Homeಮುಖಪುಟಪೆಗಾಸಸ್ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ಪೆಗಾಸಸ್ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ಬೇಹುಗಾರಿಕೆ ಆರೋಪಗಳು ಗಂಭೀರವಾಗಿದ್ದು, ಸತ್ಯಾಂಶ ಹೊರಬೀಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂಚಿಸಿದ್ದಾರೆ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತನ್ನ ದೇಶದ ನಾಗರಿಕರ ಮೇಲೆ ಬೇಹುಗಾರಿಕೆ ಮಾಡಲು ಇಸ್ರೇಲಿ ಸ್ಪೈವೇರ್‌ ಪೆಗಾಸಸ್ ಅನ್ನು ಬಳಸಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂಕೋರ್ಟ್‌ ಬುಧವಾರದಂದು ಸ್ವತಂತ್ರ ತಜ್ಞ ತಾಂತ್ರಿಕ ಸಮಿತಿಯನ್ನು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಆರ್.ವಿ. ರವೀಂದ್ರನ್ ಮೇಲ್ವಿಚಾರಣೆಯಲ್ಲಿ ನೇಮಕ ಮಾಡಿದೆ.

ಬೇಹುಗಾರಿಕೆ ಆರೋಪಗಳು ಗಂಭೀರವಾಗಿದ್ದು, ಸತ್ಯಾಂಶ ಹೊರಬೀಳಬೇಕು ಎಂದು ಸೂಚಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ತನ್ನ ವರದಿಯನ್ನು ತ್ವರಿತವಾಗಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಎಂಟು ವಾರಗಳ ನಂತರ ಮುಂದೂಡಿದೆ.

ಇದನ್ನೂ ಓದಿ: 25 ಕೋಟಿ ರೂ.ಗೆ ಪೆಗಾಸಸ್‌ ಖರೀದಿಸುವಂತೆ ನನಗೆ ಪ್ರಸ್ತಾಪ ಬಂದಿತ್ತು: ಮಮತಾ ಬ್ಯಾನರ್ಜಿ

ನ್ಯಾಯಮೂರ್ತಿ ರವೀಂದ್ರನ್ ಅವರು ತಾಂತ್ರಿಕ ಸಮಿತಿಯ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ನೋಡಿಕೊಳ್ಳಲಿದ್ದು, ಮಾಜಿ IPS ಅಧಿಕಾರಿ (1976 ಬ್ಯಾಚ್) ಅಲೋಕ್ ಜೋಶಿ ಅವರಿಗೆ ಸಹಾಯ ಮಾಡಲಿದ್ದಾರೆ. ಉಪ ಸಮಿತಿಯ ಅಧ್ಯಕ್ಷರಾಗಿ  ಡಾ. ಸಂದೀಪ್ ಒಬೆರಾಯ್ (ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸ್ಟ್ಯಾಂಡರ್ಡೈಸೇಶನ್/ಇಂಟರ್ನ್ಯಾಷನಲ್ ಎಲೆಕ್ಟ್ರೋ-ಟೆಕ್ನಿಕಲ್ ಕಮಿಷನ್/ಜಾಯಿಂಟ್ ಟೆಕ್ನಿಕಲ್ ಸಮಿತಿ) ಅವರು ಇರಲಿದ್ದಾರೆ.

ತಾಂತ್ರಿಕ ಸಮಿತಿಯಲ್ಲಿ ಮೂವರು ಸದಸ್ಯರಿದ್ದಾರೆ. ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ಫೊರೆನ್ಸಿಕ್ಸ್ ಪ್ರೊಫೆಸರ್‌‌ ಮತ್ತು ಗುಜರಾತ್‌ ಗಾಂಧಿನಗರದ ನ್ಯಾಷನಲ್ ಫೋರೆನ್ಸಿಕ್ ಸೈನ್ಸಸ್ ವಿಶ್ವವಿದ್ಯಾಲಯದ ಡೀನ್‌ ಆಗಿರುವ ಡಾ. ನವೀನ್ ಕುಮಾರ್ ಚೌಧರಿ, ಸ್ಕೂಲ್ ಆಫ್ ಇಂಜಿನಿಯರಿಂಗ್ ಪ್ರೊಫೆಸರ್‌ ಮತ್ತು ಕೇರಳ ಅಮೃತಪುರಿಯ ಅಮೃತ ವಿಶ್ವ ವಿದ್ಯಾಪೀಠಂನ ಡಾ. ಪ್ರಭಾಹರನ್ ಪಿ., ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ, ಮಹಾರಾಷ್ಟ್ರದ ಡಾ. ಅಶ್ವಿನ್ ಅನಿಲ್ ಗುಮಾಸ್ತೆ ಈ ಸಮಿತಿಯಲ್ಲಿ ಇರಲಿದ್ದಾರೆ.

ನ್ಯಾಯಾಲಯವು ಯಾವುದೆ ರಾಜಕೀಯ ವಿಚಾರದಲ್ಲಿ ಅಲೆದಾಡುವುದಿಲ್ಲ ಎಂದು ಹೇಳಿದ್ದು, ಜಗತ್ತಿನಾದ್ಯಂತ ಇತರ ದೇಶಗಳು ಪೆಗಾಸಸ್‌ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ಸತ್ಯವನ್ನು ತಿಳಿದುಕೊಳ್ಳುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾಗ, ಭಾರತ ಮಾತ್ರ ಮೌನವಾಗಿರಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಮುಖ್ಯ ನ್ಯಾಯಮೂರ್ತಿ ರಮಣ ಅವರು ನ್ಯಾಯಾಲಯದಲ್ಲಿ ಓದಿದ ಆದೇಶವು ಸಮಿತಿಯನ್ನು ರಚಿಸಲು ನ್ಯಾಯಾಲಯವನ್ನು ಒತ್ತಾಯಿಸಿದ ಹಲವಾರು ಕಾರಣಗಳನ್ನು ಉಲ್ಲೇಖಿಸಿದೆ. ಬೇಹುಗಾರಿಕೆಯಿಂದಾಗಿ ಸಾಮಾನ್ಯ ನಾಗರಿಕರ ಗೌಪ್ಯತೆ ಮತ್ತು ವಾಕ್ ಸ್ವಾತಂತ್ರ್ಯದ ಹಕ್ಕುಗಳ ಮೇಲೆ ವ್ಯಾಪಕ ಪ್ರಭಾವ ಬೀರಿದೆ ಎಂಬ ವರದಿಗಳು ಇವುಗಳಲ್ಲಿ ಸೇರಿವೆ. ಒಟ್ಟಾರೆಯಾಗಿ ನಾಗರಿಕರ ವೈಯಕ್ತಿಕ ಹಕ್ಕುಗಳ ಮೇಲೆ ಪೆಗಾಸಸ್ ಪರಿಣಾಮ ಬೀರಿದೆ ಎಂಬ ಆರೋಪಗಳನ್ನು ನಿರ್ಲಕ್ಷಿಸಿ ಸುಮ್ಮನೆ ನಿಲ್ಲಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಈ ಆರೋಪಗಳು ನಿಜವೋ ಅಲ್ಲವೋ ಎಂಬುದರ ಕುರಿತು ನ್ಯಾಯಾಲಯದಲ್ಲಿ ‘ಸ್ಪಷ್ಟ ನಿಲುವು’ ತೆಗೆದುಕೊಳ್ಳಲು ಸರ್ಕಾರವು ಹೇಗೆ ನಿರಾಕರಿಸಿತು ಎಂಬುದರ ಕುರಿತು ತನ್ನ ಆದೇಶದಲ್ಲಿ ನ್ಯಾಯಾಲಯವು ಹೈಲೈಟ್ ಮಾಡಿದೆ.

ಆರೋಪಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯವು ಮಾಡಿದ ಪುನರಾವರ್ತಿತ ಸಲಹೆಗಳು ಕೂಡಾ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಸರ್ಕಾರ ಸಲ್ಲಿಸಿರುವ ಎರಡು ಪುಟಗಳ ಅಫಿಡವಿಟ್ ಅಲ್ಲಿ ‘ಯಾವುದೇ ಹೊಳಹು ಇಲ್ಲ’ ಮತ್ತು ಹೆಚ್ಚೆಂದರೆ ‘ಅಸ್ಪಷ್ಟ ನಿರಾಕರಣೆ’ ಇದೆ. ಎರಡು ವರ್ಷಗಳ ಹಿಂದೆ ಪೆಗಾಸಸ್ ಬೇಹುಗಾರಿಕೆಯ ಮೊದಲ ಆರೋಪಗಳು ಕಾಣಿಸಿಕೊಂಡಾಗ ನ್ಯಾಯಾಲಯವು ಇದನ್ನು ಹೇಳಿದೆ.

ಇದನ್ನೂ ಓದಿ: ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

“ಭಾರತ ಸರ್ಕಾರವು ಆರೋಪಗಳನ್ನು ನಿರ್ದಿಷ್ಟವಾಗಿ ಯಾವುದೇ ನಿರಾಕರಣೆ ಮಾಡಿಲ್ಲ…ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದರೆ, ನ್ಯಾಯಾಲಯದ ಮೇಲೆ ಕಡಿಮೆ ಹೊರೆ ಇರುತ್ತಿತ್ತು” ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದಾರೆ.

ಪೆಗಾಸಸ್‌ ವಿಚಾರವನ್ನು ಬಹಿರಂಗಪಡಿಸುವುದು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ ಎಂಬ ಸರ್ಕಾರದ ಆತಂಕವನ್ನು ನ್ಯಾಯಾಲಯವು ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ರಮಣ ಅವರು, ನಾಗರಿಕರ ಸಾಂವಿಧಾನಿಕ ಹಕ್ಕುಗಳು ಅಪಾಯದಲ್ಲಿರುವಾಗ ರಾಷ್ಟ್ರೀಯ ಭದ್ರತೆಯ ಉಲ್ಲಂಘನೆಯ ವಿಚಾರವನ್ನು ಉಲ್ಲೇಖಿಸಿ ಬಚಾವಾಗಲು ಸಾಧ್ಯವಿಲ್ಲ ಎಂದು ಘೋಷಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಎನ್. ರಾಮ್ ಮತ್ತು ಶಶಿಕುಮಾರ್, ಎಡಿಟರ್ಸ್ ಗಿಲ್ಡ್ ಮತ್ತು ಬೇಹುಗಾರಿಕೆಗೆ ಬಲಿಯಾದ ವ್ಯಕ್ತಿಗಳು ಸೇರಿದಂತೆ ಹಲವು ಕಡೆಗಳಿಂದ ಸಲ್ಲಿಸಿದ ಅರ್ಜಿಗಳ ಆಧಾರದ ಮೇಲೆ ಈ ಆದೇಶ ಹೊರಬಿದ್ದಿದೆ.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...