Homeಮುಖಪುಟಸಂಸದರು, ಶಾಸಕರ ವಿರುದ್ಧದ ತನಿಖೆ ವಿಳಂಬ: ತನಿಖಾ ಏಜೆನ್ಸಿಗಳಿಗೆ ಸುಪ್ರೀಂಕೋರ್ಟ್ ಛೀಮಾರಿ

ಸಂಸದರು, ಶಾಸಕರ ವಿರುದ್ಧದ ತನಿಖೆ ವಿಳಂಬ: ತನಿಖಾ ಏಜೆನ್ಸಿಗಳಿಗೆ ಸುಪ್ರೀಂಕೋರ್ಟ್ ಛೀಮಾರಿ

- Advertisement -
- Advertisement -

ಸಂಸದರು ಮತ್ತು ಶಾಸಕರ ವಿರುದ್ಧದ ತನಿಖೆಯಲ್ಲಿ ವಿಳಂಬವಾಗಿದೆ ಎಂದು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ತನಿಖಾ ಏಜೆನ್ಸಿಗಳಿಗೆ ಬುಧವಾರ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ.

ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳು 10-15 ವರ್ಷಗಳಿಂದ ಬಾಕಿ ಉಳಿದಿವೆ. ಇವುಗಳ ಕುರಿತು ಚಾರ್ಜ್‌ಶೀಟ್‌ಗಳನ್ನು ಏಕೆ ಸಲ್ಲಿಸಿಲ್ಲ ಎಂಬುದನ್ನು ಎಜೆನ್ಸಿಗಳು ವಿವರಿಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಕೇಳಿದ್ದಾರೆ.

ಜಾರಿ ನಿರ್ದೇಶನಾಲಯವು ಕೇವಲ ಆಸ್ತಿಗಳನ್ನು ಮಾತ್ರ ಪಟ್ಟಿ ಮಾಡಿದೆ. ಅದು ಬಿಟ್ಟು ಬೇರೆ ಏನನ್ನೂ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ತೀಕ್ಷ್ಣವಾಗಿ ಟೀಕಿಸಿದೆ.

“ಪ್ರಕರಣಗಳನ್ನು ಈ ರೀತಿ ಸ್ಥಗಿತಗೊಳಿಸಬೇಡಿ. ಚಾರ್ಜ್ ಶೀಟ್ ಸಲ್ಲಿಸಿ. ಜನರಿಗೆ ನ್ಯಾಯ ಒದಗಿಸಲು ತ್ವರಿತ ವಿಚಾರಣೆ ಅಗತ್ಯ” ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ರಮಣ ಆದೇಶಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರು ಎನ್‌ಡಿಎ ಪರೀಕ್ಷೆ ಬರೆಯಬಹುದು: ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು

“ನಾವು ಈ ತನಿಖಾ ಏಜೆನ್ಸಿಗಳ ವಿರುದ್ಧ ಏನನ್ನೂ ಹೇಳಲು ಬಯಸುವುದಿಲ್ಲ ಏಕೆಂದರೆ ನಾವು ಅವರನ್ನು ನಿರುತ್ಸಾಹಗೊಳಿಸಲು ಬಯಸುವುದಿಲ್ಲ. ಆದರೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಇದನ್ನು ಮಾತಾಡುವಂತೆ ಮಾಡುತ್ತಿದೆ” ಎಂದು ಹೇಳಿದ್ದಾರೆ.

ನ್ಯಾಯಾಲಯಕ್ಕೆ ಸಹಾಯ ಮಾಡುತ್ತಿರುವ ವಿಜಯ್ ಹನ್ಸಾರಿಯಾ, ಒಂದು ಪ್ರಕರಣವು 2030 ರಲ್ಲಿ ಮುಗಿಯುವ ನಿರೀಕ್ಷೆಯಿದೆ ಎಂದು ಹೇಳಿ ಟೀಕಿಸಿದ್ದಾರೆ.

ತನಿಖೆ ವಿಳಂಬಕ್ಕೆ ಏಜೆನ್ಸಿಗಳು ಯಾವುದೇ ಕಾರಣ ನೀಡಿಲ್ಲ ಎಂದು ನ್ಯಾಯಮೂರ್ತಿ ರಮಣ, ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರತಿಕ್ರಿಯಿಸಿದ್ದಾರೆ.

“ನಮ್ಮಂತೆಯೇ ತನಿಖಾ ಏಜೆನ್ಸಿಗಳು ಕೂಡ ಸಿಬ್ಬಂದಿ ಕೊರತೆಯಿಂದ ಬಳಲುತ್ತಿವೆ. ಕೇಸ್‌ಗಳು ದೊಡ್ಡದಿರಲಿ, ಸಣ್ಣದಿರಲಿ ಜನ ಸಿಬಿಐ ತನಿಖೆ ಮಾಡಲಿ ಎಂದು ಬಯಸುತ್ತಾರೆ. ಅವರಿಗೂ ನ್ಯಾಯಾಲಯಗಳಂತೆ ಹೊರೆ ಹೆಚ್ಚಾಗುತ್ತದೆ. ಆದರೂ ಕೂಡ ಕೆಲವು ಸಂದರ್ಭಗಳಲ್ಲಿ ಏಜೆನ್ಸಿಗಳು ವಿಶೇಷ ವಿಧಾನಗಳ ಮೂಲಕ ಹೋಗಬೇಕು ಮತ್ತು ಸಂಪನ್ಮೂಲಗಳ ಅಗತ್ಯವಿದೆ” ಎಂದಿದ್ದಾರೆ.

“ಆದರೆ, ನ್ಯಾಯಾಲಯಗಳು ಸಾಂಕ್ರಾಮಿಕ ರೋಗದಿಂದ ಬಾಗಿಲು ಹಾಕಿವೆ. ಆದರೆ ತನಿಖಾ ಸಂಸ್ಥೆಗಳಿಗೆ ಅಂತಹ ನಿಬಂಧನೆಗಳಿಲ್ಲ. ಅವರು ಏಕೆ ಅತ್ಯುತ್ತಮ ಪ್ರಯತ್ನ ಮಾಡುತ್ತಿಲ್ಲ..?” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆಗಳು ‘ಗಂಭೀರ’: ಸುಪ್ರೀಂಕೋರ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...