Homeಮುಖಪುಟಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಗುಂಪು ಹತ್ಯೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ತಿಳಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಗುಂಪು ಹತ್ಯೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ನಡೆದ ಹಿಂಸಾಚಾರಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಆರು ವಾರಗಳಲ್ಲಿ ತನಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.

ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವಿಮೆನ್ (ಎನ್‌ಎಫ್‌ಐಡಬ್ಲ್ಯು) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಿರುವ ನ್ಯಾಯಮೂರ್ತಿಗಳಾದ ಬಿ.ಆರ್‌ ಗವಾಯಿ, ಅರವಿಂದ್ ಕುಮಾರ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ಮುಂದಿನ ವಿಚಾರಣೆಯನ್ನು ಆರು ವಾರಗಳ ನಂತರಕ್ಕೆ ನಿಗದಿಪಡಿಸಿದೆ.

ಅರ್ಜಿದಾರರು ದೇಶದ ಎಲ್ಲಾ ರಾಜ್ಯಗಳನ್ನು ತಮ್ಮ ಪ್ರತಿವಾದಿಗಳಾಗಿ ಹೆಸರಿಸಿದ್ದಾರೆ. ಈ ಪೈಕಿ ಮಧ್ಯಪ್ರದೇಶ ಮತ್ತು ಹರಿಯಾಣ ರಾಜ್ಯಗಳು ಈಗಾಗಲೇ ತಮ್ಮ ಪ್ರತಿಕ್ರಿಯೆ ನೀಡಿವೆ. ಉಳಿದ ರಾಜ್ಯಗಳು ಅಫಿಡವಿಟ್ ಸಲ್ಲಿಸಿಲ್ಲ. ಹಾಗಾಗಿ, ಆ ರಾಜ್ಯಗಳು ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿದೆ.

ಎನ್‌ಎಫ್‌ಐಡಬ್ಲ್ಯು ಪರ ನ್ಯಾಯಾಲಯಕ್ಕೆ ಹಾಜರಾದ ವಕೀಲ ನಿಝಾಂ ಪಾಶಾ ಅವರು, ಮಧ್ಯಪ್ರದೇಶ ಮತ್ತು ಹರಿಯಾಣ ಸಲ್ಲಿಸಿರುವ ಅಫಿಡವಿಟ್‌ ಆಧಾರದಲ್ಲಿ ವಾದ ಮಂಡಿಸಿದ್ದಾರೆ. ಈ ಎರಡೂ ರಾಜ್ಯಗಳ ಪೊಲೀಸರು ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರೂಪಿಸಿದ ಮಾರ್ಗಸೂಚಿಗಳನ್ನು ಕಡೆಗಣಿಸಿ ಗುಂಪು ಹತ್ಯೆ, ಹಿಂಸಾಚಾರದ ಘಟನೆಗಳಿಗೆ ಸಾಮಾನ್ಯ ಅಪಘಾತ ಅಥವಾ ಹೋರಾಟದ ಬಣ್ಣ ಬಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ತೆಹ್ಸೀನ್ ಪೂನವಾಲಾ ಅವರ ಪ್ರಕರಣದ ತೀರ್ಪಿನಲ್ಲಿ, ಹತ್ಯೆ ಮತ್ತು ಗುಂಪು ಹಿಂಸಾಚಾರವನ್ನು ತಡೆಗಟ್ಟುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸಮಗ್ರ ಮಾರ್ಗಸೂಚಿಗಳನ್ನು ನೀಡಿದೆ.

ಗುಂಪು ಹತ್ಯೆಯನ್ನು ಸಾಮಾನ್ಯ ಪ್ರಕರಣದಂತೆ ಪೊಲೀಸರು ಹೇಗೆ ಬಿಂಬಿಸಿದ್ದಾರೆ ಎಂದು ನ್ಯಾಯಾಲದ ಗಮನಕ್ಕೆ ತರಲು ವಕೀಲ ನಿಝಾಂ ಪಾಶಾ ಅವರು ಮಧ್ಯಪ್ರದೇಶ ಸಲ್ಲಿಸಿರುವ ಅಫಿಡವಿಟ್‌ನ ಕೆಲ ಭಾಗಗಳನ್ನು ನ್ಯಾಯಪೀಠದ ಮುಂದೆ ಓದಿ ವಿವರಿಸಿದ್ದಾರೆ.

ಮಾಧ್ಯಮ ವರದಿಗಳು ಗುಂಪು ಹತ್ಯೆ ಎಂದ ಪ್ರಕರಣಗಳನ್ನು ಪೊಲೀಸರು ಸಾಮಾನ್ಯ ಗಲಾಟೆಯ ಪ್ರಕರಣಗಳು ಎಂದು ಉಲ್ಲೇಖಿಸಿದ್ದಾರೆ. ಪೊಲೀಸರ ವರದಿಗೂ ಮಾಧ್ಯಮಗಳ ವರದಿಗೂ ತಾಳೆಯಾಗುತ್ತಿಲ್ಲ. ಮಾಂಸ ಕೊಂಡೊಯ್ದ ಕಾರಣಕ್ಕೆ ಇಬ್ಬರು ವ್ಯಕ್ತಿಗಳ ಮೇಲೆ ನಡೆದ ಗುಂಪು ಹಲ್ಲೆಯ ಘಟನೆಯೊಂದಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್ ಕೂಡ ದಾಖಲಾಗಿಲ್ಲ ಎಂದು ವಕೀಲ ಪಾಶಾ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಧ್ಯಪ್ರದೇಶದಲ್ಲಿ ಗುಂಪಿನಿಂದ ಥಳಿಸಿ ಹತ್ಯೆ ಘಟನೆ ನಡೆದಿದ್ದರೂ, ಸಂತ್ರಸ್ತರ ವಿರುದ್ಧವೇ ಗೋವಧೆ ಪ್ರಕರಣವನ್ನು ದಾಖಲಿಸಲಾಗಿದೆ. ಸರ್ಕಾರ ಗುಂಪು ಹತ್ಯೆ ಘಟನೆಯನ್ನು ನಿರಾಕರಿಸಿದರೆ ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿಯ 2018ರ ತೀರ್ಪಿನ ಪಾಲನೆ ಹೇಗೆ ಸಾಧ್ಯ? ಎಂದು ವಕೀಲ ನಿಝಾಂ ಪಾಶಾ ಪ್ರಶ್ನಿಸಿದ್ದಾರೆ.

ಮಾಂಸದ ರಾಸಾಯನಿಕ ವಿಶ್ಲೇಷಣೆ ನಡೆಸದೆ ಎಫ್ಐಆರ್ ದಾಖಲಿಸಿದ್ದು ಹೇಗೆ? ಗಲಾಟೆ ನಡೆಸಿದ್ದವರ ವಿರುದ್ಧ ಏಕೆ ಎಫ್ಐಆರ್ ದಾಖಲಿಸಿಲ್ಲ? ನೀವು ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೀರಿ? ಎಂದು ಮಧ್ಯಪ್ರದೇಶ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಾಲಯ, ಘಟನೆಯ ವಿವರಗಳನ್ನು ಸಲ್ಲಿಸುವಂತೆ ಅವರಿಗೆ ಸೂಚಿಸಿದೆ. ಇದುವರೆಗೆ ಪ್ರತಿಕ್ರಿಯೆ ನೀಡದ ರಾಜ್ಯಗಳೂ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ‘ಮೋದಿ ಅಲೆ ಇಲ್ಲ, ಭ್ರಮೆಯಲ್ಲಿರಬೇಡಿ’ ಎಂದ ಬಿಜೆಪಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...