲ್ಲಿ ತನಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.

ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವಿಮೆನ್ (ಎನ್‌ಎಫ್‌ಐಡಬ್ಲ್ಯು) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಿರುವ ನ್ಯಾಯಮೂರ್ತಿಗಳಾದ ಬಿ.ಆರ್‌ ಗವಾಯಿ, ಅರವಿಂದ್ ಕುಮಾರ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ಮುಂದಿನ ವಿಚಾರಣೆಯನ್ನು ಆರು ವಾರಗಳ ನಂತರಕ್ಕೆ ನಿಗದಿಪಡಿಸಿದೆ.

ಅರ್ಜಿದಾರರು ದೇಶದ ಎಲ್ಲಾ ರಾಜ್ಯಗಳನ್ನು ತಮ್ಮ ಪ್ರತಿವಾದಿಗಳಾಗಿ ಹೆಸರಿಸಿದ್ದಾರೆ. ಈ ಪೈಕಿ ಮಧ್ಯಪ್ರದೇಶ ಮತ್ತು ಹರಿಯಾಣ ರಾಜ್ಯಗಳು ಈಗಾಗಲೇ ತಮ್ಮ ಪ್ರತಿಕ್ರಿಯೆ ನೀಡಿವೆ. ಉಳಿದ ರಾಜ್ಯಗಳು ಅಫಿಡವಿಟ್ ಸಲ್ಲಿಸಿಲ್ಲ. ಹಾಗಾಗಿ, ಆ ರಾಜ್ಯಗಳು ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿದೆ.

ಎನ್‌ಎಫ್‌ಐಡಬ್ಲ್ಯು ಪರ ನ್ಯಾಯಾಲಯಕ್ಕೆ ಹಾಜರಾದ ವಕೀಲ ನಿಝಾಂ ಪಾಶಾ ಅವರು, ಮಧ್ಯಪ್ರದೇಶ ಮತ್ತು ಹರಿಯಾಣ ಸಲ್ಲಿಸಿರುವ ಅಫಿಡವಿಟ್‌ ಆಧಾರದಲ್ಲಿ ವಾದ ಮಂಡಿಸಿದ್ದಾರೆ. ಈ ಎರಡೂ ರಾಜ್ಯಗಳ ಪೊಲೀಸರು ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ಮಾರ್ಗಸೂಚಿಗಳನ್ನು ಕಡೆಗಣಿಸಿ ಗುಂಪು ಹತ್ಯೆ, ಹಿಂಸಾಚಾರದ ಘಟನೆಗಳಿಗೆ ಸಾಮಾನ್ಯ ಅಪಘಾತ ಅಥವಾ ಹೋರಾಟದ ಬಣ್ಣ ಬಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ತೆಹ್ಸೀನ್ ಪೂನವಾಲಾ ಅವರ ಪ್ರಕರಣದ ತೀರ್ಪಿನಲ್ಲಿ, ಹತ್ಯೆ ಮತ್ತು ಗುಂಪು ಹಿಂಸಾಚಾರವನ್ನು ತಡೆಗಟ್ಟುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸಮಗ್ರ ಮಾರ್ಗಸೂಚಿಗಳನ್ನು ನೀಡಿದೆ.

ಗುಂಪು ಹತ್ಯೆಯನ್ನು ಸಾಮಾನ್ಯ ಪ್ರಕರಣದಂತೆ ಪೊಲೀಸರು ಹೇಗೆ ಬಿಂಬಿಸಿದ್ದಾರೆ ಎಂದು ನ್ಯಾಯಾಲದ ಗಮನಕ್ಕೆ ತರಲು ವಕೀಲ ನಿಝಾಂ ಪಾಶಾ ಅವರು ಮಧ್ಯಪ್ರದೇಶ ಸಲ್ಲಿಸಿರುವ ಅಫಿಡವಿಟ್‌ನ ಕೆಲ ಭಾಗಗಳನ್ನು ನ್ಯಾಯಪೀಠದ ಮುಂದೆ ಓದಿ ವಿವರಿಸಿದ್ದಾರೆ.

ಮಾಧ್ಯಮ ವರದಿಗಳು ಗುಂಪು ಹತ್ಯೆ ಎಂದ ಪ್ರಕರಣಗಳನ್ನು ಪೊಲೀಸರು ಸಾಮಾನ್ಯ ಗಲಾಟೆಯ ಪ್ರಕರಣಗಳು ಎಂದು ಉಲ್ಲೇಖಿಸಿದ್ದಾರೆ. ಪೊಲೀಸರ ವರದಿಗೂ ಮಾಧ್ಯಮಗಳ ವರದಿಗೂ ತಾಳೆಯಾಗುತ್ತಿಲ್ಲ. ಮಾಂಸ ಕೊಂಡೊಯ್ದ ಕಾರಣಕ್ಕೆ ಇಬ್ಬರು ವ್ಯಕ್ತಿಗಳ ಮೇಲೆ ನಡೆದ ಗುಂಪು ಹಲ್ಲೆಯ ಘಟನೆಯೊಂದಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್ ಕೂಡ ದಾಖಲಾಗಿಲ್ಲ ಎಂದು ವಕೀಲ ಪಾಶಾ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಧ್ಯಪ್ರದೇಶದಲ್ಲಿ ಗುಂಪಿನಿಂದ ಥಳಿಸಿ ಹತ್ಯೆ ಘಟನೆ ನಡೆದಿದ್ದರೂ, ಸಂತ್ರಸ್ತರ ವಿರುದ್ಧವೇ ಗೋವಧೆ ಪ್ರಕರಣವನ್ನು ದಾಖಲಿಸಲಾಗಿದೆ. ಸರ್ಕಾರ ಗುಂಪು ಹತ್ಯೆ ಘಟನೆಯನ್ನು ನಿರಾಕರಿಸಿದರೆ ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿಯ 2018ರ ತೀರ್ಪಿನ ಪಾಲನೆ ಹೇಗೆ ಸಾಧ್ಯ? ಎಂದು ವಕೀಲ ನಿಝಾಂ ಪಾಶಾ ಪ್ರಶ್ನಿಸಿದ್ದಾರೆ.

ಮಾಂಸದ ರಾಸಾಯನಿಕ ವಿಶ್ಲೇಷಣೆ ನಡೆಸದೆ ಎಫ್ಐಆರ್ ದಾಖಲಿಸಿದ್ದು ಹೇಗೆ? ಗಲಾಟೆ ನಡೆಸಿದ್ದವರ ವಿರುದ್ಧ ಏಕೆ ಎಫ್ಐಆರ್ ದಾಖಲಿಸಿಲ್ಲ? ನೀವು ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೀರಿ? ಎಂದು ಮಧ್ಯಪ್ರದೇಶ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಾಲಯ, ಘಟನೆಯ ವಿವರಗಳನ್ನು ಸಲ್ಲಿಸುವಂತೆ ಅವರಿಗೆ ಸೂಚಿಸಿದೆ. ಇದುವರೆಗೆ ಪ್ರತಿಕ್ರಿಯೆ ನೀಡದ ರಾಜ್ಯಗಳೂ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ‘ಮೋದಿ ಅಲೆ ಇಲ್ಲ, ಭ್ರಮೆಯಲ್ಲಿರಬೇಡಿ’ ಎಂದ ಬಿಜೆಪಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...