Homeಮುಖಪುಟಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಗುಂಪು ಹತ್ಯೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ನಡೆದ ಹಿಂಸಾಚಾರಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಆರು ವಾರಗಳಲ್ಲಿ ತನಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.

ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವಿಮೆನ್ (ಎನ್‌ಎಫ್‌ಐಡಬ್ಲ್ಯು) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಿರುವ ನ್ಯಾಯಮೂರ್ತಿಗಳಾದ ಬಿ.ಆರ್‌ ಗವಾಯಿ, ಅರವಿಂದ್ ಕುಮಾರ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ಮುಂದಿನ ವಿಚಾರಣೆಯನ್ನು ಆರು ವಾರಗಳ ನಂತರಕ್ಕೆ ನಿಗದಿಪಡಿಸಿದೆ.

ಅರ್ಜಿದಾರರು ದೇಶದ ಎಲ್ಲಾ ರಾಜ್ಯಗಳನ್ನು ತಮ್ಮ ಪ್ರತಿವಾದಿಗಳಾಗಿ ಹೆಸರಿಸಿದ್ದಾರೆ. ಈ ಪೈಕಿ ಮಧ್ಯಪ್ರದೇಶ ಮತ್ತು ಹರಿಯಾಣ ರಾಜ್ಯಗಳು ಈಗಾಗಲೇ ತಮ್ಮ ಪ್ರತಿಕ್ರಿಯೆ ನೀಡಿವೆ. ಉಳಿದ ರಾಜ್ಯಗಳು ಅಫಿಡವಿಟ್ ಸಲ್ಲಿಸಿಲ್ಲ. ಹಾಗಾಗಿ, ಆ ರಾಜ್ಯಗಳು ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿದೆ.

ಎನ್‌ಎಫ್‌ಐಡಬ್ಲ್ಯು ಪರ ನ್ಯಾಯಾಲಯಕ್ಕೆ ಹಾಜರಾದ ವಕೀಲ ನಿಝಾಂ ಪಾಶಾ ಅವರು, ಮಧ್ಯಪ್ರದೇಶ ಮತ್ತು ಹರಿಯಾಣ ಸಲ್ಲಿಸಿರುವ ಅಫಿಡವಿಟ್‌ ಆಧಾರದಲ್ಲಿ ವಾದ ಮಂಡಿಸಿದ್ದಾರೆ. ಈ ಎರಡೂ ರಾಜ್ಯಗಳ ಪೊಲೀಸರು ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ಮಾರ್ಗಸೂಚಿಗಳನ್ನು ಕಡೆಗಣಿಸಿ ಗುಂಪು ಹತ್ಯೆ, ಹಿಂಸಾಚಾರದ ಘಟನೆಗಳಿಗೆ ಸಾಮಾನ್ಯ ಅಪಘಾತ ಅಥವಾ ಹೋರಾಟದ ಬಣ್ಣ ಬಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ತೆಹ್ಸೀನ್ ಪೂನವಾಲಾ ಅವರ ಪ್ರಕರಣದ ತೀರ್ಪಿನಲ್ಲಿ, ಹತ್ಯೆ ಮತ್ತು ಗುಂಪು ಹಿಂಸಾಚಾರವನ್ನು ತಡೆಗಟ್ಟುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸಮಗ್ರ ಮಾರ್ಗಸೂಚಿಗಳನ್ನು ನೀಡಿದೆ.

ಗುಂಪು ಹತ್ಯೆಯನ್ನು ಸಾಮಾನ್ಯ ಪ್ರಕರಣದಂತೆ ಪೊಲೀಸರು ಹೇಗೆ ಬಿಂಬಿಸಿದ್ದಾರೆ ಎಂದು ನ್ಯಾಯಾಲದ ಗಮನಕ್ಕೆ ತರಲು ವಕೀಲ ನಿಝಾಂ ಪಾಶಾ ಅವರು ಮಧ್ಯಪ್ರದೇಶ ಸಲ್ಲಿಸಿರುವ ಅಫಿಡವಿಟ್‌ನ ಕೆಲ ಭಾಗಗಳನ್ನು ನ್ಯಾಯಪೀಠದ ಮುಂದೆ ಓದಿ ವಿವರಿಸಿದ್ದಾರೆ.

ಮಾಧ್ಯಮ ವರದಿಗಳು ಗುಂಪು ಹತ್ಯೆ ಎಂದ ಪ್ರಕರಣಗಳನ್ನು ಪೊಲೀಸರು ಸಾಮಾನ್ಯ ಗಲಾಟೆಯ ಪ್ರಕರಣಗಳು ಎಂದು ಉಲ್ಲೇಖಿಸಿದ್ದಾರೆ. ಪೊಲೀಸರ ವರದಿಗೂ ಮಾಧ್ಯಮಗಳ ವರದಿಗೂ ತಾಳೆಯಾಗುತ್ತಿಲ್ಲ. ಮಾಂಸ ಕೊಂಡೊಯ್ದ ಕಾರಣಕ್ಕೆ ಇಬ್ಬರು ವ್ಯಕ್ತಿಗಳ ಮೇಲೆ ನಡೆದ ಗುಂಪು ಹಲ್ಲೆಯ ಘಟನೆಯೊಂದಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್ ಕೂಡ ದಾಖಲಾಗಿಲ್ಲ ಎಂದು ವಕೀಲ ಪಾಶಾ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಧ್ಯಪ್ರದೇಶದಲ್ಲಿ ಗುಂಪಿನಿಂದ ಥಳಿಸಿ ಹತ್ಯೆ ಘಟನೆ ನಡೆದಿದ್ದರೂ, ಸಂತ್ರಸ್ತರ ವಿರುದ್ಧವೇ ಗೋವಧೆ ಪ್ರಕರಣವನ್ನು ದಾಖಲಿಸಲಾಗಿದೆ. ಸರ್ಕಾರ ಗುಂಪು ಹತ್ಯೆ ಘಟನೆಯನ್ನು ನಿರಾಕರಿಸಿದರೆ ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿಯ 2018ರ ತೀರ್ಪಿನ ಪಾಲನೆ ಹೇಗೆ ಸಾಧ್ಯ? ಎಂದು ವಕೀಲ ನಿಝಾಂ ಪಾಶಾ ಪ್ರಶ್ನಿಸಿದ್ದಾರೆ.

ಮಾಂಸದ ರಾಸಾಯನಿಕ ವಿಶ್ಲೇಷಣೆ ನಡೆಸದೆ ಎಫ್ಐಆರ್ ದಾಖಲಿಸಿದ್ದು ಹೇಗೆ? ಗಲಾಟೆ ನಡೆಸಿದ್ದವರ ವಿರುದ್ಧ ಏಕೆ ಎಫ್ಐಆರ್ ದಾಖಲಿಸಿಲ್ಲ? ನೀವು ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೀರಿ? ಎಂದು ಮಧ್ಯಪ್ರದೇಶ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಾಲಯ, ಘಟನೆಯ ವಿವರಗಳನ್ನು ಸಲ್ಲಿಸುವಂತೆ ಅವರಿಗೆ ಸೂಚಿಸಿದೆ. ಇದುವರೆಗೆ ಪ್ರತಿಕ್ರಿಯೆ ನೀಡದ ರಾಜ್ಯಗಳೂ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ‘ಮೋದಿ ಅಲೆ ಇಲ್ಲ, ಭ್ರಮೆಯಲ್ಲಿರಬೇಡಿ’ ಎಂದ ಬಿಜೆಪಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...