Homeಮುಖಪುಟಸಂಸದರು, ಶಾಸಕರ ವಿರುದ್ಧದ ತನಿಖೆ ವಿಳಂಬ: ತನಿಖಾ ಏಜೆನ್ಸಿಗಳಿಗೆ ಸುಪ್ರೀಂಕೋರ್ಟ್ ಛೀಮಾರಿ

ಸಂಸದರು, ಶಾಸಕರ ವಿರುದ್ಧದ ತನಿಖೆ ವಿಳಂಬ: ತನಿಖಾ ಏಜೆನ್ಸಿಗಳಿಗೆ ಸುಪ್ರೀಂಕೋರ್ಟ್ ಛೀಮಾರಿ

- Advertisement -
- Advertisement -

ಸಂಸದರು ಮತ್ತು ಶಾಸಕರ ವಿರುದ್ಧದ ತನಿಖೆಯಲ್ಲಿ ವಿಳಂಬವಾಗಿದೆ ಎಂದು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ತನಿಖಾ ಏಜೆನ್ಸಿಗಳಿಗೆ ಬುಧವಾರ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ.

ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳು 10-15 ವರ್ಷಗಳಿಂದ ಬಾಕಿ ಉಳಿದಿವೆ. ಇವುಗಳ ಕುರಿತು ಚಾರ್ಜ್‌ಶೀಟ್‌ಗಳನ್ನು ಏಕೆ ಸಲ್ಲಿಸಿಲ್ಲ ಎಂಬುದನ್ನು ಎಜೆನ್ಸಿಗಳು ವಿವರಿಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಕೇಳಿದ್ದಾರೆ.

ಜಾರಿ ನಿರ್ದೇಶನಾಲಯವು ಕೇವಲ ಆಸ್ತಿಗಳನ್ನು ಮಾತ್ರ ಪಟ್ಟಿ ಮಾಡಿದೆ. ಅದು ಬಿಟ್ಟು ಬೇರೆ ಏನನ್ನೂ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ತೀಕ್ಷ್ಣವಾಗಿ ಟೀಕಿಸಿದೆ.

“ಪ್ರಕರಣಗಳನ್ನು ಈ ರೀತಿ ಸ್ಥಗಿತಗೊಳಿಸಬೇಡಿ. ಚಾರ್ಜ್ ಶೀಟ್ ಸಲ್ಲಿಸಿ. ಜನರಿಗೆ ನ್ಯಾಯ ಒದಗಿಸಲು ತ್ವರಿತ ವಿಚಾರಣೆ ಅಗತ್ಯ” ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ರಮಣ ಆದೇಶಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರು ಎನ್‌ಡಿಎ ಪರೀಕ್ಷೆ ಬರೆಯಬಹುದು: ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು

“ನಾವು ಈ ತನಿಖಾ ಏಜೆನ್ಸಿಗಳ ವಿರುದ್ಧ ಏನನ್ನೂ ಹೇಳಲು ಬಯಸುವುದಿಲ್ಲ ಏಕೆಂದರೆ ನಾವು ಅವರನ್ನು ನಿರುತ್ಸಾಹಗೊಳಿಸಲು ಬಯಸುವುದಿಲ್ಲ. ಆದರೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಇದನ್ನು ಮಾತಾಡುವಂತೆ ಮಾಡುತ್ತಿದೆ” ಎಂದು ಹೇಳಿದ್ದಾರೆ.

ನ್ಯಾಯಾಲಯಕ್ಕೆ ಸಹಾಯ ಮಾಡುತ್ತಿರುವ ವಿಜಯ್ ಹನ್ಸಾರಿಯಾ, ಒಂದು ಪ್ರಕರಣವು 2030 ರಲ್ಲಿ ಮುಗಿಯುವ ನಿರೀಕ್ಷೆಯಿದೆ ಎಂದು ಹೇಳಿ ಟೀಕಿಸಿದ್ದಾರೆ.

ತನಿಖೆ ವಿಳಂಬಕ್ಕೆ ಏಜೆನ್ಸಿಗಳು ಯಾವುದೇ ಕಾರಣ ನೀಡಿಲ್ಲ ಎಂದು ನ್ಯಾಯಮೂರ್ತಿ ರಮಣ, ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರತಿಕ್ರಿಯಿಸಿದ್ದಾರೆ.

“ನಮ್ಮಂತೆಯೇ ತನಿಖಾ ಏಜೆನ್ಸಿಗಳು ಕೂಡ ಸಿಬ್ಬಂದಿ ಕೊರತೆಯಿಂದ ಬಳಲುತ್ತಿವೆ. ಕೇಸ್‌ಗಳು ದೊಡ್ಡದಿರಲಿ, ಸಣ್ಣದಿರಲಿ ಜನ ಸಿಬಿಐ ತನಿಖೆ ಮಾಡಲಿ ಎಂದು ಬಯಸುತ್ತಾರೆ. ಅವರಿಗೂ ನ್ಯಾಯಾಲಯಗಳಂತೆ ಹೊರೆ ಹೆಚ್ಚಾಗುತ್ತದೆ. ಆದರೂ ಕೂಡ ಕೆಲವು ಸಂದರ್ಭಗಳಲ್ಲಿ ಏಜೆನ್ಸಿಗಳು ವಿಶೇಷ ವಿಧಾನಗಳ ಮೂಲಕ ಹೋಗಬೇಕು ಮತ್ತು ಸಂಪನ್ಮೂಲಗಳ ಅಗತ್ಯವಿದೆ” ಎಂದಿದ್ದಾರೆ.

“ಆದರೆ, ನ್ಯಾಯಾಲಯಗಳು ಸಾಂಕ್ರಾಮಿಕ ರೋಗದಿಂದ ಬಾಗಿಲು ಹಾಕಿವೆ. ಆದರೆ ತನಿಖಾ ಸಂಸ್ಥೆಗಳಿಗೆ ಅಂತಹ ನಿಬಂಧನೆಗಳಿಲ್ಲ. ಅವರು ಏಕೆ ಅತ್ಯುತ್ತಮ ಪ್ರಯತ್ನ ಮಾಡುತ್ತಿಲ್ಲ..?” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆಗಳು ‘ಗಂಭೀರ’: ಸುಪ್ರೀಂಕೋರ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...