Homeಮುಖಪುಟ"ಹೆಣ್ಣು ಮಕ್ಕಳು ಲೈಂಗಿಕ ಪ್ರಚೋದನೆ ನಿಯಂತ್ರಿಸಬೇಕು" : ಕಲ್ಕತ್ತಾ ಹೈಕೋರ್ಟ್‌ನ ವಿವಾದಾತ್ಮಕ ಆದೇಶ ರದ್ದು

“ಹೆಣ್ಣು ಮಕ್ಕಳು ಲೈಂಗಿಕ ಪ್ರಚೋದನೆ ನಿಯಂತ್ರಿಸಬೇಕು” : ಕಲ್ಕತ್ತಾ ಹೈಕೋರ್ಟ್‌ನ ವಿವಾದಾತ್ಮಕ ಆದೇಶ ರದ್ದು

- Advertisement -
- Advertisement -

‘ಹದಿಹರೆಯದ ಹೆಣ್ಣು ಮಕ್ಳಳು ತಮ್ಮ ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು’ ಎಂಬ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು (ಆ.20) ರದ್ದುಗೊಳಿಸಿದೆ.

‘ಹದಿಹರೆಯದವರ ಖಾಸಗಿತನದ ಹಕ್ಕು’ ಎಂಬ ಶೀರ್ಷಿಕೆಯ ಸ್ವಯಂ ಪ್ರೇರಿತ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿದೆ. ಈ ಪ್ರಕರಣ ಅಕ್ಟೋಬರ್ 18, 2023ರಂದು ಕಲ್ಕತ್ತಾ ಹೈಕೋರ್ಟ್ ನೀಡಿದ್ದ ವಿವಾದಾತ್ಮಕ ಆದೇಶಕ್ಕೆ ಸಂಬಂಧಿಸಿದೆ.

ಪ್ರೇಮ ಸಂಬಂಧ ಹೊಂದಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ 20 ವರ್ಷದ ಯುವಕನನ್ನು ಖುಲಾಸೆಗೊಳಿಸಿ ಅಕ್ಟೋಬರ್ 18, 2023ರಂದು ಕಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿತ್ತು. ಈ ವೇಳೆ ‘ಹದಿಹರೆಯದ ಹೆಣ್ಣು ಮಕ್ಳಳು ತಮ್ಮ ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು’ ಎಂದು ಹೇಳಿತ್ತು.

ಹದಿಹರೆಯದವರಲ್ಲಿ ಲೈಂಗಿಕತೆ ಸಾಮಾನ್ಯ. ಆದರೆ, ಅಂತಹ ಪ್ರಚೋದನೆ ವ್ಯಕ್ತಿಯ ಕ್ರಿಯೆಯ ಮೇಲೆ ಅವಲಂಬಿತವಾಗಿರುತ್ತದೆ. ಇದಕ್ಕೆ ಪುರುಷ ಮತ್ತು ಮಹಿಳೆ ಹೊರತಾಗಿಲ್ಲ. ಹದಿಹರೆಯದ ಹೆಣ್ಣು ಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು. ತಮ್ಮ ದೇಹದ ಸಮಗ್ರತೆ, ಘನತೆ ಮತ್ತು ಸ್ವಾಭಿಮಾನದ ಹಕ್ಕನ್ನು ಕಾಪಾಡುವುದು ಹೆಣ್ಣುಮಕ್ಕಳ ಕರ್ತವ್ಯ ಎಂದು ನ್ಯಾಯಮೂರ್ತಿ ಚಿತ್ತ ರಂಜನ್ ದಾಸ್ ಮತ್ತು ಪಾರ್ಥಾ ಸಾರಥಿ ಅವರನ್ನೊಳಗೊಂಡ ಪೀಠ ಸೂಚಿಸಿತ್ತು.

ಈ ಆದೇಶವನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ಅತ್ಯಾಚಾರ ಆರೋಪಿಗೆ ಶಿಕ್ಷೆಯನ್ನು ಎತ್ತಿ ಹಿಡಿದಿದೆ ಎಂದು ತಿಳಿದು ಬಂದಿದೆ.

ಇಂದು ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಓಕಾ, ತೀರ್ಪುಗಳನ್ನು ಹೇಗೆ ಬರೆಯಬೇಕು ಎಂಬ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಪ್ರಕರಣದ ಸತ್ಯಾಸತ್ಯತೆಗಳಿಗೆ ಸಂಬಂಧಿಸಿದಂತೆ, ಪೋಕ್ಸೊ ಕಾಯ್ದೆಯ ಸೆಕ್ಷನ್ 6, ಸೆಕ್ಷನ್ 376(3) ಮತ್ತು 376(2)(ಎನ್) ಐಪಿಸಿ ಅಡಿಯಲ್ಲಿ ಆರೋಪಿಯ ಶಿಕ್ಷೆಯನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 30 ರಿಂದ 43 ರ ಜೊತೆಗೆ ಪೋಕ್ಸೋ ಕಾಯ್ದೆಯ ಸೆಕ್ಷನ್ 19 (6) ರ ನಿಬಂಧನೆಗಳನ್ನು ಜಾರಿಗೊಳಿಸಲು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಓಕಾ ಹೇಳಿದ್ದಾರೆ.

ಪ್ರಕರಣದಲ್ಲಿ ಸಂತ್ರಸ್ತರಿಗೆ ತಿಳುವಳಿಕೆಯುಳ್ಳ ಆಯ್ಕೆಯನ್ನು ತೆಗೆದುಕೊಳ್ಳಲು ಸಹಾಯ ಮಾಡಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ನ್ಯಾಯಮೂರ್ತಿ ಓಕಾ ತಿಳಿಸಿದ್ದಾರೆ.

ಇದನ್ನೂ ಓದಿ : ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ‘ರಾಷ್ಟ್ರೀಯ ಕಾರ್ಯಪಡೆ’ ರಚಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...