Homeಮುಖಪುಟಪೆಗಾಸಸ್ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ಪೆಗಾಸಸ್ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ಬೇಹುಗಾರಿಕೆ ಆರೋಪಗಳು ಗಂಭೀರವಾಗಿದ್ದು, ಸತ್ಯಾಂಶ ಹೊರಬೀಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂಚಿಸಿದ್ದಾರೆ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತನ್ನ ದೇಶದ ನಾಗರಿಕರ ಮೇಲೆ ಬೇಹುಗಾರಿಕೆ ಮಾಡಲು ಇಸ್ರೇಲಿ ಸ್ಪೈವೇರ್‌ ಪೆಗಾಸಸ್ ಅನ್ನು ಬಳಸಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂಕೋರ್ಟ್‌ ಬುಧವಾರದಂದು ಸ್ವತಂತ್ರ ತಜ್ಞ ತಾಂತ್ರಿಕ ಸಮಿತಿಯನ್ನು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಆರ್.ವಿ. ರವೀಂದ್ರನ್ ಮೇಲ್ವಿಚಾರಣೆಯಲ್ಲಿ ನೇಮಕ ಮಾಡಿದೆ.

ಬೇಹುಗಾರಿಕೆ ಆರೋಪಗಳು ಗಂಭೀರವಾಗಿದ್ದು, ಸತ್ಯಾಂಶ ಹೊರಬೀಳಬೇಕು ಎಂದು ಸೂಚಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ತನ್ನ ವರದಿಯನ್ನು ತ್ವರಿತವಾಗಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಎಂಟು ವಾರಗಳ ನಂತರ ಮುಂದೂಡಿದೆ.

ಇದನ್ನೂ ಓದಿ: 25 ಕೋಟಿ ರೂ.ಗೆ ಪೆಗಾಸಸ್‌ ಖರೀದಿಸುವಂತೆ ನನಗೆ ಪ್ರಸ್ತಾಪ ಬಂದಿತ್ತು: ಮಮತಾ ಬ್ಯಾನರ್ಜಿ

ನ್ಯಾಯಮೂರ್ತಿ ರವೀಂದ್ರನ್ ಅವರು ತಾಂತ್ರಿಕ ಸಮಿತಿಯ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ನೋಡಿಕೊಳ್ಳಲಿದ್ದು, ಮಾಜಿ IPS ಅಧಿಕಾರಿ (1976 ಬ್ಯಾಚ್) ಅಲೋಕ್ ಜೋಶಿ ಅವರಿಗೆ ಸಹಾಯ ಮಾಡಲಿದ್ದಾರೆ. ಉಪ ಸಮಿತಿಯ ಅಧ್ಯಕ್ಷರಾಗಿ  ಡಾ. ಸಂದೀಪ್ ಒಬೆರಾಯ್ (ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸ್ಟ್ಯಾಂಡರ್ಡೈಸೇಶನ್/ಇಂಟರ್ನ್ಯಾಷನಲ್ ಎಲೆಕ್ಟ್ರೋ-ಟೆಕ್ನಿಕಲ್ ಕಮಿಷನ್/ಜಾಯಿಂಟ್ ಟೆಕ್ನಿಕಲ್ ಸಮಿತಿ) ಅವರು ಇರಲಿದ್ದಾರೆ.

ತಾಂತ್ರಿಕ ಸಮಿತಿಯಲ್ಲಿ ಮೂವರು ಸದಸ್ಯರಿದ್ದಾರೆ. ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ಫೊರೆನ್ಸಿಕ್ಸ್ ಪ್ರೊಫೆಸರ್‌‌ ಮತ್ತು ಗುಜರಾತ್‌ ಗಾಂಧಿನಗರದ ನ್ಯಾಷನಲ್ ಫೋರೆನ್ಸಿಕ್ ಸೈನ್ಸಸ್ ವಿಶ್ವವಿದ್ಯಾಲಯದ ಡೀನ್‌ ಆಗಿರುವ ಡಾ. ನವೀನ್ ಕುಮಾರ್ ಚೌಧರಿ, ಸ್ಕೂಲ್ ಆಫ್ ಇಂಜಿನಿಯರಿಂಗ್ ಪ್ರೊಫೆಸರ್‌ ಮತ್ತು ಕೇರಳ ಅಮೃತಪುರಿಯ ಅಮೃತ ವಿಶ್ವ ವಿದ್ಯಾಪೀಠಂನ ಡಾ. ಪ್ರಭಾಹರನ್ ಪಿ., ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ, ಮಹಾರಾಷ್ಟ್ರದ ಡಾ. ಅಶ್ವಿನ್ ಅನಿಲ್ ಗುಮಾಸ್ತೆ ಈ ಸಮಿತಿಯಲ್ಲಿ ಇರಲಿದ್ದಾರೆ.

ನ್ಯಾಯಾಲಯವು ಯಾವುದೆ ರಾಜಕೀಯ ವಿಚಾರದಲ್ಲಿ ಅಲೆದಾಡುವುದಿಲ್ಲ ಎಂದು ಹೇಳಿದ್ದು, ಜಗತ್ತಿನಾದ್ಯಂತ ಇತರ ದೇಶಗಳು ಪೆಗಾಸಸ್‌ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ಸತ್ಯವನ್ನು ತಿಳಿದುಕೊಳ್ಳುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾಗ, ಭಾರತ ಮಾತ್ರ ಮೌನವಾಗಿರಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಮುಖ್ಯ ನ್ಯಾಯಮೂರ್ತಿ ರಮಣ ಅವರು ನ್ಯಾಯಾಲಯದಲ್ಲಿ ಓದಿದ ಆದೇಶವು ಸಮಿತಿಯನ್ನು ರಚಿಸಲು ನ್ಯಾಯಾಲಯವನ್ನು ಒತ್ತಾಯಿಸಿದ ಹಲವಾರು ಕಾರಣಗಳನ್ನು ಉಲ್ಲೇಖಿಸಿದೆ. ಬೇಹುಗಾರಿಕೆಯಿಂದಾಗಿ ಸಾಮಾನ್ಯ ನಾಗರಿಕರ ಗೌಪ್ಯತೆ ಮತ್ತು ವಾಕ್ ಸ್ವಾತಂತ್ರ್ಯದ ಹಕ್ಕುಗಳ ಮೇಲೆ ವ್ಯಾಪಕ ಪ್ರಭಾವ ಬೀರಿದೆ ಎಂಬ ವರದಿಗಳು ಇವುಗಳಲ್ಲಿ ಸೇರಿವೆ. ಒಟ್ಟಾರೆಯಾಗಿ ನಾಗರಿಕರ ವೈಯಕ್ತಿಕ ಹಕ್ಕುಗಳ ಮೇಲೆ ಪೆಗಾಸಸ್ ಪರಿಣಾಮ ಬೀರಿದೆ ಎಂಬ ಆರೋಪಗಳನ್ನು ನಿರ್ಲಕ್ಷಿಸಿ ಸುಮ್ಮನೆ ನಿಲ್ಲಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಈ ಆರೋಪಗಳು ನಿಜವೋ ಅಲ್ಲವೋ ಎಂಬುದರ ಕುರಿತು ನ್ಯಾಯಾಲಯದಲ್ಲಿ ‘ಸ್ಪಷ್ಟ ನಿಲುವು’ ತೆಗೆದುಕೊಳ್ಳಲು ಸರ್ಕಾರವು ಹೇಗೆ ನಿರಾಕರಿಸಿತು ಎಂಬುದರ ಕುರಿತು ತನ್ನ ಆದೇಶದಲ್ಲಿ ನ್ಯಾಯಾಲಯವು ಹೈಲೈಟ್ ಮಾಡಿದೆ.

ಆರೋಪಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯವು ಮಾಡಿದ ಪುನರಾವರ್ತಿತ ಸಲಹೆಗಳು ಕೂಡಾ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಸರ್ಕಾರ ಸಲ್ಲಿಸಿರುವ ಎರಡು ಪುಟಗಳ ಅಫಿಡವಿಟ್ ಅಲ್ಲಿ ‘ಯಾವುದೇ ಹೊಳಹು ಇಲ್ಲ’ ಮತ್ತು ಹೆಚ್ಚೆಂದರೆ ‘ಅಸ್ಪಷ್ಟ ನಿರಾಕರಣೆ’ ಇದೆ. ಎರಡು ವರ್ಷಗಳ ಹಿಂದೆ ಪೆಗಾಸಸ್ ಬೇಹುಗಾರಿಕೆಯ ಮೊದಲ ಆರೋಪಗಳು ಕಾಣಿಸಿಕೊಂಡಾಗ ನ್ಯಾಯಾಲಯವು ಇದನ್ನು ಹೇಳಿದೆ.

ಇದನ್ನೂ ಓದಿ: ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

“ಭಾರತ ಸರ್ಕಾರವು ಆರೋಪಗಳನ್ನು ನಿರ್ದಿಷ್ಟವಾಗಿ ಯಾವುದೇ ನಿರಾಕರಣೆ ಮಾಡಿಲ್ಲ…ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದರೆ, ನ್ಯಾಯಾಲಯದ ಮೇಲೆ ಕಡಿಮೆ ಹೊರೆ ಇರುತ್ತಿತ್ತು” ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದಾರೆ.

ಪೆಗಾಸಸ್‌ ವಿಚಾರವನ್ನು ಬಹಿರಂಗಪಡಿಸುವುದು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ ಎಂಬ ಸರ್ಕಾರದ ಆತಂಕವನ್ನು ನ್ಯಾಯಾಲಯವು ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ರಮಣ ಅವರು, ನಾಗರಿಕರ ಸಾಂವಿಧಾನಿಕ ಹಕ್ಕುಗಳು ಅಪಾಯದಲ್ಲಿರುವಾಗ ರಾಷ್ಟ್ರೀಯ ಭದ್ರತೆಯ ಉಲ್ಲಂಘನೆಯ ವಿಚಾರವನ್ನು ಉಲ್ಲೇಖಿಸಿ ಬಚಾವಾಗಲು ಸಾಧ್ಯವಿಲ್ಲ ಎಂದು ಘೋಷಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಎನ್. ರಾಮ್ ಮತ್ತು ಶಶಿಕುಮಾರ್, ಎಡಿಟರ್ಸ್ ಗಿಲ್ಡ್ ಮತ್ತು ಬೇಹುಗಾರಿಕೆಗೆ ಬಲಿಯಾದ ವ್ಯಕ್ತಿಗಳು ಸೇರಿದಂತೆ ಹಲವು ಕಡೆಗಳಿಂದ ಸಲ್ಲಿಸಿದ ಅರ್ಜಿಗಳ ಆಧಾರದ ಮೇಲೆ ಈ ಆದೇಶ ಹೊರಬಿದ್ದಿದೆ.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...