Homeರಾಷ್ಟ್ರೀಯರಸ್ತೆ ಗಲಾಟೆಯಲ್ಲಿ ಕೊಲೆ: 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್; ನವಜೋತ್‌ ಸಿಂಗ್‌...

ರಸ್ತೆ ಗಲಾಟೆಯಲ್ಲಿ ಕೊಲೆ: 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್; ನವಜೋತ್‌ ಸಿಂಗ್‌ ಸಿಧು ಶರಣು

- Advertisement -
- Advertisement -

34 ವರ್ಷಗಳ ಹಿಂದೆ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಶುಕ್ರವಾರ ಪಂಜಾಬ್‌ನ ಪಟಿಯಾಲಾ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ. ಅನಾರೋಗ್ಯದ ಕಾರಣ ನೀಡಿದ ಅವರು ಶರಣಾಗಲು ಇನ್ನೂ ಕೆಲವು ವಾರಗಳ ಕಾಲಾವಕಾಶ ಕೋರಿದ್ದರು.

ಸಮಯಾವಕಾಶಕ್ಕಾಗಿ ಸುಪ್ರೀಂ ಕೋರ್ಟ್‌ನಲ್ಲಿ ನವಜೋತ್ ಸಿಧು ಪರ ಹಾಜರಾದ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರನ್ನು ಸಂಪರ್ಕಿಸಲು ಹೇಳಿದರು. ಆದರೆ ಇದನ್ನು ಮುಖ್ಯ ನ್ಯಾಯಮೂರ್ತಿಯ ಮುಂದೆ ಪ್ರಸ್ತಾಪಿಸಲು ಸಾಧ್ಯವಿಲ್ಲ ಎಂದು ಸಿದ್ದು ಅವರ ತಂಡ ಹೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುಪ್ರೀಂ ಆದೇಶದ ನಂತರ ಸಿಧು ಅವರು, ‘ಕಾನೂನಿಗೆ ತಲೆ ಬಾಗುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಪ್ರಕರಣದಲ್ಲಿ ಗುರುವಾರದಂದು ಸುಪ್ರೀಂ ಕೋರ್ಟ್ ಅವರಿಗೆ ಒಂದು ವರ್ಷದ ‘ಕಠಿಣ ಜೈಲು ಶಿಕ್ಷೆ’ ವಿಧಿಸಿದೆ.

ಸಿಧು ಅವರ ಸಮಯ ಕೋರಿಕೆಯನ್ನು ಪಂಜಾಬ್‌ ಸರ್ಕಾರವನ್ನು ಪ್ರತಿನಿಧಿಸುವ ವಕೀಲರು ವಿರೋಧಿಸಿದ್ದರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಧು ಪರ ವಕೀಲ ಅಭಿಷೇಕ್‌ ಸಿಂಘ್ವಿ, “ನಾನು ಶರಣಾಗುತ್ತೇನೆ ಎಂದು ಹೇಳುತ್ತಿದ್ದೇನೆ. ಸಮಯಾವಕಾಶ ನೀಡುವ ಮನವಿಯನ್ನು ಪರಿಗಣಿಸುವುದು ನಿಮ್ಮ ವಿವೇಚನೆಗೆ ಬಿಟ್ಟ ವಿಷಯವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಶೂಲವನ್ನು ನೀಡುತ್ತೇವೆ, ಪಡೆಯುತ್ತೇವೆ, ಬಳಸುತ್ತೇವೆ: ಪೊಲೀಸರ ಎದುರೇ ಬಜರಂಗದಳ ಕಾರ್ಯಕರ್ತರ ಘೋಷಣೆ 

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಖಾನ್ವಿಲ್ಕರ್, “ಔಪಚಾರಿಕ ಅರ್ಜಿಯನ್ನು ಇರಿಸಿ. ಈ ಬಗ್ಗೆ ನಾವು ನೋಡುತ್ತೇವೆ. ಅರ್ಜಿಯನ್ನು ಸಲ್ಲಿಸಿ ಮುಖ್ಯ ನ್ಯಾಯಮೂರ್ತಿಯ ಮುಂದೆ ಅದನ್ನು ನಮೂದಿಸಿ, ನಂತರ ನಾವು ನೋಡೋಣ” ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ

1988ರಲ್ಲಿ ನಡೆದ ರಸ್ತೆ ಗಲಾಟೆಯೊಂದರಲ್ಲಿ ಗುರುನಾಮ್ ಸಿಂಗ್ ಅವರನ್ನು ಮಾಜಿ ಕ್ರಿಕೆಟಿಗ ಸಿಧು ಮತ್ತು ಅವರ ಸ್ನೇಹಿತ ರೂಪಿಂದರ್ ಸಿಂಗ್ ಸಂಧು ಥಳಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಗುರುನಾಮ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಸಾವಿಗೀಡಾಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಸಿಧು ಅವರನ್ನು ಅಪರಾಧಿ ಎಂದು ತೀರ್ಪು ನೀಡಿ, 3 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆಯ ಪ್ರಮಾಣ ಮರು ಪರಿಶೀಲಿಸುವಂತೆ ಕೋರಿ ಸಿಧು ಅವರು ಸುಪ್ರೀಂ ಮೆಟ್ಟಿಲೇರಿದ್ದರು.

ಸಿಧು ಅವರ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸ್ವಯಂ ಪ್ರೇರಣೆಯಿಂದ ನೋವುಂಟು ಮಾಡಿದ ಪ್ರಕರಣ ಎಂದು ಪರಿಗಣಿಸಿ ಸಿಧು ಅವರಿಗೆ 3 ವರ್ಷಗಳ ಜೈಲು ಶಿಕ್ಷೆಯ ಬದಲಾಗಿ 1000 ರೂ. ದಂಡ ವಿಧಿಸಿ ಮೇ 2018ರಲ್ಲಿ ತೀರ್ಪು ನೀಡಿತ್ತು.

ಇದನ್ನೂ ಓದಿ: ‘ಕರ್ನಾಟಕ ಹೈಕೋರ್ಟ್‌ನಲ್ಲೇ ನಮಾಜ್’ ಎಂಬ ದ್ವೇಷ ಹರಡುವ ವಿಡಿಯೋ ಪ್ರಸಾರ: ಬಲಪಂಥೀಯ ಸಂವಾದ ಯೂಟ್ಯೂಬ್ ಚಾನೆಲ್‌ ಮೇಲೆ FIR

ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ವಿರುದ್ಧ ಮೃತ ಗುರುನಾಮ್ ಸಿಂಗ್ ಅವರ ಪುತ್ರ ಸೆಪ್ಟೆಂಬರ್ 2018ರಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಮರುಪರಿಶೀಲೀಸಿದ ಸುಪ್ರೀಂ ಕೋರ್ಟ್‌, 1 ವರ್ಷದ ಜೈಲು ಶಿಕ್ಷೆ ವಿಧಿಸಿ ಗುರುವಾರು ತೀರ್ಪು ನೀಡಿದೆ.

ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ ನಂತರ ಸಿಧು ಅವರು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...