Homeಮುಖಪುಟಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

- Advertisement -
- Advertisement -

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ತಿಂಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ.

ಆಗಸ್ಟ್ 5 ರಂದು ಭೂಷಣ್ ವಿರುದ್ಧ ವಿಚಾರಣೆ ಆರಂಭವಾಗಿತ್ತು. ಆಗಸ್ಟ್ 14 ರಂದು ಅವರು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿ, ಆಗಸ್ಟ್ 20 ರಂದು ಶಿಕ್ಷೆ ಪ್ರಮಾಣ ಘೊಷಿಸುವುದಾಗಿ ಹೇಳಿತ್ತು. ಆದರೆ ಆಗಸ್ಟ್ 20 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ನಿರ್ದೇಶನದಂತೆ ಬೇಷರತ್ ಕ್ಷಮೆಯಾಚಿಸಲು ಭೂಷಣ್ ನಿರಾಕರಿಸಿದರು. ನೀವೆಷ್ಟೇ ಸಮಯ ಕೊಟ್ಟರೂ ತನ್ನ ಪ್ರಯೋಜನವಿಲ್ಲ ಎಂದಿದ್ದರು.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದರು.

ಆದರೂ ಸುಪ್ರೀಂ ಕೋರ್ಟ್ ಅವರಿಗೆ ಕ್ಷಮೆ ಕೇಳಲು ಮತ್ತು ತಮ್ಮ ಹೇಳಿಕೆಯನ್ನು ಬದಲಿಸಲು ಮೂರುದಿನಗಳ ಸಮಯ ನೀಡಿತ್ತು. ಆಗಸ್ಟ್ 24 ರಂದು ಮತ್ತೆ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಅಂದೂ ಸಹ ಸಮಯ ನೀಡಿ ಕ್ಷಮೆ ಕೇಳುವಂತೆ ನಿರ್ದೇಶಿಸಿತ್ತು. ಆದರೆ ಅಂದು ಕೂಡ ಭೂಷಣ್ ಕ್ಷಮೆಯಾಚಿಸಲಿಲ್ಲ.

“ನನ್ನ ಟ್ವೀಟ್‌ಗಳು ನನ್ನ ನಂಬಿಕೆಯನ್ನು ಪ್ರತಿನಿಧಿಸುತ್ತವೆ. ಷರತ್ತುಬದ್ಧ ಅಥವಾ ಬೇಷರತ್ತಾದ ಕ್ಷಮೆಯು ಈ ನಂಬಿಕೆಗಳಿಗೆ ಅಪ್ರಾಮಾಣಿಕ ಎಂದು ಭಾವಿಸುತ್ತೆನೆ. ಯಾವುದೇ ಕ್ಷಮೆಯಾಚನೆಯು ನ್ಯಾಯಾಲಯವು ಹೇಳಿದಂತೆ ಕೇವಲ ಪ್ರಚೋದನೆಯಾಗಿರಬಾರದು. ಅದು ಪ್ರಾಮಾಣಿಕವಾಗಿರಬೇಕು. ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ” ಎಂದು ಭೂಷಣ್ ನುಡಿದಿದ್ದರು.

ಇದನ್ನೂ ಓದಿ; ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಆಗಸ್ಟ್ 25ರಂದು ಮನವಿ ಮಾಡಿದ್ದರು. ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣಮುರಾರಿಯವರಿದ್ದ ಪೀಠದ ಎದುರು ಭೂಷಣ್ ಪರವಾಗಿ ಹಿರಿಯ ವಕೀಲರಾದ ದುಷ್ಯಂತ್ ಧವೆ ಮತ್ತು ರಾಜೀವ್ ಧವನ್ ವಾದಿಸಿದ್ದರು.


ಇದನ್ನೂ ಓದಿ: ಬುಡ ಅಲ್ಲಾಡಿಸುತ್ತಿರುವ ಭೂಷಣ್ ಟ್ವೀಟ್ಸ್ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...