Homeಮುಖಪುಟ"ಹೆಣ್ಣು ಮಕ್ಕಳು ಲೈಂಗಿಕ ಪ್ರಚೋದನೆ ನಿಯಂತ್ರಿಸಬೇಕು" : ಕಲ್ಕತ್ತಾ ಹೈಕೋರ್ಟ್‌ನ ವಿವಾದಾತ್ಮಕ ಆದೇಶ ರದ್ದು

“ಹೆಣ್ಣು ಮಕ್ಕಳು ಲೈಂಗಿಕ ಪ್ರಚೋದನೆ ನಿಯಂತ್ರಿಸಬೇಕು” : ಕಲ್ಕತ್ತಾ ಹೈಕೋರ್ಟ್‌ನ ವಿವಾದಾತ್ಮಕ ಆದೇಶ ರದ್ದು

- Advertisement -
- Advertisement -

‘ಹದಿಹರೆಯದ ಹೆಣ್ಣು ಮಕ್ಳಳು ತಮ್ಮ ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು’ ಎಂಬ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು (ಆ.20) ರದ್ದುಗೊಳಿಸಿದೆ.

‘ಹದಿಹರೆಯದವರ ಖಾಸಗಿತನದ ಹಕ್ಕು’ ಎಂಬ ಶೀರ್ಷಿಕೆಯ ಸ್ವಯಂ ಪ್ರೇರಿತ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿದೆ. ಈ ಪ್ರಕರಣ ಅಕ್ಟೋಬರ್ 18, 2023ರಂದು ಕಲ್ಕತ್ತಾ ಹೈಕೋರ್ಟ್ ನೀಡಿದ್ದ ವಿವಾದಾತ್ಮಕ ಆದೇಶಕ್ಕೆ ಸಂಬಂಧಿಸಿದೆ.

ಪ್ರೇಮ ಸಂಬಂಧ ಹೊಂದಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ 20 ವರ್ಷದ ಯುವಕನನ್ನು ಖುಲಾಸೆಗೊಳಿಸಿ ಅಕ್ಟೋಬರ್ 18, 2023ರಂದು ಕಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿತ್ತು. ಈ ವೇಳೆ ‘ಹದಿಹರೆಯದ ಹೆಣ್ಣು ಮಕ್ಳಳು ತಮ್ಮ ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು’ ಎಂದು ಹೇಳಿತ್ತು.

ಹದಿಹರೆಯದವರಲ್ಲಿ ಲೈಂಗಿಕತೆ ಸಾಮಾನ್ಯ. ಆದರೆ, ಅಂತಹ ಪ್ರಚೋದನೆ ವ್ಯಕ್ತಿಯ ಕ್ರಿಯೆಯ ಮೇಲೆ ಅವಲಂಬಿತವಾಗಿರುತ್ತದೆ. ಇದಕ್ಕೆ ಪುರುಷ ಮತ್ತು ಮಹಿಳೆ ಹೊರತಾಗಿಲ್ಲ. ಹದಿಹರೆಯದ ಹೆಣ್ಣು ಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು. ತಮ್ಮ ದೇಹದ ಸಮಗ್ರತೆ, ಘನತೆ ಮತ್ತು ಸ್ವಾಭಿಮಾನದ ಹಕ್ಕನ್ನು ಕಾಪಾಡುವುದು ಹೆಣ್ಣುಮಕ್ಕಳ ಕರ್ತವ್ಯ ಎಂದು ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್ ಮತ್ತು ಪಾರ್ಥಾ ಸಾರಥಿ ಅವರನ್ನೊಳಗೊಂಡ ಪೀಠ ಸೂಚಿಸಿತ್ತು.

ಈ ಆದೇಶವನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ಅತ್ಯಾಚಾರ ಆರೋಪಿಗೆ ಶಿಕ್ಷೆಯನ್ನು ಎತ್ತಿ ಹಿಡಿದಿದೆ ಎಂದು ತಿಳಿದು ಬಂದಿದೆ.

ಇಂದು ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಓಕಾ, ತೀರ್ಪುಗಳನ್ನು ಹೇಗೆ ಬರೆಯಬೇಕು ಎಂಬ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಪ್ರಕರಣದ ಸತ್ಯಾಸತ್ಯತೆಗಳಿಗೆ ಸಂಬಂಧಿಸಿದಂತೆ, ಪೋಕ್ಸೊ ಕಾಯ್ದೆಯ ಸೆಕ್ಷನ್ 6, ಸೆಕ್ಷನ್ 376(3) ಮತ್ತು 376(2)(ಎನ್) ಐಪಿಸಿ ಅಡಿಯಲ್ಲಿ ಆರೋಪಿಯ ಶಿಕ್ಷೆಯನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 30 ರಿಂದ 43 ರ ಜೊತೆಗೆ ಪೋಕ್ಸೋ ಕಾಯ್ದೆಯ ಸೆಕ್ಷನ್ 19 (6) ರ ನಿಬಂಧನೆಗಳನ್ನು ಜಾರಿಗೊಳಿಸಲು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಓಕಾ ಹೇಳಿದ್ದಾರೆ.

ಪ್ರಕರಣದಲ್ಲಿ ಸಂತ್ರಸ್ತರಿಗೆ ತಿಳುವಳಿಕೆಯುಳ್ಳ ಆಯ್ಕೆಯನ್ನು ತೆಗೆದುಕೊಳ್ಳಲು ಸಹಾಯ ಮಾಡಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ನ್ಯಾಯಮೂರ್ತಿ ಓಕಾ ತಿಳಿಸಿದ್ದಾರೆ.

ಇದನ್ನೂ ಓದಿ : ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ‘ರಾಷ್ಟ್ರೀಯ ಕಾರ್ಯಪಡೆ’ ರಚಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...