Homeಮುಖಪುಟಸಿಪಿಐ(ಎಂ) ಶಾಸಕ ಎ. ರಾಜಾ ಅನರ್ಹ ಪ್ರಕರಣ: ಕೇರಳ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸಿಪಿಐ(ಎಂ) ಶಾಸಕ ಎ. ರಾಜಾ ಅನರ್ಹ ಪ್ರಕರಣ: ಕೇರಳ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇಡುಕ್ಕಿ ಜಿಲ್ಲೆಯ ದೇವಿಕುಲಂ ವಿಧಾನಸಭಾ ಕ್ಷೇತ್ರದ ಸಿಪಿಐ(ಎಂ) ಶಾಸಕ ಎ. ರಾಜಾ ಅವರ ಆಯ್ಕೆಯನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಬದಿಗೆ ಸರಿಸಿದೆ.

ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಮಾರ್ಚ್ 23, 2023ರ ಕೇರಳ ಹೈಕೋರ್ಟ್ ಆದೇಶದ ವಿರುದ್ಧ ರಾಜಾ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದೆ.

ಹೈಕೋರ್ಟ್ ತೀರ್ಪು ಮಾತ್ರವಲ್ಲದೆ ಚುನಾವಣಾ ತಕರಾರು ಅರ್ಜಿಯನ್ನೂ ರದ್ದುಗೊಳಿಸಲಾಗಿದೆ. ಮೇಲ್ಮನವಿದಾರ (ಎ.ರಾಜಾ) ಪೂರ್ಣ ಅವಧಿಗೆ ಶಾಸನ ಸಭೆಯ ಸದಸ್ಯರಾಗಿ ಇರಲಿದ್ದು, ಅರ್ಹ ಸೌಲಭ್ಯಗಳನ್ನೆಲ್ಲ ಪಡೆಯಲಿದ್ದಾರೆ” ಎಂಬುವುದಾಗಿ ಸುಪ್ರೀಂ ಕೋರ್ಟ್ ಪೀಠ ಹೇಳಿದೆ ಎಂದು ವರದಿಯಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್ 26 ರಂದು ಸುಪ್ರೀಂ ಕೋರ್ಟ್ ರಾಜಾ ಅವರ ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು.

2021ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ರಾಜಾ ವಿರುದ್ದ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕ ಡಿ.ಕುಮಾರ್ ಅವರು ಚುನಾವಣಾ ತಕರಾರರು ಅರ್ಜಿ ಸಲ್ಲಿಸಿದ್ದರು. ರಾಜಾ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಮೀಸಲಾಗಿರುವ ದೇವಿಕುಲಂ ಕ್ಷೇತ್ರದಿಂದ ಸ್ಪರ್ಧಿಸಲು ಅರ್ಹರಲ್ಲ ಎಂದು ವಾದಿಸಿದ್ದರು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ರಾಜಾ ಮತ್ತು ಡಿ. ಕುಮಾರ್ ಪರ ಕ್ರಮವಾಗಿ ಹಿರಿಯ ವಕೀಲರಾದ ವಿ ಗಿರಿ ಮತ್ತು ನರೇಂದರ್ ಹೂಡಾ ಅವರ ವಾದಗಳನ್ನು ಆಲಿಸಿದೆ.

ಕೇರಳ ಹೈಕೋರ್ಟ್‌ನ ಮಾರ್ಚ್ 20,2023ರ ಆದೇಶದ ವಿರುದ್ಧ ರಾಜಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.

ಡಿ.ಕುಮಾರ್ ಅವರ ಅರ್ಜಿಗೆ ವಿರೋಧ ವ್ಯಕ್ತಪಡಿಸಿದ್ದ ರಾಜಾ ಅವರು, ತಾನು ಹಿಂದೂ ಧರ್ಮದ ಪಾರಾಯಣ ಸಮುದಾಯಕ್ಕೆ ಸೇರಿದವನು ಎಂದು ವಾದಿಸಿದ್ದರು. ಅದಕ್ಕೆ ದಾಖಲೆಯಾಗಿ ದೇವಿಕುಲಂ ತಹಶೀಲ್ದಾರ್ ನೀಡಿದ ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿದ್ದರು.

ತಾನು ಸಲ್ಲಿಸಿದ್ದ ನಾಮಪತ್ರಕ್ಕೆ ಕುಮಾರ್ ಸಲ್ಲಿಸಿದ ಆಕ್ಷೇಪಣೆಯನ್ನು ಚುನಾವಣಾಧಿಕಾರಿ ಕ್ರಮ ಬದ್ದವಾಗಿಯೇ ತಿರಸ್ಕರಿಸಿದ್ದಾರೆ ಎಂದಿದ್ದರು.

ತಾನು, ತನ್ನ ಹೆತ್ತವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿಲ್ಲ. ತಾನು ದೀಕ್ಷಾ ಸ್ನಾನವನ್ನೂ ಪಡೆದಿಲ್ಲ. ತನ್ನ ಪತ್ನಿಯೂ ಹಿಂದೂವಾಗಿದ್ದು, ನಮ್ಮ ವಿವಾಹವು ಸಾಂಪ್ರದಾಯಿಕ ದೀಪ ಬೆಳಗುವುದು ಮತ್ತು ಪತ್ನಿಯ ಕತ್ತಿಗೆ ತಾಳಿ ಕಟ್ಟುವುದು ಸೇರಿದಂತೆ ಹಿಂದೂ ವಿಧಿವಿಧಾನಗಳ ಪ್ರಕಾರ ನಡೆದಿದೆ ಎಂದು ರಾಜಾ ಹೇಳಿದ್ದರು.

ರಾಜಾ ಒಬ್ಬ ಕ್ರಿಶ್ಚಿಯನ್. ಇಡುಕ್ಕಿ ಜಿಲ್ಲೆಯ ಸಿಎಸ್ಐ ಚರ್ಚ್‌ನಲ್ಲಿ ಅವರು ದೀಕ್ಷಾಸ್ನಾನ ಪಡೆದಿದ್ದಾರೆ. ಅವರು ಎಸ್‌ಸಿ ಸಮುದಾಯಕ್ಕೆ ಸೇರಿದವರು ಎಂದು ಸಾಬೀತುಪಡಿಸಲು ನಕಲಿ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂದು ಕುಮಾರ್ ತನ್ನ ಅರ್ಜಿಯಲ್ಲಿ ಆರೋಪಿಸಿದ್ದರು.ಪಿ

2021ರ ಚುನಾವಣೆಯಲ್ಲಿ 7,848 ಮತಗಳ ಅಂತರದಿಂದ ರಾಜಾ ವಿರುದ್ದ ಸೋತಿದ್ದ ಕುಮಾರ್, ರಾಜಾ ಅವರ ಪತ್ನಿ ಕೂಡ ಕ್ರಿಶ್ಚಿಯನ್. ಅವರು ಕ್ರಿಶ್ಚಿಯನ್ ಧಾರ್ಮಿಕ ವಿಧಿಗಳಿಗೆ ಅನುಗುಣವಾಗಿ ಮದುವೆಯಾಗಿದ್ದಾರೆ ಎಂದು ಹೇಳಿಕೊಂಡಿದ್ದರು.

ಕುಮಾರ್ ಅವರ ಆರೋಪವನ್ನು ಪುರಸ್ಕರಿಸಿದ್ದ ಕೇರಳ ಹೈಕೋರ್ಟ್, ರಾಜಾ ಅವರು ತನ್ನ ಮದುವೆಯ ಕುರಿತ ಮಾಹಿತಿಯನ್ನು ಮುಚ್ಚಿಡಲು ಉದ್ದೇಶಪೂರ್ವಕ ಪ್ರಯತ್ನ ಮಾಡಿರುವುದು ಸ್ಪಷ್ಟವಾಗಿದೆ ಎಂದು ಹೇಳಿತ್ತು.

ರಾಜಾ ಮತ್ತು ಅವರ ಪತ್ನಿ ಮದುವೆಯ ವೇಳೆ ಧರಿಸಿದ್ದ ವಸ್ತ್ರ ಕ್ರಿಶ್ಚಿಯನ್ ವಿವಾಹದ ಸಂಕೇತವಾಗಿದೆ ಎಂದಿತ್ತು.

ರಾಜಾ ಅವರು ನಾಮಪತ್ರ ಸಲ್ಲಿಸುವ ಮೊದಲೇ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು. ನಾಮಪತ್ರ ಸಲ್ಲಿಕೆಗೆ ಬಹಳ ಹಿಂದೆಯೇ ಅವರು ಕ್ರಿಶ್ಚಿಯನ್ ಧರ್ಮವನ್ನು ಅನುಸರಿಸುತ್ತಿದ್ದರು ಎಂಬುದು ಅವರು ಸಲ್ಲಿಸಿರುವ ಕೆಲವು ದಾಖಲೆಗಳು ತೋರಿಸುತ್ತವೆ ಎಂದು ಹೈಕೋರ್ಟ್ ಹೇಳಿತ್ತು.

ಮತಾಂತರದ ನಂತರ, ಅವರು ಹಿಂದೂ ಧರ್ಮೀಯ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ಆ ದೃಷ್ಟಿಯಿಂದಲೂ, ಚುನಾವಣಾಧಿಕಾರಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕಿತ್ತು ಎಂದಿತ್ತು.

ಕೇರಳದಲ್ಲಿ ಹಿಂದೂ ಪಾರಾಯಣರನ್ನು ಎಸ್‌ಸಿ ಸಮುದಾಯ ಎಂದು ಘೋಷಿಸಿ 1950 ರಲ್ಲಿ ರಾಷ್ಟ್ರಪತಿಗಳು ಆದೇಶ ಹೊರಡಿಸುವ ಮೊದಲು, ತನ್ನ ಪೂರ್ವಜರು (ಅಜ್ಜ-ಅಜ್ಜಿ) ಕೇರಳಕ್ಕೆ ವಲಸೆ ಹೋಗಿದ್ದರು ಎಂಬುವುದನ್ನು ಸಾಭೀತುಪಡಿಸುವಲ್ಲಿ ರಾಜಾ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಹೈಕೋರ್ಟ್‌ ತಿಳಿಸಿತ್ತು.

“ಸಂಕ್ಷಿಪ್ತವಾಗಿ ಹೇಳುವುದಾದರೆ, ಎರಡೂ ಆಧಾರದ ಮೇಲೆ, ರಾಜಾ ಅವರು ಕೇರಳ ರಾಜ್ಯದೊಳಗಿನ ‘ಹಿಂದೂ ಪಾರಾಯಣ’ದ ಸಮುದಾಯದ ಸದಸ್ಯರಲ್ಲ ಮತ್ತು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ದೇವಿಕುಲಂ ಕ್ಷೇತ್ರದಿಂದ ಸ್ಪರ್ಧಿಸಲು ಅವರು ಅರ್ಹತೆ ಹೊಂದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಹೈಕೋರ್ಟ್ ಹೇಳಿತ್ತು.

ಆದ್ದರಿಂದ, 2021ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜಾ ಅವರ ಆಯ್ಕೆಯು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 98 ರ ಅಡಿಯಲ್ಲಿ ಅನೂರ್ಜಿತವಾಗಿದೆ ಎಂದು ಹೈಕೋರ್ಟ್ ಘೋಷಿಸಿತ್ತು. ಅಲ್ಲದೆ, ಕುಮಾರ್ ಅವರನ್ನು ಶಾಸಕ ಎಂದು ಘೋಷಿಸಲು ಸಾಧ್ಯವಿಲ್ಲ ಎಂದಿತ್ತು.

ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...