Homeಮುಖಪುಟಬ್ರಿಜ್‌ ಭೂಷಣ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕಿತ್ತು: ಜಸ್ಟಿಸ್‌ ಲೋಕೂರ್‌

ಬ್ರಿಜ್‌ ಭೂಷಣ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕಿತ್ತು: ಜಸ್ಟಿಸ್‌ ಲೋಕೂರ್‌

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರು ನಡೆಸುತ್ತಿರುವುದನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕಿತ್ತು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಹೇಳಿದ್ದಾರೆ.

ಓರ್ವ ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಹಿಳಾ ಕ್ರೀಡಾಪಟುಗಳು ನೀಡಿದ ದೂರಿನ ಅನ್ವಯ ಬ್ರಿಜ್ ಭೂಷಣ್ ವಿರುದ್ಧ ಪ್ರಕರಣ ದಾಖಲಾಗಿದೆ. ಲೈಂಗಿಕ ಕಿರುಕುಳ ನೀಡಿರುವ ಆರೋಪ ಬಂದ ಬಳಿಕ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರುವವರೆಗೂ ಎಫ್‌ಐಆರ್‌ ಆಗಿರಲಿಲ್ಲ. ಸಂತ್ರಸ್ತರು ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಹೀಗಾಗಿ ದೆಹಲಿ ಪೊಲೀಸರು ಏಪ್ರಿಲ್ 23 ರಂದು ಐಪಿಸಿ ಸೆಕ್ಷನ್‌ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಪೋಕ್ಸೋ ಕಾಯ್ದೆಯಡಿ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದರು. ಗಂಭೀರ ಆರೋಪಗಳ ಹೊರತಾಗಿಯೂ ಆತನನ್ನು ಈವರೆಗೆ ಬಂಧಿಸಿಲ್ಲ. ಎಫ್‌ಐಆರ್‌ ಆದ ಬಳಿಕ ಸುಪ್ರೀಂಕೋರ್ಟ್, ಕುಸ್ತಿಪಟುಗಳ ಅರ್ಜಿಯನ್ನು ವಿಲೇವಾರಿ ಮಾಡಿತ್ತು. “ಪ್ರಕರಣ ದಾಖಲಾಗಬೇಕೆಂಬ ಮನವಿ ಈಡೇರಿದೆ. ಸ್ಥಳೀಯ ಸಂಬಂಧಪಟ್ಟ ನ್ಯಾಯಾಲಯ ಪ್ರಕರಣವನ್ನು ಮುನ್ನಡೆಸುತ್ತದೆ” ಎಂದು ಸವೋಚ್ಚ ನ್ಯಾಯಾಲಯ ತಿಳಿಸಿತ್ತು.

“ಕುಸ್ತಿಪಟುಗಳ ಹೋರಾಟ: ಸಂಸ್ಥೆಗಳ ಹೊಣೆಗಾರಿಕೆ” ಕುರಿತು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ಯಾನೆಲ್ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿರುವ ನ್ಯಾಯಮೂರ್ತಿ ಲೋಕೂರ್, ಈ ಪ್ರಕರಣದಲ್ಲಿ ಪೊಲೀಸ್ ತನಿಖೆಯಲ್ಲಿನ ಲೋಪದೋಷಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರು ನಿರಾಕರಿಸಿದ್ದರಿಂದ ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ನ ಮೊರೆಹೋಗಿ ಬೀದಿಗಿಳಿಯಬೇಕಾಯಿತು ಎಂದು ಅವರು ತಿಳಿಸಿದ್ದಾರೆ.

“ಇದು ತೀವ್ರವಾದ ಲೈಂಗಿಕ ದೌರ್ಜನ್ಯದ ಪ್ರಕರಣವಾಗಿದ್ದರೂ, ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬವಾಯಿತು. ಇದನ್ನು ಗಮನದಲ್ಲಿಟ್ಟುಕೊಂಡು, ಬೆದರಿಕೆಗಳನ್ನು ಪರಿಗಣಿಸಿ, ಸುಪ್ರೀಂ ಕೋರ್ಟ್ ತನಿಖೆಯ ಮೇಲೆ ನಿಗಾ ಇಡಬೇಕು. ಆದ್ದರಿಂದ ಏನೂ ತಪ್ಪಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸುಪ್ರೀಂಕೋರ್ಟ್ ಈ ಹಿಂದೆಯೂ ಹಲವು ತನಿಖೆಗಳನ್ನು ಮೇಲ್ವಿಚಾರಣೆ ಮಾಡಿದೆ. ಯಾರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆಯೋ ಆ ವ್ಯಕ್ತಿಗಳು ದೋಷಿ ಎಂದು ನೋಡುವ ದೃಷ್ಟಿಕೋನದಿಂದ ಅಲ್ಲ, ಆದರೆ ಅಂತಹ ವಿಷಯಗಳಲ್ಲಿ ತಪ್ಪುಗಳಾಗದಂತೆ ನೋಡಿಕೊಳ್ಳಲು ಸುಪ್ರೀಂಕೋರ್ಟ್ ಮೇಲ್ವಿಚಾರಣೆ ನಡೆಸಿದೆ. ವಿಶೇಷವಾಗಿ ರಾಜಕೀಯವಾಗಿ ಉತ್ತಮ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಈ ವಿದ್ಯಮಾನಗಳು ನಡೆದಿವೆ” ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ಬಾಬ್ರಿ ಮಸೀದಿ ದ್ವಂಸ ಪ್ರಹಸನ’ ಪ್ರದರ್ಶನ

ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕುಸ್ತಿಪಟುಗಳಲ್ಲಿ ಒಬ್ಬರಾಗಿದ್ದಾರೆ. ರಾಯಿಟರ್ಸ್‌ಗೆ ನೀಡಿದ ಸಂದರ್ಶನದಲ್ಲಿ ಪೋಗಟ್‌, ಕುಸ್ತಿ ಫೆಡರೇಷನ್‌ ಅಧ್ಯಕ್ಷರ ವಿರುದ್ಧದ ಪೊಲೀಸ್ ತನಿಖೆಯ ನಿಧಾನಗತಿಯನ್ನು ಟೀಕಿಸಿದ ಕೆಲವು ದಿನಗಳ ನಂತರ ನಿವೃತ್ತಿ ನ್ಯಾಯಮೂರ್ತಿಯವರ ಹೇಳಿಕೆ ಹೊರಬಿದ್ದಿದೆ.

“ನಾನು ಪ್ರತಿಭಟಿಸಲು ಧೈರ್ಯವನ್ನು ತೋರಿದಾಗಿನಿಂದ ನಾನು ತುಂಬಾ ಅವಮಾನವನ್ನು ಅನುಭವಿಸಿದೆ” ಎಂದು ರಾಯಿಟರ್ಸ್‌ಗೆ ತಿಳಿಸಿದ್ದರು.

“ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೌನದಿಂದ ನೋವಾಗಿದೆ. ಯಾರೂ ನಮ್ಮ ಮಾತನ್ನು ಕೇಳುತ್ತಿಲ್ಲ ಎಂಬ ಅಂಶವು ನನ್ನನ್ನು ಮತ್ತು ಇತರರನ್ನು ಸಾರ್ವಜನಿಕ ಪ್ರತಿಭಟನೆಯತ್ತ ಕರೆತಂದಿತು. ಉನ್ನತ ಕ್ರೀಡಾಪಟುಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ದೇಶವು ತಿಳಿಯಬೇಕೆಂದು ನಾವು ಬಯಸುತ್ತೇವೆ” ಎಂದು ಪೋಗಟ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...