Homeಮುಖಪುಟಬ್ರಿಜ್‌ ಭೂಷಣ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕಿತ್ತು: ಜಸ್ಟಿಸ್‌ ಲೋಕೂರ್‌

ಬ್ರಿಜ್‌ ಭೂಷಣ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕಿತ್ತು: ಜಸ್ಟಿಸ್‌ ಲೋಕೂರ್‌

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರು ನಡೆಸುತ್ತಿರುವುದನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕಿತ್ತು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಹೇಳಿದ್ದಾರೆ.

ಓರ್ವ ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಹಿಳಾ ಕ್ರೀಡಾಪಟುಗಳು ನೀಡಿದ ದೂರಿನ ಅನ್ವಯ ಬ್ರಿಜ್ ಭೂಷಣ್ ವಿರುದ್ಧ ಪ್ರಕರಣ ದಾಖಲಾಗಿದೆ. ಲೈಂಗಿಕ ಕಿರುಕುಳ ನೀಡಿರುವ ಆರೋಪ ಬಂದ ಬಳಿಕ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರುವವರೆಗೂ ಎಫ್‌ಐಆರ್‌ ಆಗಿರಲಿಲ್ಲ. ಸಂತ್ರಸ್ತರು ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಹೀಗಾಗಿ ದೆಹಲಿ ಪೊಲೀಸರು ಏಪ್ರಿಲ್ 23 ರಂದು ಐಪಿಸಿ ಸೆಕ್ಷನ್‌ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಪೋಕ್ಸೋ ಕಾಯ್ದೆಯಡಿ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದರು. ಗಂಭೀರ ಆರೋಪಗಳ ಹೊರತಾಗಿಯೂ ಆತನನ್ನು ಈವರೆಗೆ ಬಂಧಿಸಿಲ್ಲ. ಎಫ್‌ಐಆರ್‌ ಆದ ಬಳಿಕ ಸುಪ್ರೀಂಕೋರ್ಟ್, ಕುಸ್ತಿಪಟುಗಳ ಅರ್ಜಿಯನ್ನು ವಿಲೇವಾರಿ ಮಾಡಿತ್ತು. “ಪ್ರಕರಣ ದಾಖಲಾಗಬೇಕೆಂಬ ಮನವಿ ಈಡೇರಿದೆ. ಸ್ಥಳೀಯ ಸಂಬಂಧಪಟ್ಟ ನ್ಯಾಯಾಲಯ ಪ್ರಕರಣವನ್ನು ಮುನ್ನಡೆಸುತ್ತದೆ” ಎಂದು ಸವೋಚ್ಚ ನ್ಯಾಯಾಲಯ ತಿಳಿಸಿತ್ತು.

“ಕುಸ್ತಿಪಟುಗಳ ಹೋರಾಟ: ಸಂಸ್ಥೆಗಳ ಹೊಣೆಗಾರಿಕೆ” ಕುರಿತು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ಯಾನೆಲ್ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿರುವ ನ್ಯಾಯಮೂರ್ತಿ ಲೋಕೂರ್, ಈ ಪ್ರಕರಣದಲ್ಲಿ ಪೊಲೀಸ್ ತನಿಖೆಯಲ್ಲಿನ ಲೋಪದೋಷಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರು ನಿರಾಕರಿಸಿದ್ದರಿಂದ ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ನ ಮೊರೆಹೋಗಿ ಬೀದಿಗಿಳಿಯಬೇಕಾಯಿತು ಎಂದು ಅವರು ತಿಳಿಸಿದ್ದಾರೆ.

“ಇದು ತೀವ್ರವಾದ ಲೈಂಗಿಕ ದೌರ್ಜನ್ಯದ ಪ್ರಕರಣವಾಗಿದ್ದರೂ, ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬವಾಯಿತು. ಇದನ್ನು ಗಮನದಲ್ಲಿಟ್ಟುಕೊಂಡು, ಬೆದರಿಕೆಗಳನ್ನು ಪರಿಗಣಿಸಿ, ಸುಪ್ರೀಂ ಕೋರ್ಟ್ ತನಿಖೆಯ ಮೇಲೆ ನಿಗಾ ಇಡಬೇಕು. ಆದ್ದರಿಂದ ಏನೂ ತಪ್ಪಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸುಪ್ರೀಂಕೋರ್ಟ್ ಈ ಹಿಂದೆಯೂ ಹಲವು ತನಿಖೆಗಳನ್ನು ಮೇಲ್ವಿಚಾರಣೆ ಮಾಡಿದೆ. ಯಾರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆಯೋ ಆ ವ್ಯಕ್ತಿಗಳು ದೋಷಿ ಎಂದು ನೋಡುವ ದೃಷ್ಟಿಕೋನದಿಂದ ಅಲ್ಲ, ಆದರೆ ಅಂತಹ ವಿಷಯಗಳಲ್ಲಿ ತಪ್ಪುಗಳಾಗದಂತೆ ನೋಡಿಕೊಳ್ಳಲು ಸುಪ್ರೀಂಕೋರ್ಟ್ ಮೇಲ್ವಿಚಾರಣೆ ನಡೆಸಿದೆ. ವಿಶೇಷವಾಗಿ ರಾಜಕೀಯವಾಗಿ ಉತ್ತಮ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಈ ವಿದ್ಯಮಾನಗಳು ನಡೆದಿವೆ” ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕುಸ್ತಿಪಟುಗಳಲ್ಲಿ ಒಬ್ಬರಾಗಿದ್ದಾರೆ. ರಾಯಿಟರ್ಸ್‌ಗೆ ನೀಡಿದ ಸಂದರ್ಶನದಲ್ಲಿ ಪೋಗಟ್‌, ಕುಸ್ತಿ ಫೆಡರೇಷನ್‌ ಅಧ್ಯಕ್ಷರ ವಿರುದ್ಧದ ಪೊಲೀಸ್ ತನಿಖೆಯ ನಿಧಾನಗತಿಯನ್ನು ಟೀಕಿಸಿದ ಕೆಲವು ದಿನಗಳ ನಂತರ ನಿವೃತ್ತಿ ನ್ಯಾಯಮೂರ್ತಿಯವರ ಹೇಳಿಕೆ ಹೊರಬಿದ್ದಿದೆ.

“ನಾನು ಪ್ರತಿಭಟಿಸಲು ಧೈರ್ಯವನ್ನು ತೋರಿದಾಗಿನಿಂದ ನಾನು ತುಂಬಾ ಅವಮಾನವನ್ನು ಅನುಭವಿಸಿದೆ” ಎಂದು ರಾಯಿಟರ್ಸ್‌ಗೆ ತಿಳಿಸಿದ್ದರು.

“ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೌನದಿಂದ ನೋವಾಗಿದೆ. ಯಾರೂ ನಮ್ಮ ಮಾತನ್ನು ಕೇಳುತ್ತಿಲ್ಲ ಎಂಬ ಅಂಶವು ನನ್ನನ್ನು ಮತ್ತು ಇತರರನ್ನು ಸಾರ್ವಜನಿಕ ಪ್ರತಿಭಟನೆಯತ್ತ ಕರೆತಂದಿತು. ಉನ್ನತ ಕ್ರೀಡಾಪಟುಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ದೇಶವು ತಿಳಿಯಬೇಕೆಂದು ನಾವು ಬಯಸುತ್ತೇವೆ” ಎಂದು ಪೋಗಟ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...