Homeಮುಖಪುಟಸಿಪಿಐ(ಎಂ) ಶಾಸಕ ಎ. ರಾಜಾ ಅನರ್ಹ ಪ್ರಕರಣ: ಕೇರಳ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸಿಪಿಐ(ಎಂ) ಶಾಸಕ ಎ. ರಾಜಾ ಅನರ್ಹ ಪ್ರಕರಣ: ಕೇರಳ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇಡುಕ್ಕಿ ಜಿಲ್ಲೆಯ ದೇವಿಕುಲಂ ವಿಧಾನಸಭಾ ಕ್ಷೇತ್ರದ ಸಿಪಿಐ(ಎಂ) ಶಾಸಕ ಎ. ರಾಜಾ ಅವರ ಆಯ್ಕೆಯನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಬದಿಗೆ ಸರಿಸಿದೆ.

ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಮಾರ್ಚ್ 23, 2023ರ ಕೇರಳ ಹೈಕೋರ್ಟ್ ಆದೇಶದ ವಿರುದ್ಧ ರಾಜಾ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದೆ.

ಹೈಕೋರ್ಟ್ ತೀರ್ಪು ಮಾತ್ರವಲ್ಲದೆ ಚುನಾವಣಾ ತಕರಾರು ಅರ್ಜಿಯನ್ನೂ ರದ್ದುಗೊಳಿಸಲಾಗಿದೆ. ಮೇಲ್ಮನವಿದಾರ (ಎ.ರಾಜಾ) ಪೂರ್ಣ ಅವಧಿಗೆ ಶಾಸನ ಸಭೆಯ ಸದಸ್ಯರಾಗಿ ಇರಲಿದ್ದು, ಅರ್ಹ ಸೌಲಭ್ಯಗಳನ್ನೆಲ್ಲ ಪಡೆಯಲಿದ್ದಾರೆ” ಎಂಬುವುದಾಗಿ ಸುಪ್ರೀಂ ಕೋರ್ಟ್ ಪೀಠ ಹೇಳಿದೆ ಎಂದು ವರದಿಯಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್ 26 ರಂದು ಸುಪ್ರೀಂ ಕೋರ್ಟ್ ರಾಜಾ ಅವರ ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು.

2021ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ರಾಜಾ ವಿರುದ್ದ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕ ಡಿ.ಕುಮಾರ್ ಅವರು ಚುನಾವಣಾ ತಕರಾರರು ಅರ್ಜಿ ಸಲ್ಲಿಸಿದ್ದರು. ರಾಜಾ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಮೀಸಲಾಗಿರುವ ದೇವಿಕುಲಂ ಕ್ಷೇತ್ರದಿಂದ ಸ್ಪರ್ಧಿಸಲು ಅರ್ಹರಲ್ಲ ಎಂದು ವಾದಿಸಿದ್ದರು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ರಾಜಾ ಮತ್ತು ಡಿ. ಕುಮಾರ್ ಪರ ಕ್ರಮವಾಗಿ ಹಿರಿಯ ವಕೀಲರಾದ ವಿ ಗಿರಿ ಮತ್ತು ನರೇಂದರ್ ಹೂಡಾ ಅವರ ವಾದಗಳನ್ನು ಆಲಿಸಿದೆ.

ಕೇರಳ ಹೈಕೋರ್ಟ್‌ನ ಮಾರ್ಚ್ 20,2023ರ ಆದೇಶದ ವಿರುದ್ಧ ರಾಜಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.

ಡಿ.ಕುಮಾರ್ ಅವರ ಅರ್ಜಿಗೆ ವಿರೋಧ ವ್ಯಕ್ತಪಡಿಸಿದ್ದ ರಾಜಾ ಅವರು, ತಾನು ಹಿಂದೂ ಧರ್ಮದ ಪಾರಾಯಣ ಸಮುದಾಯಕ್ಕೆ ಸೇರಿದವನು ಎಂದು ವಾದಿಸಿದ್ದರು. ಅದಕ್ಕೆ ದಾಖಲೆಯಾಗಿ ದೇವಿಕುಲಂ ತಹಶೀಲ್ದಾರ್ ನೀಡಿದ ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿದ್ದರು.

ತಾನು ಸಲ್ಲಿಸಿದ್ದ ನಾಮಪತ್ರಕ್ಕೆ ಕುಮಾರ್ ಸಲ್ಲಿಸಿದ ಆಕ್ಷೇಪಣೆಯನ್ನು ಚುನಾವಣಾಧಿಕಾರಿ ಕ್ರಮ ಬದ್ದವಾಗಿಯೇ ತಿರಸ್ಕರಿಸಿದ್ದಾರೆ ಎಂದಿದ್ದರು.

ತಾನು, ತನ್ನ ಹೆತ್ತವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿಲ್ಲ. ತಾನು ದೀಕ್ಷಾ ಸ್ನಾನವನ್ನೂ ಪಡೆದಿಲ್ಲ. ತನ್ನ ಪತ್ನಿಯೂ ಹಿಂದೂವಾಗಿದ್ದು, ನಮ್ಮ ವಿವಾಹವು ಸಾಂಪ್ರದಾಯಿಕ ದೀಪ ಬೆಳಗುವುದು ಮತ್ತು ಪತ್ನಿಯ ಕತ್ತಿಗೆ ತಾಳಿ ಕಟ್ಟುವುದು ಸೇರಿದಂತೆ ಹಿಂದೂ ವಿಧಿವಿಧಾನಗಳ ಪ್ರಕಾರ ನಡೆದಿದೆ ಎಂದು ರಾಜಾ ಹೇಳಿದ್ದರು.

ರಾಜಾ ಒಬ್ಬ ಕ್ರಿಶ್ಚಿಯನ್. ಇಡುಕ್ಕಿ ಜಿಲ್ಲೆಯ ಸಿಎಸ್ಐ ಚರ್ಚ್‌ನಲ್ಲಿ ಅವರು ದೀಕ್ಷಾಸ್ನಾನ ಪಡೆದಿದ್ದಾರೆ. ಅವರು ಎಸ್‌ಸಿ ಸಮುದಾಯಕ್ಕೆ ಸೇರಿದವರು ಎಂದು ಸಾಬೀತುಪಡಿಸಲು ನಕಲಿ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂದು ಕುಮಾರ್ ತನ್ನ ಅರ್ಜಿಯಲ್ಲಿ ಆರೋಪಿಸಿದ್ದರು.ಪಿ

2021ರ ಚುನಾವಣೆಯಲ್ಲಿ 7,848 ಮತಗಳ ಅಂತರದಿಂದ ರಾಜಾ ವಿರುದ್ದ ಸೋತಿದ್ದ ಕುಮಾರ್, ರಾಜಾ ಅವರ ಪತ್ನಿ ಕೂಡ ಕ್ರಿಶ್ಚಿಯನ್. ಅವರು ಕ್ರಿಶ್ಚಿಯನ್ ಧಾರ್ಮಿಕ ವಿಧಿಗಳಿಗೆ ಅನುಗುಣವಾಗಿ ಮದುವೆಯಾಗಿದ್ದಾರೆ ಎಂದು ಹೇಳಿಕೊಂಡಿದ್ದರು.

ಕುಮಾರ್ ಅವರ ಆರೋಪವನ್ನು ಪುರಸ್ಕರಿಸಿದ್ದ ಕೇರಳ ಹೈಕೋರ್ಟ್, ರಾಜಾ ಅವರು ತನ್ನ ಮದುವೆಯ ಕುರಿತ ಮಾಹಿತಿಯನ್ನು ಮುಚ್ಚಿಡಲು ಉದ್ದೇಶಪೂರ್ವಕ ಪ್ರಯತ್ನ ಮಾಡಿರುವುದು ಸ್ಪಷ್ಟವಾಗಿದೆ ಎಂದು ಹೇಳಿತ್ತು.

ರಾಜಾ ಮತ್ತು ಅವರ ಪತ್ನಿ ಮದುವೆಯ ವೇಳೆ ಧರಿಸಿದ್ದ ವಸ್ತ್ರ ಕ್ರಿಶ್ಚಿಯನ್ ವಿವಾಹದ ಸಂಕೇತವಾಗಿದೆ ಎಂದಿತ್ತು.

ರಾಜಾ ಅವರು ನಾಮಪತ್ರ ಸಲ್ಲಿಸುವ ಮೊದಲೇ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು. ನಾಮಪತ್ರ ಸಲ್ಲಿಕೆಗೆ ಬಹಳ ಹಿಂದೆಯೇ ಅವರು ಕ್ರಿಶ್ಚಿಯನ್ ಧರ್ಮವನ್ನು ಅನುಸರಿಸುತ್ತಿದ್ದರು ಎಂಬುದು ಅವರು ಸಲ್ಲಿಸಿರುವ ಕೆಲವು ದಾಖಲೆಗಳು ತೋರಿಸುತ್ತವೆ ಎಂದು ಹೈಕೋರ್ಟ್ ಹೇಳಿತ್ತು.

ಮತಾಂತರದ ನಂತರ, ಅವರು ಹಿಂದೂ ಧರ್ಮೀಯ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ಆ ದೃಷ್ಟಿಯಿಂದಲೂ, ಚುನಾವಣಾಧಿಕಾರಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕಿತ್ತು ಎಂದಿತ್ತು.

ಕೇರಳದಲ್ಲಿ ಹಿಂದೂ ಪಾರಾಯಣರನ್ನು ಎಸ್‌ಸಿ ಸಮುದಾಯ ಎಂದು ಘೋಷಿಸಿ 1950 ರಲ್ಲಿ ರಾಷ್ಟ್ರಪತಿಗಳು ಆದೇಶ ಹೊರಡಿಸುವ ಮೊದಲು, ತನ್ನ ಪೂರ್ವಜರು (ಅಜ್ಜ-ಅಜ್ಜಿ) ಕೇರಳಕ್ಕೆ ವಲಸೆ ಹೋಗಿದ್ದರು ಎಂಬುವುದನ್ನು ಸಾಭೀತುಪಡಿಸುವಲ್ಲಿ ರಾಜಾ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಹೈಕೋರ್ಟ್‌ ತಿಳಿಸಿತ್ತು.

“ಸಂಕ್ಷಿಪ್ತವಾಗಿ ಹೇಳುವುದಾದರೆ, ಎರಡೂ ಆಧಾರದ ಮೇಲೆ, ರಾಜಾ ಅವರು ಕೇರಳ ರಾಜ್ಯದೊಳಗಿನ ‘ಹಿಂದೂ ಪಾರಾಯಣ’ದ ಸಮುದಾಯದ ಸದಸ್ಯರಲ್ಲ ಮತ್ತು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ದೇವಿಕುಲಂ ಕ್ಷೇತ್ರದಿಂದ ಸ್ಪರ್ಧಿಸಲು ಅವರು ಅರ್ಹತೆ ಹೊಂದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಹೈಕೋರ್ಟ್ ಹೇಳಿತ್ತು.

ಆದ್ದರಿಂದ, 2021ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜಾ ಅವರ ಆಯ್ಕೆಯು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 98 ರ ಅಡಿಯಲ್ಲಿ ಅನೂರ್ಜಿತವಾಗಿದೆ ಎಂದು ಹೈಕೋರ್ಟ್ ಘೋಷಿಸಿತ್ತು. ಅಲ್ಲದೆ, ಕುಮಾರ್ ಅವರನ್ನು ಶಾಸಕ ಎಂದು ಘೋಷಿಸಲು ಸಾಧ್ಯವಿಲ್ಲ ಎಂದಿತ್ತು.

ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...

ದ್ವೇಷ ಭಾಷಣ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ, ಕಠಿಣ ಶಿಕ್ಷೆ ಪ್ರಸ್ತಾವನೆ

ಕರ್ನಾಟಕ ಸಚಿವ ಸಂಪುಟವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಯನ್ನು ಅಂಗೀಕರಿಸಿದೆ, ದ್ವೇಷ ಭಾಷಣಕ್ಕೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹50,000 ದಂಡವನ್ನು ವಿಧಿಸುವ ಕಠಿಣ ಶಿಕ್ಷೆಯ ಪ್ರಸ್ತಾವನೆಯನ್ನು ಈ...

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ...

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ...

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

"ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ" ಎಂದು ಕರ್ನಾಟಕ...

ಚಳಿಗಾಲದ ಅಧಿವೇಶನ: ಸಂಸತ್ತಿನ ಹೊರಗೆ ‘ವಾಯು ಮಾಲಿನ್ಯದ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

2025 ರ ಸಂಸತ್ತಿನ ಚಳಿಗಾಲದ ಅಧಿವೇಶನವು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ, ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ...

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....

ಕೇಂದ್ರ ಸರ್ಕಾರ ಗಣ್ಯರು ನಮ್ಮನ್ನು ಭೇಟಿ ಮಾಡುವುದನ್ನು ನಿರಾಕರಿಸುತ್ತದೆ: ಪುಟಿನ್ ಭಾರತ ಭೇಟಿಗೂ ಮುನ್ನ ರಾಹುಲ್ ಗಾಂಧಿ ಆರೋಪ

ವಿದೇಶಿ ನಾಯಕರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ, ಆದರೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ...