Homeಮುಖಪುಟಪೆಗಾಸಸ್ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ಪೆಗಾಸಸ್ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ಬೇಹುಗಾರಿಕೆ ಆರೋಪಗಳು ಗಂಭೀರವಾಗಿದ್ದು, ಸತ್ಯಾಂಶ ಹೊರಬೀಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂಚಿಸಿದ್ದಾರೆ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತನ್ನ ದೇಶದ ನಾಗರಿಕರ ಮೇಲೆ ಬೇಹುಗಾರಿಕೆ ಮಾಡಲು ಇಸ್ರೇಲಿ ಸ್ಪೈವೇರ್‌ ಪೆಗಾಸಸ್ ಅನ್ನು ಬಳಸಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂಕೋರ್ಟ್‌ ಬುಧವಾರದಂದು ಸ್ವತಂತ್ರ ತಜ್ಞ ತಾಂತ್ರಿಕ ಸಮಿತಿಯನ್ನು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಆರ್.ವಿ. ರವೀಂದ್ರನ್ ಮೇಲ್ವಿಚಾರಣೆಯಲ್ಲಿ ನೇಮಕ ಮಾಡಿದೆ.

ಬೇಹುಗಾರಿಕೆ ಆರೋಪಗಳು ಗಂಭೀರವಾಗಿದ್ದು, ಸತ್ಯಾಂಶ ಹೊರಬೀಳಬೇಕು ಎಂದು ಸೂಚಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ತನ್ನ ವರದಿಯನ್ನು ತ್ವರಿತವಾಗಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಎಂಟು ವಾರಗಳ ನಂತರ ಮುಂದೂಡಿದೆ.

ಇದನ್ನೂ ಓದಿ: 25 ಕೋಟಿ ರೂ.ಗೆ ಪೆಗಾಸಸ್‌ ಖರೀದಿಸುವಂತೆ ನನಗೆ ಪ್ರಸ್ತಾಪ ಬಂದಿತ್ತು: ಮಮತಾ ಬ್ಯಾನರ್ಜಿ

ನ್ಯಾಯಮೂರ್ತಿ ರವೀಂದ್ರನ್ ಅವರು ತಾಂತ್ರಿಕ ಸಮಿತಿಯ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ನೋಡಿಕೊಳ್ಳಲಿದ್ದು, ಮಾಜಿ IPS ಅಧಿಕಾರಿ (1976 ಬ್ಯಾಚ್) ಅಲೋಕ್ ಜೋಶಿ ಅವರಿಗೆ ಸಹಾಯ ಮಾಡಲಿದ್ದಾರೆ. ಉಪ ಸಮಿತಿಯ ಅಧ್ಯಕ್ಷರಾಗಿ  ಡಾ. ಸಂದೀಪ್ ಒಬೆರಾಯ್ (ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸ್ಟ್ಯಾಂಡರ್ಡೈಸೇಶನ್/ಇಂಟರ್ನ್ಯಾಷನಲ್ ಎಲೆಕ್ಟ್ರೋ-ಟೆಕ್ನಿಕಲ್ ಕಮಿಷನ್/ಜಾಯಿಂಟ್ ಟೆಕ್ನಿಕಲ್ ಸಮಿತಿ) ಅವರು ಇರಲಿದ್ದಾರೆ.

ತಾಂತ್ರಿಕ ಸಮಿತಿಯಲ್ಲಿ ಮೂವರು ಸದಸ್ಯರಿದ್ದಾರೆ. ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ಫೊರೆನ್ಸಿಕ್ಸ್ ಪ್ರೊಫೆಸರ್‌‌ ಮತ್ತು ಗುಜರಾತ್‌ ಗಾಂಧಿನಗರದ ನ್ಯಾಷನಲ್ ಫೋರೆನ್ಸಿಕ್ ಸೈನ್ಸಸ್ ವಿಶ್ವವಿದ್ಯಾಲಯದ ಡೀನ್‌ ಆಗಿರುವ ಡಾ. ನವೀನ್ ಕುಮಾರ್ ಚೌಧರಿ, ಸ್ಕೂಲ್ ಆಫ್ ಇಂಜಿನಿಯರಿಂಗ್ ಪ್ರೊಫೆಸರ್‌ ಮತ್ತು ಕೇರಳ ಅಮೃತಪುರಿಯ ಅಮೃತ ವಿಶ್ವ ವಿದ್ಯಾಪೀಠಂನ ಡಾ. ಪ್ರಭಾಹರನ್ ಪಿ., ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ, ಮಹಾರಾಷ್ಟ್ರದ ಡಾ. ಅಶ್ವಿನ್ ಅನಿಲ್ ಗುಮಾಸ್ತೆ ಈ ಸಮಿತಿಯಲ್ಲಿ ಇರಲಿದ್ದಾರೆ.

ನ್ಯಾಯಾಲಯವು ಯಾವುದೆ ರಾಜಕೀಯ ವಿಚಾರದಲ್ಲಿ ಅಲೆದಾಡುವುದಿಲ್ಲ ಎಂದು ಹೇಳಿದ್ದು, ಜಗತ್ತಿನಾದ್ಯಂತ ಇತರ ದೇಶಗಳು ಪೆಗಾಸಸ್‌ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ಸತ್ಯವನ್ನು ತಿಳಿದುಕೊಳ್ಳುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾಗ, ಭಾರತ ಮಾತ್ರ ಮೌನವಾಗಿರಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಮುಖ್ಯ ನ್ಯಾಯಮೂರ್ತಿ ರಮಣ ಅವರು ನ್ಯಾಯಾಲಯದಲ್ಲಿ ಓದಿದ ಆದೇಶವು ಸಮಿತಿಯನ್ನು ರಚಿಸಲು ನ್ಯಾಯಾಲಯವನ್ನು ಒತ್ತಾಯಿಸಿದ ಹಲವಾರು ಕಾರಣಗಳನ್ನು ಉಲ್ಲೇಖಿಸಿದೆ. ಬೇಹುಗಾರಿಕೆಯಿಂದಾಗಿ ಸಾಮಾನ್ಯ ನಾಗರಿಕರ ಗೌಪ್ಯತೆ ಮತ್ತು ವಾಕ್ ಸ್ವಾತಂತ್ರ್ಯದ ಹಕ್ಕುಗಳ ಮೇಲೆ ವ್ಯಾಪಕ ಪ್ರಭಾವ ಬೀರಿದೆ ಎಂಬ ವರದಿಗಳು ಇವುಗಳಲ್ಲಿ ಸೇರಿವೆ. ಒಟ್ಟಾರೆಯಾಗಿ ನಾಗರಿಕರ ವೈಯಕ್ತಿಕ ಹಕ್ಕುಗಳ ಮೇಲೆ ಪೆಗಾಸಸ್ ಪರಿಣಾಮ ಬೀರಿದೆ ಎಂಬ ಆರೋಪಗಳನ್ನು ನಿರ್ಲಕ್ಷಿಸಿ ಸುಮ್ಮನೆ ನಿಲ್ಲಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಈ ಆರೋಪಗಳು ನಿಜವೋ ಅಲ್ಲವೋ ಎಂಬುದರ ಕುರಿತು ನ್ಯಾಯಾಲಯದಲ್ಲಿ ‘ಸ್ಪಷ್ಟ ನಿಲುವು’ ತೆಗೆದುಕೊಳ್ಳಲು ಸರ್ಕಾರವು ಹೇಗೆ ನಿರಾಕರಿಸಿತು ಎಂಬುದರ ಕುರಿತು ತನ್ನ ಆದೇಶದಲ್ಲಿ ನ್ಯಾಯಾಲಯವು ಹೈಲೈಟ್ ಮಾಡಿದೆ.

ಆರೋಪಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯವು ಮಾಡಿದ ಪುನರಾವರ್ತಿತ ಸಲಹೆಗಳು ಕೂಡಾ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಸರ್ಕಾರ ಸಲ್ಲಿಸಿರುವ ಎರಡು ಪುಟಗಳ ಅಫಿಡವಿಟ್ ಅಲ್ಲಿ ‘ಯಾವುದೇ ಹೊಳಹು ಇಲ್ಲ’ ಮತ್ತು ಹೆಚ್ಚೆಂದರೆ ‘ಅಸ್ಪಷ್ಟ ನಿರಾಕರಣೆ’ ಇದೆ. ಎರಡು ವರ್ಷಗಳ ಹಿಂದೆ ಪೆಗಾಸಸ್ ಬೇಹುಗಾರಿಕೆಯ ಮೊದಲ ಆರೋಪಗಳು ಕಾಣಿಸಿಕೊಂಡಾಗ ನ್ಯಾಯಾಲಯವು ಇದನ್ನು ಹೇಳಿದೆ.

ಇದನ್ನೂ ಓದಿ: ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

“ಭಾರತ ಸರ್ಕಾರವು ಆರೋಪಗಳನ್ನು ನಿರ್ದಿಷ್ಟವಾಗಿ ಯಾವುದೇ ನಿರಾಕರಣೆ ಮಾಡಿಲ್ಲ…ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದರೆ, ನ್ಯಾಯಾಲಯದ ಮೇಲೆ ಕಡಿಮೆ ಹೊರೆ ಇರುತ್ತಿತ್ತು” ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದಾರೆ.

ಪೆಗಾಸಸ್‌ ವಿಚಾರವನ್ನು ಬಹಿರಂಗಪಡಿಸುವುದು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ ಎಂಬ ಸರ್ಕಾರದ ಆತಂಕವನ್ನು ನ್ಯಾಯಾಲಯವು ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ರಮಣ ಅವರು, ನಾಗರಿಕರ ಸಾಂವಿಧಾನಿಕ ಹಕ್ಕುಗಳು ಅಪಾಯದಲ್ಲಿರುವಾಗ ರಾಷ್ಟ್ರೀಯ ಭದ್ರತೆಯ ಉಲ್ಲಂಘನೆಯ ವಿಚಾರವನ್ನು ಉಲ್ಲೇಖಿಸಿ ಬಚಾವಾಗಲು ಸಾಧ್ಯವಿಲ್ಲ ಎಂದು ಘೋಷಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಎನ್. ರಾಮ್ ಮತ್ತು ಶಶಿಕುಮಾರ್, ಎಡಿಟರ್ಸ್ ಗಿಲ್ಡ್ ಮತ್ತು ಬೇಹುಗಾರಿಕೆಗೆ ಬಲಿಯಾದ ವ್ಯಕ್ತಿಗಳು ಸೇರಿದಂತೆ ಹಲವು ಕಡೆಗಳಿಂದ ಸಲ್ಲಿಸಿದ ಅರ್ಜಿಗಳ ಆಧಾರದ ಮೇಲೆ ಈ ಆದೇಶ ಹೊರಬಿದ್ದಿದೆ.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...