Homeಮುಖಪುಟಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಗುಂಪು ಹತ್ಯೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ನಡೆದ ಹಿಂಸಾಚಾರಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಆರು ವಾರಗಳಲ್ಲಿ ತನಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.

ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವಿಮೆನ್ (ಎನ್‌ಎಫ್‌ಐಡಬ್ಲ್ಯು) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಿರುವ ನ್ಯಾಯಮೂರ್ತಿಗಳಾದ ಬಿ.ಆರ್‌ ಗವಾಯಿ, ಅರವಿಂದ್ ಕುಮಾರ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ಮುಂದಿನ ವಿಚಾರಣೆಯನ್ನು ಆರು ವಾರಗಳ ನಂತರಕ್ಕೆ ನಿಗದಿಪಡಿಸಿದೆ.

ಅರ್ಜಿದಾರರು ದೇಶದ ಎಲ್ಲಾ ರಾಜ್ಯಗಳನ್ನು ತಮ್ಮ ಪ್ರತಿವಾದಿಗಳಾಗಿ ಹೆಸರಿಸಿದ್ದಾರೆ. ಈ ಪೈಕಿ ಮಧ್ಯಪ್ರದೇಶ ಮತ್ತು ಹರಿಯಾಣ ರಾಜ್ಯಗಳು ಈಗಾಗಲೇ ತಮ್ಮ ಪ್ರತಿಕ್ರಿಯೆ ನೀಡಿವೆ. ಉಳಿದ ರಾಜ್ಯಗಳು ಅಫಿಡವಿಟ್ ಸಲ್ಲಿಸಿಲ್ಲ. ಹಾಗಾಗಿ, ಆ ರಾಜ್ಯಗಳು ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿದೆ.

ಎನ್‌ಎಫ್‌ಐಡಬ್ಲ್ಯು ಪರ ನ್ಯಾಯಾಲಯಕ್ಕೆ ಹಾಜರಾದ ವಕೀಲ ನಿಝಾಂ ಪಾಶಾ ಅವರು, ಮಧ್ಯಪ್ರದೇಶ ಮತ್ತು ಹರಿಯಾಣ ಸಲ್ಲಿಸಿರುವ ಅಫಿಡವಿಟ್‌ ಆಧಾರದಲ್ಲಿ ವಾದ ಮಂಡಿಸಿದ್ದಾರೆ. ಈ ಎರಡೂ ರಾಜ್ಯಗಳ ಪೊಲೀಸರು ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ಮಾರ್ಗಸೂಚಿಗಳನ್ನು ಕಡೆಗಣಿಸಿ ಗುಂಪು ಹತ್ಯೆ, ಹಿಂಸಾಚಾರದ ಘಟನೆಗಳಿಗೆ ಸಾಮಾನ್ಯ ಅಪಘಾತ ಅಥವಾ ಹೋರಾಟದ ಬಣ್ಣ ಬಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ತೆಹ್ಸೀನ್ ಪೂನವಾಲಾ ಅವರ ಪ್ರಕರಣದ ತೀರ್ಪಿನಲ್ಲಿ, ಹತ್ಯೆ ಮತ್ತು ಗುಂಪು ಹಿಂಸಾಚಾರವನ್ನು ತಡೆಗಟ್ಟುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸಮಗ್ರ ಮಾರ್ಗಸೂಚಿಗಳನ್ನು ನೀಡಿದೆ.

ಗುಂಪು ಹತ್ಯೆಯನ್ನು ಸಾಮಾನ್ಯ ಪ್ರಕರಣದಂತೆ ಪೊಲೀಸರು ಹೇಗೆ ಬಿಂಬಿಸಿದ್ದಾರೆ ಎಂದು ನ್ಯಾಯಾಲದ ಗಮನಕ್ಕೆ ತರಲು ವಕೀಲ ನಿಝಾಂ ಪಾಶಾ ಅವರು ಮಧ್ಯಪ್ರದೇಶ ಸಲ್ಲಿಸಿರುವ ಅಫಿಡವಿಟ್‌ನ ಕೆಲ ಭಾಗಗಳನ್ನು ನ್ಯಾಯಪೀಠದ ಮುಂದೆ ಓದಿ ವಿವರಿಸಿದ್ದಾರೆ.

ಮಾಧ್ಯಮ ವರದಿಗಳು ಗುಂಪು ಹತ್ಯೆ ಎಂದ ಪ್ರಕರಣಗಳನ್ನು ಪೊಲೀಸರು ಸಾಮಾನ್ಯ ಗಲಾಟೆಯ ಪ್ರಕರಣಗಳು ಎಂದು ಉಲ್ಲೇಖಿಸಿದ್ದಾರೆ. ಪೊಲೀಸರ ವರದಿಗೂ ಮಾಧ್ಯಮಗಳ ವರದಿಗೂ ತಾಳೆಯಾಗುತ್ತಿಲ್ಲ. ಮಾಂಸ ಕೊಂಡೊಯ್ದ ಕಾರಣಕ್ಕೆ ಇಬ್ಬರು ವ್ಯಕ್ತಿಗಳ ಮೇಲೆ ನಡೆದ ಗುಂಪು ಹಲ್ಲೆಯ ಘಟನೆಯೊಂದಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್ ಕೂಡ ದಾಖಲಾಗಿಲ್ಲ ಎಂದು ವಕೀಲ ಪಾಶಾ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಧ್ಯಪ್ರದೇಶದಲ್ಲಿ ಗುಂಪಿನಿಂದ ಥಳಿಸಿ ಹತ್ಯೆ ಘಟನೆ ನಡೆದಿದ್ದರೂ, ಸಂತ್ರಸ್ತರ ವಿರುದ್ಧವೇ ಗೋವಧೆ ಪ್ರಕರಣವನ್ನು ದಾಖಲಿಸಲಾಗಿದೆ. ಸರ್ಕಾರ ಗುಂಪು ಹತ್ಯೆ ಘಟನೆಯನ್ನು ನಿರಾಕರಿಸಿದರೆ ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿಯ 2018ರ ತೀರ್ಪಿನ ಪಾಲನೆ ಹೇಗೆ ಸಾಧ್ಯ? ಎಂದು ವಕೀಲ ನಿಝಾಂ ಪಾಶಾ ಪ್ರಶ್ನಿಸಿದ್ದಾರೆ.

ಮಾಂಸದ ರಾಸಾಯನಿಕ ವಿಶ್ಲೇಷಣೆ ನಡೆಸದೆ ಎಫ್ಐಆರ್ ದಾಖಲಿಸಿದ್ದು ಹೇಗೆ? ಗಲಾಟೆ ನಡೆಸಿದ್ದವರ ವಿರುದ್ಧ ಏಕೆ ಎಫ್ಐಆರ್ ದಾಖಲಿಸಿಲ್ಲ? ನೀವು ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೀರಿ? ಎಂದು ಮಧ್ಯಪ್ರದೇಶ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಾಲಯ, ಘಟನೆಯ ವಿವರಗಳನ್ನು ಸಲ್ಲಿಸುವಂತೆ ಅವರಿಗೆ ಸೂಚಿಸಿದೆ. ಇದುವರೆಗೆ ಪ್ರತಿಕ್ರಿಯೆ ನೀಡದ ರಾಜ್ಯಗಳೂ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ‘ಮೋದಿ ಅಲೆ ಇಲ್ಲ, ಭ್ರಮೆಯಲ್ಲಿರಬೇಡಿ’ ಎಂದ ಬಿಜೆಪಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...