Homeಮುಖಪುಟಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

- Advertisement -
- Advertisement -

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ತಿಂಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ.

ಆಗಸ್ಟ್ 5 ರಂದು ಭೂಷಣ್ ವಿರುದ್ಧ ವಿಚಾರಣೆ ಆರಂಭವಾಗಿತ್ತು. ಆಗಸ್ಟ್ 14 ರಂದು ಅವರು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿ, ಆಗಸ್ಟ್ 20 ರಂದು ಶಿಕ್ಷೆ ಪ್ರಮಾಣ ಘೊಷಿಸುವುದಾಗಿ ಹೇಳಿತ್ತು. ಆದರೆ ಆಗಸ್ಟ್ 20 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ನಿರ್ದೇಶನದಂತೆ ಬೇಷರತ್ ಕ್ಷಮೆಯಾಚಿಸಲು ಭೂಷಣ್ ನಿರಾಕರಿಸಿದರು. ನೀವೆಷ್ಟೇ ಸಮಯ ಕೊಟ್ಟರೂ ತನ್ನ ಪ್ರಯೋಜನವಿಲ್ಲ ಎಂದಿದ್ದರು.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದರು.

ಆದರೂ ಸುಪ್ರೀಂ ಕೋರ್ಟ್ ಅವರಿಗೆ ಕ್ಷಮೆ ಕೇಳಲು ಮತ್ತು ತಮ್ಮ ಹೇಳಿಕೆಯನ್ನು ಬದಲಿಸಲು ಮೂರುದಿನಗಳ ಸಮಯ ನೀಡಿತ್ತು. ಆಗಸ್ಟ್ 24 ರಂದು ಮತ್ತೆ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಅಂದೂ ಸಹ ಸಮಯ ನೀಡಿ ಕ್ಷಮೆ ಕೇಳುವಂತೆ ನಿರ್ದೇಶಿಸಿತ್ತು. ಆದರೆ ಅಂದು ಕೂಡ ಭೂಷಣ್ ಕ್ಷಮೆಯಾಚಿಸಲಿಲ್ಲ.

“ನನ್ನ ಟ್ವೀಟ್‌ಗಳು ನನ್ನ ನಂಬಿಕೆಯನ್ನು ಪ್ರತಿನಿಧಿಸುತ್ತವೆ. ಷರತ್ತುಬದ್ಧ ಅಥವಾ ಬೇಷರತ್ತಾದ ಕ್ಷಮೆಯು ಈ ನಂಬಿಕೆಗಳಿಗೆ ಅಪ್ರಾಮಾಣಿಕ ಎಂದು ಭಾವಿಸುತ್ತೆನೆ. ಯಾವುದೇ ಕ್ಷಮೆಯಾಚನೆಯು ನ್ಯಾಯಾಲಯವು ಹೇಳಿದಂತೆ ಕೇವಲ ಪ್ರಚೋದನೆಯಾಗಿರಬಾರದು. ಅದು ಪ್ರಾಮಾಣಿಕವಾಗಿರಬೇಕು. ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ” ಎಂದು ಭೂಷಣ್ ನುಡಿದಿದ್ದರು.

ಇದನ್ನೂ ಓದಿ; ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಆಗಸ್ಟ್ 25ರಂದು ಮನವಿ ಮಾಡಿದ್ದರು. ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣಮುರಾರಿಯವರಿದ್ದ ಪೀಠದ ಎದುರು ಭೂಷಣ್ ಪರವಾಗಿ ಹಿರಿಯ ವಕೀಲರಾದ ದುಷ್ಯಂತ್ ಧವೆ ಮತ್ತು ರಾಜೀವ್ ಧವನ್ ವಾದಿಸಿದ್ದರು.


ಇದನ್ನೂ ಓದಿ: ಬುಡ ಅಲ್ಲಾಡಿಸುತ್ತಿರುವ ಭೂಷಣ್ ಟ್ವೀಟ್ಸ್ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....