Homeಮುಖಪುಟನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತು ಅದರ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

“ದುಬೆ ಅವರ ಹೇಳಿಕೆಗಳು ಸಾರ್ವಜನಿಕರ ದೃಷ್ಟಿಯಲ್ಲಿ ನ್ಯಾಯಾಲಯಗಳ ಮೇಲಿನ ವಿಶ್ವಾಸಾರ್ಹತೆಯನ್ನು ಅಲುಗಾಡಿಸುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ನ್ಯಾಯಾಂಗದ ಅಧಿಕಾರವನ್ನು ದುರ್ಬಲಗೊಳಿಸುವ ಮತ್ತು ಕಾನೂನು ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಕುಗ್ಗಿಸುವ ಪ್ರಯತ್ನಗಳ ಬಗೆಗಿನ ದೊಡ್ಡ ಕಳವಳವನ್ನು ಇದು ಸೂಚಿಸುತ್ತದೆ” ಎಂದು ಮೇ 5ರಂದು ಹೊರಡಿಸಲಾದ ಆದೇಶದಲ್ಲಿ ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ ಸಂಜಯ್ ಕುಮಾರ್ ಅವರ ಪೀಠ ಹೇಳಿದೆ ಎಂದು barandbench.com ವರದಿ ಮಾಡಿದೆ.

“ಭಾರತದಲ್ಲಿ ನಡೆಯುತ್ತಿರುವ ಎಲ್ಲಾ ಅಂತರ್ಯುದ್ಧಗಳಿಗೆ ಮುಖ್ಯ ನ್ಯಾಯಮೂರ್ತಿ ಜವಾಬ್ದಾರರು ಎಂದು ಹೇಳುವ ಮೂಲಕ, ಸುಪ್ರೀಂ ಕೋರ್ಟ್‌ ಧಾರ್ಮಿಕ ಯುದ್ಧಗಳನ್ನು ಪ್ರಚೋದಿಸುತ್ತಿದೆ ಎಂಬರ್ಥದಲ್ಲಿ ದುಬೆ ಮಾತನಾಡಿದ್ದಾರೆ. ಇದು ಅವರ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ” ಎಂದು ನ್ಯಾಯಪೀಠ ಹೇಳಿದೆ.

ಆದಾಗ್ಯೂ, ಅರ್ಜಿದಾರರಾದ ವಿಶಾಲ್ ತಿವಾರಿ ಕೋರಿದಂತೆ ದುಬೆ ವಿರುದ್ಧ ಯಾವುದೇ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲು ನ್ಯಾಯಾಲಯ ನಿರಾಕರಿಸಿದೆ.

ನ್ಯಾಯಪೀಠವು ನ್ಯಾಯಾಂಗ ನಿಂದನೆ ಎಂದು ಪರಿಗಣಿಸದಿದ್ದರೂ, ದುಬೆ ಹೇಳಿಕೆಗಳು 1971ರ ನ್ಯಾಯಾಂಗದ ನಿಂದನೆ ಕಾಯ್ದೆಯ ಅಡಿಯಲ್ಲಿ ಒದಗಿಸಲಾದ ವಿನಾಯಿತಿಗಳ ಅಡಿಯಲ್ಲಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ ಎಂದು ವರದಿ ಹೇಳಿದೆ.

“ದುಬೆ ಅವರ ಹೇಳಿಕೆಗಳು ಸಾಂವಿಧಾನಿಕ ನ್ಯಾಯಾಲಯಗಳ ಪಾತ್ರ ಮತ್ತು ಸಂವಿಧಾನದ ಅಡಿಯಲ್ಲಿ ಅವುಗಳಿಗೆ ನೀಡಲಾದ ಕರ್ತವ್ಯಗಳು ಮತ್ತು ಬಾಧ್ಯತೆಗಳ ಬಗ್ಗೆ ಅಜ್ಞಾನವನ್ನು ತೋರಿಸುತ್ತವೆ” ಎಂದು ನ್ಯಾಯಾಲಯ ತಿಳಿಸಿದೆ.

“ನಿರ್ದಿಷ್ಟವಾಗಿ ಹೇಳುವುದಾದರೆ, ಯಾವುದೇ ದ್ವೇಷ ಭಾಷಣ ಮತ್ತು ಕೋಮು ದ್ವೇಷವನ್ನು ಹರಡುವ ಪ್ರಯತ್ನಗಳನ್ನು ಕಠಿಣವಾಗಿ ಎದುರಿಸಬೇಕು” ಎಂದಿದೆ.

“ಒಂದು ನಿರ್ದಿಷ್ಟ ಗುಂಪನ್ನು ದೂರವಿಡುವ ಅಥವಾ ಅವಮಾನಿಸುವ ಯಾವುದೇ ಪ್ರಯತ್ನವು ಕ್ರಿಮಿನಲ್ ಅಪರಾಧವಾಗಿದ್ದು, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಿ ಹೇಳಿದೆ.

ದೇಶದಲ್ಲಿ “ಅಂತರ್ಯುದ್ಧ ಉಂಟಾದರೆ” ಅದಕ್ಕೆ ಸಿಜೆಐ ಖನ್ನಾ ಅವರೇ ನೇರ ಕಾರಣ. ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳನ್ನು ಮುಚ್ಚಿ” ಎಂದು ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ಎಎನ್‌ಐ) ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ದುಬೆ ಹೇಳಿದ್ದರು. ವಕ್ಫ್ (ತಿದ್ದುಪಡಿ) ಕಾಯ್ದೆಗೆ ಸಿಜೆಐ ನೇತೃತ್ವದ ಪೀಠ ತಡೆಯಾಜ್ಞೆ ನೀಡಿದ ನಂತರ ಈ ಹೇಳಿಕೆಗಳನ್ನು ನೀಡಿದ್ದರು.

ವಕೀಲ ವಿಶಾಲ್ ತಿವಾರಿ ಅವರು ದುಬೆ ಹೇಳಿಕೆ ವಿರುದ್ದ ನ್ಯಾಯಾಲಯದ ಮೆಟ್ಟಿಲೇರಿದರು, ದುಬೆ ಅವರ ಸಂದರ್ಶನವು ನ್ಯಾಯಾಂಗ ಮತ್ತು ಸುಪ್ರೀಂ ಕೋರ್ಟ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಂದ ಕೂಡಿದೆ ಎಂದು ಆರೋಪಿಸಿದ್ದರು. ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕೆಂದು ತಿವಾರಿ ಕೋರಿದ್ದರು.

ಮಹಿಳೆಯ ಲೈಂಗಿಕ ಇತಿಹಾಸದ ಆಧಾರದ ಮೇಲೆ ಆಕೆಯ ಒಪ್ಪಿಗೆ ಊಹಿಸಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...