Homeಮುಖಪುಟಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಗುಂಪು ಹತ್ಯೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ನಡೆದ ಹಿಂಸಾಚಾರಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಆರು ವಾರಗಳಲ್ಲಿ ತನಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.

ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವಿಮೆನ್ (ಎನ್‌ಎಫ್‌ಐಡಬ್ಲ್ಯು) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಿರುವ ನ್ಯಾಯಮೂರ್ತಿಗಳಾದ ಬಿ.ಆರ್‌ ಗವಾಯಿ, ಅರವಿಂದ್ ಕುಮಾರ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ಮುಂದಿನ ವಿಚಾರಣೆಯನ್ನು ಆರು ವಾರಗಳ ನಂತರಕ್ಕೆ ನಿಗದಿಪಡಿಸಿದೆ.

ಅರ್ಜಿದಾರರು ದೇಶದ ಎಲ್ಲಾ ರಾಜ್ಯಗಳನ್ನು ತಮ್ಮ ಪ್ರತಿವಾದಿಗಳಾಗಿ ಹೆಸರಿಸಿದ್ದಾರೆ. ಈ ಪೈಕಿ ಮಧ್ಯಪ್ರದೇಶ ಮತ್ತು ಹರಿಯಾಣ ರಾಜ್ಯಗಳು ಈಗಾಗಲೇ ತಮ್ಮ ಪ್ರತಿಕ್ರಿಯೆ ನೀಡಿವೆ. ಉಳಿದ ರಾಜ್ಯಗಳು ಅಫಿಡವಿಟ್ ಸಲ್ಲಿಸಿಲ್ಲ. ಹಾಗಾಗಿ, ಆ ರಾಜ್ಯಗಳು ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿದೆ.

ಎನ್‌ಎಫ್‌ಐಡಬ್ಲ್ಯು ಪರ ನ್ಯಾಯಾಲಯಕ್ಕೆ ಹಾಜರಾದ ವಕೀಲ ನಿಝಾಂ ಪಾಶಾ ಅವರು, ಮಧ್ಯಪ್ರದೇಶ ಮತ್ತು ಹರಿಯಾಣ ಸಲ್ಲಿಸಿರುವ ಅಫಿಡವಿಟ್‌ ಆಧಾರದಲ್ಲಿ ವಾದ ಮಂಡಿಸಿದ್ದಾರೆ. ಈ ಎರಡೂ ರಾಜ್ಯಗಳ ಪೊಲೀಸರು ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ಮಾರ್ಗಸೂಚಿಗಳನ್ನು ಕಡೆಗಣಿಸಿ ಗುಂಪು ಹತ್ಯೆ, ಹಿಂಸಾಚಾರದ ಘಟನೆಗಳಿಗೆ ಸಾಮಾನ್ಯ ಅಪಘಾತ ಅಥವಾ ಹೋರಾಟದ ಬಣ್ಣ ಬಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ತೆಹ್ಸೀನ್ ಪೂನವಾಲಾ ಅವರ ಪ್ರಕರಣದ ತೀರ್ಪಿನಲ್ಲಿ, ಹತ್ಯೆ ಮತ್ತು ಗುಂಪು ಹಿಂಸಾಚಾರವನ್ನು ತಡೆಗಟ್ಟುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸಮಗ್ರ ಮಾರ್ಗಸೂಚಿಗಳನ್ನು ನೀಡಿದೆ.

ಗುಂಪು ಹತ್ಯೆಯನ್ನು ಸಾಮಾನ್ಯ ಪ್ರಕರಣದಂತೆ ಪೊಲೀಸರು ಹೇಗೆ ಬಿಂಬಿಸಿದ್ದಾರೆ ಎಂದು ನ್ಯಾಯಾಲದ ಗಮನಕ್ಕೆ ತರಲು ವಕೀಲ ನಿಝಾಂ ಪಾಶಾ ಅವರು ಮಧ್ಯಪ್ರದೇಶ ಸಲ್ಲಿಸಿರುವ ಅಫಿಡವಿಟ್‌ನ ಕೆಲ ಭಾಗಗಳನ್ನು ನ್ಯಾಯಪೀಠದ ಮುಂದೆ ಓದಿ ವಿವರಿಸಿದ್ದಾರೆ.

ಮಾಧ್ಯಮ ವರದಿಗಳು ಗುಂಪು ಹತ್ಯೆ ಎಂದ ಪ್ರಕರಣಗಳನ್ನು ಪೊಲೀಸರು ಸಾಮಾನ್ಯ ಗಲಾಟೆಯ ಪ್ರಕರಣಗಳು ಎಂದು ಉಲ್ಲೇಖಿಸಿದ್ದಾರೆ. ಪೊಲೀಸರ ವರದಿಗೂ ಮಾಧ್ಯಮಗಳ ವರದಿಗೂ ತಾಳೆಯಾಗುತ್ತಿಲ್ಲ. ಮಾಂಸ ಕೊಂಡೊಯ್ದ ಕಾರಣಕ್ಕೆ ಇಬ್ಬರು ವ್ಯಕ್ತಿಗಳ ಮೇಲೆ ನಡೆದ ಗುಂಪು ಹಲ್ಲೆಯ ಘಟನೆಯೊಂದಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್ ಕೂಡ ದಾಖಲಾಗಿಲ್ಲ ಎಂದು ವಕೀಲ ಪಾಶಾ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಧ್ಯಪ್ರದೇಶದಲ್ಲಿ ಗುಂಪಿನಿಂದ ಥಳಿಸಿ ಹತ್ಯೆ ಘಟನೆ ನಡೆದಿದ್ದರೂ, ಸಂತ್ರಸ್ತರ ವಿರುದ್ಧವೇ ಗೋವಧೆ ಪ್ರಕರಣವನ್ನು ದಾಖಲಿಸಲಾಗಿದೆ. ಸರ್ಕಾರ ಗುಂಪು ಹತ್ಯೆ ಘಟನೆಯನ್ನು ನಿರಾಕರಿಸಿದರೆ ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿಯ 2018ರ ತೀರ್ಪಿನ ಪಾಲನೆ ಹೇಗೆ ಸಾಧ್ಯ? ಎಂದು ವಕೀಲ ನಿಝಾಂ ಪಾಶಾ ಪ್ರಶ್ನಿಸಿದ್ದಾರೆ.

ಮಾಂಸದ ರಾಸಾಯನಿಕ ವಿಶ್ಲೇಷಣೆ ನಡೆಸದೆ ಎಫ್ಐಆರ್ ದಾಖಲಿಸಿದ್ದು ಹೇಗೆ? ಗಲಾಟೆ ನಡೆಸಿದ್ದವರ ವಿರುದ್ಧ ಏಕೆ ಎಫ್ಐಆರ್ ದಾಖಲಿಸಿಲ್ಲ? ನೀವು ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೀರಿ? ಎಂದು ಮಧ್ಯಪ್ರದೇಶ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಾಲಯ, ಘಟನೆಯ ವಿವರಗಳನ್ನು ಸಲ್ಲಿಸುವಂತೆ ಅವರಿಗೆ ಸೂಚಿಸಿದೆ. ಇದುವರೆಗೆ ಪ್ರತಿಕ್ರಿಯೆ ನೀಡದ ರಾಜ್ಯಗಳೂ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ‘ಮೋದಿ ಅಲೆ ಇಲ್ಲ, ಭ್ರಮೆಯಲ್ಲಿರಬೇಡಿ’ ಎಂದ ಬಿಜೆಪಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...